ಕನ್ನಡಪ್ರಭ ವಾರ್ತೆ ಗುಡಿಬಂಡೆ
ತಾಲೂಕಿನ ಕಡೇಹಳ್ಳಿ ಗ್ರಾಮದಲ್ಲಿ ಕಡೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಕಟ್ಟಡ ನಿರ್ಮಾಣದ ಭೂಮಿಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಹಾಲಿಗೆ ₹2 ಕಡಿತ ಸರಿಯಲ್ಲಈ ಭಾಗದ ರೈತರು ಹೆಚ್ಚಾಗಿ ಹೈನುಗಾರಿಕೆಯನ್ನೇ ಅವಲಂಬಿಸಿದ್ದಾರೆ. ರೈತರೂ ಸಹ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಇತ್ತೀಚಿಗೆ ರೈತರು ಉತ್ಪಾದಿಸುವ ಹಾಲಿಗೆ 2 ರು.ಗಳ ಕಡಿತ ಮಾಡಿರುವುದು ಸರಿಯಲ್ಲ. ಇದರಿಂದ ರೈತರಿಗೆ ಅನ್ಯಾಯವಾಗಲಿದೆ. ಈ ಸಂಬಂಧ ಸರ್ಕಾರದ ಜೊತೆಗೂ ಮಾತನಾಡಿದ್ದೇನೆ. ದರ ಕಡಿತ ಮಾಡಿರುವುದು ರೈತನ ಮಗನಾಗಿ ನನಗೂ ಸಹ ಬೇಸರವಿದೆ ಎಂದರು.
ಕಡೇಹಳ್ಳಿ ಗ್ರಾಮದಲ್ಲಿ ಎಲ್ಲರೂ ಒಂದಾಗಿ ಪಕ್ಷಬೇದವಿಲ್ಲದೇ ಒಗ್ಗಟ್ಟಾಗಿ ಹಾಲು ಉತ್ಪಾದಕರ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವುದು ಸಂತಸದ ವಿಚಾರ. ಸ್ಥಳೀಯ ಸಹಕಾರ ಸಂಘಗಳಲ್ಲಿ ಯಾರೂ ಸಹ ರಾಜಕೀಯ ಮಾಡಬಾರದು. ಊರಿನವರೆಲ್ಲರೂ ಒಂದಾಗಿದ್ದರೇ ಅಭಿವೃದ್ದಿ ಮಾಡಲು ಸಾಧ್ಯ. ಈ ಕಟ್ಟಡ ಕಾಮಗಾರಿಗೆ ನಾನು 5 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಬಳಿಕ ಕಡೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣಾರೆಡ್ಡಿ, ಈ ವೇಳೆ ಕೋಚಿಮುಲ್ ನಿರ್ದೇಶಕ ಆದಿನಾರಾಯಣರೆಡ್ಡಿ, ಮುಖಂಡರಾದ ಆದಿರೆಡ್ಡಿ, ಆನಂದರೆಡ್ಡಿ, ಪ್ರಕಾಶ್, ವೆಂಕಟಶಿವಾರೆಡ್ಡಿ, ಕೋಚಿಮುಲ್ ಶಿಬಿರ ಕಚೇರಿಯ ಅಧಿಕಾರಿಗಳು ಸೇರಿದಂತೆ ಗ್ರಾಮದ ಮುಖಂಡರು ಹಾಜರಿದ್ದರು.