ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಚೆಕ್ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ

KannadaprabhaNewsNetwork |  
Published : Aug 08, 2025, 01:02 AM IST
ಬಳ್ಳಾರಿಯ ಬಾಪೂಜಿ ನಗರದಲ್ಲಿ ಈಚೆಗೆ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದ ಬಾಲಕ ವಿಕ್ಕಿ (3) ಕುಟುಂಬಸ್ಥರಿಗೆ ನಗರ ಶಾಸಕ ನಾರಾ ಭರತ್ ರೆಡ್ಡಿ ಮಹಾನಗರ ಪಾಲಿಕೆಯ ವತಿಯಿಂದ 5 ಲಕ್ಷ ರೂ.ಗಳ ಚೆಕ್ ವಿತರಿಸಿದರು. | Kannada Prabha

ಸಾರಾಂಶ

ಇತ್ತೀಚೆಗೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದ ಬಾಲಕನ ತೆರಳಿದ ನಗರ ಶಾಸಕ ನಾರಾ ಭರತ್ ರೆಡ್ಡಿ ಕುಟುಂಬಸ್ಥರಿಗೆ ಮಹಾನಗರ ಪಾಲಿಕೆಯಿಂದ ₹5 ಲಕ್ಷ ಚೆಕ್ ವಿತರಿಸಿದರು.

ಅಪಘಾತ ವಿಮೆ, ಸಿಎಂ ಪರಿಹಾರ ಧನ ಸೇರಿ ಒಟ್ಟು 13 ಲಕ್ಷ ರೂ.ಗಳ ಪರಿಹಾರಕ್ಕೆ ಕ್ರಮ

ಕನ್ನಡಪ್ರಭವಾರ್ತೆ ಬಳ್ಳಾರಿ

ಇತ್ತೀಚೆಗೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದ ಬಾಲಕನ ತೆರಳಿದ ನಗರ ಶಾಸಕ ನಾರಾ ಭರತ್ ರೆಡ್ಡಿ ಕುಟುಂಬಸ್ಥರಿಗೆ ಮಹಾನಗರ ಪಾಲಿಕೆಯಿಂದ ₹5 ಲಕ್ಷ ಚೆಕ್ ವಿತರಿಸಿದರು.

ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, ಮಹಾನಗರ ಪಾಲಿಕೆಯ ಕಸ ಸಂಗ್ರಹ ವಾಹನದ ಚಾಲಕನ ನಿರ್ಲಕ್ಷ್ಯದಿಂದ ಘಟನೆ ನಡೆದಿತ್ತು. ಬಾಲಕನ ಕುಟುಂಬಕ್ಕೆ ಪಾಲಿಕೆಯಿಂದ ₹5 ಲಕ್ಷ ಚೆಕ್ ಕೊಡುತ್ತಿದ್ದೇವೆ. ಅದೇ ರೀತಿ ಸಿಎಂ ಪರಿಹಾರ ಧನ ಅಡಿ ₹ 3 ಲಕ್ಷ ನೀಡಲಾಗುವುದು, ಅಪಘಾತ ವಿಮೆಯ ಪರಿಹಾರ ₹5 ಲಕ್ಷ ಒದಗಿಸಲು ಕ್ರಮ ಕೈಗೊಳ್ಳಲಾಗುವುದು, ಎಷ್ಟೇ ಪರಿಹಾರ ಕೊಟ್ಟರೂ ಹೋದ ಜೀವ ಬರುವುದಿಲ್ಲ, ಕುಟುಂಬಸ್ಥರಿಗೆ ಮಗುವಿನ ಸಾವಿನ ನೋವು ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದರು.

ಇದೇ ಸಂದರ್ಭ ಸ್ಥಳೀಯ ಮುಖಂಡ ಸತೀಶ್ ಎಂಬವರು ವೈಯಕ್ತಿಕವಾಗಿ ನೀಡಿದ ₹25 ಸಾವಿರ ಪರಿಹಾರವನ್ನು ಶಾಸಕ ನಾರಾ ಭರತ್ ರೆಡ್ಡಿ ನೀಡಿದರು.

ಮೃತ ಬಾಲಕನ ಕುಟುಂಬದ ಸದಸ್ಯರೊಬ್ಬರಿಗೆ ಮಹಾನಗರ ಪಾಲಿಕೆಯಲ್ಲಿ ಉದ್ಯೋಗ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಅದ್ಧೂರಿ ಸಾಹಿತ್ಯ ಸಮ್ಮೇಳನ ಆಯೋಜನೆ:ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕ ನಾರಾ ಭರತ್ ರೆಡ್ಡಿ; ಆಂಧ್ರದ ಗಡಿ ಭಾಗದಲ್ಲಿರುವ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕನ್ನಡದ ಹಬ್ಬ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಏರ್ಪಡಿಸುವ ಅವಕಾಶ ನಮ್ಮದಾಗಲಿ ಅಂತಾನೇ ನಾವೆಲ್ಲ ಜನಪ್ರತಿನಿಧಿಗಳು ಪ್ರಯತ್ನ ಪಟ್ಟಿದ್ದೇವೆ, ಅದೇ ರೀತಿ ಸಮ್ಮೇಳನವನ್ನು ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಏರ್ಪಡಿಸಲಾಗುವುದೆಂದರು.

ಪಾಲಿಕೆಯ ಆಯುಕ್ತ ಖಲೀಲಸಾಬ, ಮುನಾಫ್ ಪಟೇಲ್, ಸದಸ್ಯರಾದ ಎಂ.ಪ್ರಭಂಜನಕುಮಾರ್, ಕಾಂಗ್ರೆಸ್ ಮುಖಂಡರಾದ ಶಿವರಾಜ್, ಸೂರಿ, ಹೊನ್ನಪ್ಪ, ಹಗರಿ ಗೋವಿಂದ, ಬಾಪೂಜಿ ನಗರ ವೆಂಕಟೇಶ, ಚಾನಾಳ್ ಶೇಖರ್, ಸತೀಶ್, ಪ್ರೇಮ್, ಭರತ್, ಬಾಲರಾಜು, ಬುಜ್ಜಿ ಮೊದಲಾದವರು ಹಾಜರಿದ್ದರು.

PREV

Recommended Stories

ಲಾಕ್‌ಡೌನ್‌ನಿಂದಾಗಿ ಪಂಚರ್ ಅಂಗಡಿ ಮುಚ್ಚಿ ಬೆಲ್ಲದ ಉದ್ಯಮಿಯಾದರು
ಇನ್ನೂ 2 ದಿನ ಮಳೆಯ ಅಬ್ಬರ: ಭಾನುವಾರದ ಬಳಿಕ ಇಳಿಮುಖ