ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಬುಧವಾರ ಚಿಕ್ಕಮಗಳೂರು ತಾಲೂಕಿನ ಲೊಕೋಪಯೋಗಿ ಇಲಾಖೆ ಎಇಇ ಮಲ್ಲಿಕಾರ್ಜುನ್ ಮತ್ತು ಎಇ ದರ್ಶನ್, ಮೂಡಿಗೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧಿಕಾರಿ ಜಗದೀಶ್ ನಾಯಕ್ ಹಾಗೂ ಪ್ರೌಢ ಶಾಲೆ ಪ್ರಾಂಶುಪಾಲರೊಂದಿಗೆ ಸಭೆ ನಡೆಸಿದರು. ಈ ವೇಳೆ ಒಟ್ಟು ₹17.5 ಲಕ್ಷ ವೆಚ್ಚದಲ್ಲಿ ದುರಸ್ತಿ ಕಾಮಗಾರಿಗೆ ಕ್ರಿಯಾಯೋಜನೆ ಸಿದ್ಧಪಡಿಸ ಲಾಗಿದೆ. 10 ರಿಂದ 12 ಕೊಠಡಿಯಲ್ಲಿ ಹೆಂಚು, ಕಬ್ಬಿಣದ ಕಂಬಿ ಬದಲಾವಣೆ ಸೇರಿದಂತೆ ಮೊದಲಾದ ಕಾಮಗಾರಿ ನಡೆಸಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ವೇಳೆ ಮಾತನಾಡಿದ ಶಾಸಕಿ ನಯನಾ ಮೋಟಮ್ಮ, ಮಳೆಗಾಲ ಆರಂಭಕ್ಕೂ ಮೊದಲು ಕಾಮಗಾರಿ ನಡೆಸಬೇಕು. ಕಾಮ ಗಾರಿಯಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಬಾರದು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಂಡು ಕೆಲಸ ಮಾಡುವಂತೆ ನಿರ್ದೇಶಿಸಿದರು.---ಬಾಕ್ಸ್---ಇತರೆ ಶಾಲೆಗಳನ್ನು ಪರಿಶೀಲಿಸಿ ವರದಿ ನೀಡಿಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳ ದುರಸ್ತಿ ಕಾಮಗಾರಿ ಕುರಿತು ವರದಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಸಕಿ ನಯನಾ ಮೋಟಮ್ಮ ಸೂಚಿಸಿದ್ದಾರೆ. ವರದಿಯಲ್ಲಿ ತುರ್ತು ಕಾಮಗಾರಿ ಆಗಬೇಕಾದ ಶಾಲೆಗಳ ಪಟ್ಟಿ ಗುರುತಿಸಿ ವರದಿ ನೀಡುವಂತೆ ತಿಳಿಸಲಾಗಿದೆ.---ಬಾಕ್ಸ್---