ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ

KannadaprabhaNewsNetwork |  
Published : May 23, 2025, 11:59 PM IST
ಫೋಟೋ 23ಪಿವಿಡಿ4ಪಾವಗಡ,ಬೆಂಗಳೂರು ವಿಧಾನ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಾಲೂಕಿನ ಜ್ವಲಂತ ಸಮಸ್ಯೆ ನಿವಾರಣೆಗೆ ಶಾಸಕ ಎಚ್‌.ವಿ.ವೆಂಕಟೇಶ್‌ ಮನವಿ ಪತ್ರ ಸಲ್ಲಿಸಿದರು.    | Kannada Prabha

ಸಾರಾಂಶ

ಬೆಂಗಳೂರು ವಿಧಾನ ಸೌಧದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಪಾವಗಡದ ಶಾಸಕ ಎಚ್‌.ವಿ.ವೆಂಕಟೇಶ್‌ ಭೇಟಿಯಾಗಿ ತಾಲೂಕಿನ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಮನವಿ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಪಾವಗಡ

ಬೆಂಗಳೂರು ವಿಧಾನ ಸೌಧದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಪಾವಗಡದ ಶಾಸಕ ಎಚ್‌.ವಿ.ವೆಂಕಟೇಶ್‌ ಭೇಟಿಯಾಗಿ ತಾಲೂಕಿನ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಮನವಿ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಅವರು ಇಲ್ಲಿನ ಸುದ್ದಿಗಾರರ ಜತೆ ಮಾತನಾಡಿ ಬೆಂಗಳೂರು ವಿಧಾನ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಇಲ್ಲಿನ ನಿರುದ್ಯೋಗ ಸಮಸ್ಯೆ ಸೇರಿದಂತೆ ತಾಲೂಕಿನ ಜ್ವಲಂತ ಕುರಿತು ಸಿಎಂ ಅವರ ಗಮನಕ್ಕೆ ತರುವ ಮೂಲಕ ಮನವಿ ಮಾಡಿದರು. ಇಲ್ಲಿನ ರೈತರ ನೀರಾವರಿ ಕೊಳವೆಬಾವಿಗಳ ಅಂತರ್‌ಜಲ ಹೆಚ್ಚಿಸುವ ಸಲುವಾಗಿ ಕೆರೆಗಳಿಗೆ ನೀರು ತುಂಬಿಸುವ ಎತ್ತಿನಹೊಳೆ ಯೋಜನೆ ವೇಗ ಹೆಚ್ಚಳ,ವಿವಿಧ ಯೋಜನೆಯ ಅನುದಾನ ಬಿಡುಗಡೆ ಸೇರಿದಂತೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೈಗಾರಿಕೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಎಂಜಿನಿಯರಿಂಗ್‌, ವಿವಿಧ ರೀತಿಯ ಕೌಶಲ್ಯ ತರಬೇತಿಯ ಡಿಪ್ಲಮೋ ಕೋರ್ಸ್‌ ಕಾಲೇಜುಗಳ ಮಂಜೂರಾತಿ ಹಾಗೂ ಇತರೆ ಬೇಡಿಕೆಗಳ ಪಟ್ಟಿ ಸಲ್ಲಿಸಿ ಮನವಿ ಮಾಡಿರುವುದಾಗಿ ಹೇಳಿದರು. ತಾಲೂಕಿನ ಜ್ವಲಂತ ಸಮಸ್ಯೆ ಕುರಿತು ಬೇಡಿಕೆ ನಿವಾರಣೆಗೆ ಸಿಎಂ ಸಿದ್ದರಾಮಯ್ಯ ಅವರು ಸಕಾರತ್ಮಕವಾಗಿ ಸ್ಪಂದಿಸಿದ್ದು ಪರಿಶೀಲಿಸಿ ಹಂತಹಂತವಾಗಿ ಬೇಡಿಕೆ ಈಡೇರಿಸುವ ಭರವಸೆ ವ್ಯಕ್ತಪಡಿಸಿರುವುದಾಗಿ ಅವರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಾಹೇಬ್ರರವರಿಗೆ ತಾಲೂಕಿನ ಜನತೆಯ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ