
ರಾಮನಗರ: ಕ್ಷೇತ್ರದ ಜನರು ಸುಭಿಕ್ಷವಾಗಿರಲಿ, ಮಳೆ ಬೆಳೆಯಾಗಲಿ ಎಂದು ಸಂಕಲ್ಪ ಮಾಡಿ ನಗರದ 16 ದೇವತೆಗಳಿಗೆ ಮಡಿಲಕ್ಕಿ ಸೇವೆ ಅರ್ಪಿಸಿದ್ದೇನೆ ಎಂದು ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಹೇಳಿದರು.
ಹಿಂದೂ ಸಂಪ್ರದಾಯದಲ್ಲಿ ಆಷಾಢ, ಶ್ರಾವಣ ಹಾಗೂ ನವರಾತ್ರಿಯ ಸಮಯದಲ್ಲಿ ದೇವತೆಗಳಿಗೆ ಮಡಿಲಕ್ಕಿ ಕೊಡುವುದು ವಾಡಿಕೆ. ಹಾಗಾಗಿ ಕಳೆದ ಏಳು ವರ್ಷಗಳಿಂದ ನಾನು ಸತತವಾಗಿ ನಗರದ ಶ್ರೀ ಚಾಮುಂಡೇಶ್ವರಿ ಕರಗ ನಡೆಯುವ ಸಮ ಯದಲ್ಲಿ ನಗರದ ಎಲ್ಲ ದೇವತೆಗಳಿಗೆ ಮಡಿಲಕ್ಕಿ ಸೇವೆ ಮಾಡುತ್ತಾ ಬಂದಿದ್ದೇನೆ. ತಾಯಿ ಚಾಮುಂಡೇಶ್ವರಿ ಈ ಕ್ಷೇತ್ರದ ಜನರ ಕಷ್ಟ ಸುಖಗಳನ್ನು ಕೇಳಲು ನನಗೆ ಜವಾಬ್ದಾರಿ ನೀಡಿ ಆಶೀರ್ವಾದ ಸಹ ಮಾಡಿದ್ದು, ಆ ತಾಯಿಯ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಆಚರಣೆ ಮಾಡುತ್ತಿದ್ದೇನೆ ಎಂದರು.
ಶ್ರೀ ಚಾಮುಂಡೇಶ್ವರಿ ತಾಯಿ ಈ ನಾಡಿನ ಶಕ್ತಿದೇವತೆ ಆಗಿದ್ದು, ಹಿಂದಿನಿಂದಲೂ ಈ ತಾಯಿಯನ್ನು ನಂಬಿ ಪೂಜಿಸಿದವರನ್ನು ರಕ್ಷಣೆ ಮಾಡುತ್ತಾ ಪಟ್ಟಣದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವಂತೆ ನೋಡಿ ಕೊಂಡಿದ್ದಾಳೆ. ಆದ್ದರಿಂದಲೇ ರಾಮನಗರ ಮಣ್ಣಿಗೆ ವಿಶೇಷ ಸ್ಥಾನ, ಗೌರವ ಲಭಿಸಿದೆ ಎಂದು ಇಕ್ಬಾಲ್ ಹುಸೇನ್ ದೇವಿಯ ಮಹಿಮೆಯನ್ನು ಬಣ್ಣಿಸಿದರು.ಮಡಿಲಕ್ಕಿ ಸಮರ್ಪಣೆ:
ಈ ವೇಳೆ ಮಾಜಿ ಶಾಸಕ ಕೆ. ರಾಜು, ಜಿಪಂ ಮಾಜಿ ಅಧ್ಯಕ್ಷ ಕೆ. ರಾಜು, ತಾಪಂ ಮಾಜಿ ಅಧ್ಯಕ್ಷ ಪ್ರಾಣೇಶ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಸಿಎನ್ ಆರ್ ವೆಂಕಟೇಶ್, ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಅಧ್ಯಕ್ಷ ರೖಡ್ ನಾಗರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಪ್ರಭು, ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ ಗುರುವೇಗೌಡ, ಸದಸ್ಯೆ ಆಯಿಷಾ ಬಾನು, ಮುಖಂಡರಾದಷಮಂಚೇಗೌಡ,
ನಾನು ಅನ್ನೊದಿಲ್ಲ. ನಾವೆಲ್ಲರು ಸೇರಿ ಊರಹಬ್ಬ ಆಚರಿಸುತ್ತಿದ್ದೇವೆ. ವರ್ತಕರು, ಜನರಿಗೆ ತೊಂದರೆ ಕೊಡಬಾರದೆಂದು ಹೇಳಿದ್ದೆ. ಅದರಂತೆ ಯಾರ ಬಳಿಯೂ ಸಹಾಯಧನ ಕೇಳದೆ ಕರಗ ಮಹೋತ್ಸವ ಮಾಡುತ್ತಿದ್ದೇವೆ.
ಬಾಕ್ಸ್..............
- ಸೋಮವಾರ ಸಂಜೆ ಕೊತ್ತಿಪುರ ಮತ್ತು ಕೊಂಕಾಣಿದೊಡ್ಡಿ ಹಾಗೂ ಸೌಧೆ ವರ್ತಕರಿಂದ ಅಗ್ನಿಕೊಂಡಕ್ಕೆ ಎಳವಾರ.
- ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರರಿಂದ ದೇವಾಲಯದಲ್ಲಿ ವಿಶೇಷ ಪೂಜೆ .
- ಕಾಮಣ್ಣನಗುಡಿ ವೃತ್ತದಿಂದ ದೇವಾಲಯದವರೆಗೆ ಹೂವಿನ ಅಲಂಕೃತ ಚಿತ್ತಾರದ ಮೇಲೆ ಸಾಗುವ ಕರಗ ಬುಧವಾರ ಮುಂಜಾನೆ ದೇವಾಲಯದ ಮುಂಭಾಗ ಅಗ್ನಿಕೊಂಡ ಪ್ರವೇಶ
2ಕೆಆರ್ ಎಂಎನ್ .ಜೆಪಿಜಿ1.ರಾಮನಗರದಲ್ಲಿ ನಡೆಯುತ್ತಿರುವ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಪ್ರಯುಕ್ತ ದೇವಾಲಯಗಳಿಗೆ ಶಾಸಕ ಇಕ್ಬಾಲ್ ಹುಸೇನ್ ರವರು ಮಡಿಲಕ್ಕಿ ಸಮರ್ಪಿಸಿದರು.
2.ರಾಮನಗರದಲ್ಲಿ ನಡೆಯುತ್ತಿರುವ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಭಿತ್ತಿಪತ್ರವನ್ನು ಶಾಸಕ ಇಕ್ಬಾಲ್ ಹುಸೇನ್ ಬಿಡುಗಡೆ ಮಾಡಿದರು.