ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಮೋಹನ್ ಮಾಜಿ ಬೆಂಬಲಿಗ ಕಾರಣ
ಬಲಿಜ ಸಮುದಾಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಎಸ್.ಪಿ. ಶ್ರೀನಿವಾಸ್ ಮಾತನಾಡಿ, ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕೈವಾರ ತಾತಯ್ಯನವರ ಜಯಂತಿಯಲ್ಲಿ ಬಾಗವಹಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಆಗಲಿ ಸಂಸದ ಪಿ.ಸಿ.ಮೋಹನ್ ಆಗಲಿ ಕಲಹಕ್ಕೆ ಮುಂದಾಗಿರಲಿಲ್ಲ. ಆದರೆ ಮೋಹನ್ ಶಿಷ್ಯ ಎಂದು ಹೇಳಿಕೊಳ್ಳುವ ವ್ಯಕ್ತಿ ಸುರೇಶ್ ಎಂಬಾತ ಇಷ್ಟಕ್ಕೆಲ್ಲ ಕಾರಣ ಎಂದು ಆರೋಪಿಸಿದರು.ಸಂಸದ ಪಿ.ಸಿ.ಮೋಹನ್ ಅವರ ಬೆಂಬಲಿಗನಾಗಿದ್ದ ಸುರೇಶ್ ಒಮ್ಮೆ ಬಿಬಿಎಂಪಿ ಸದಸ್ಯ ಸ್ಥಾನಕ್ಕೂ ನಿಂತು ಸೋತಿದ್ದಾನೆ. ಈ ಬಾರಿ ಮೋಹನ್ ಅವರು ಸುರೇಶ್ಗೆ ಮತ್ತೆ ಟಿಕೇಟ್ ಕೊಡಿಸಲಿಲ್ಲ ಅನ್ನೋ ಕಾರಣಕ್ಕೆ ಅವರ ಮೇಲೆ ಸಿಟ್ಟಾಗಿದ್ದ. ಅದೆ ಧ್ವೇಷದಿಂದ ಕೈವಾರ ತಾತಯ್ಯ ಜಯಂತಿ ವೇಳೆ ಪಿ.ಸಿ.ಮೋಹನ್ ಮತ್ತು ಪ್ರದೀಪ್ ಈಶ್ವರ್ ನಡುವಿನ ಸಮುದಾಯದ ಒಗ್ಗಟ್ಟಿಗೆ ಹುಳಿ ಹಿಂಡಬೇಕು ಅನ್ನೋ ಕಾರಣಕ್ಕೆ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ವಾಸ್ತವವಾಗಿ ಸಂಸದರಾಗಲಿ ಶಾಸಕರಾಗಲಿ ಇಬ್ಬರೂ ಜನಾಂಗದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಪ್ರದೀಪ್ ಈಶ್ವರ್ ಮಾತನಾಡಿದ್ದರ ಪರವಾಗಿಯೇ ಪಿ.ಸಿ.ಮೋಹನ್ ಇದ್ದಾರೆ ಎಂದು ಸ್ಪಷ್ಟಿಕರಣ ನೀಡಿದರು.
ಸಂಸದ- ಶಾಸಕರ ಮನಸ್ತಾಪ ಇಲ್ಲ
ಅಂದಿನ ಘಟನೆಯ ಕುರಿತು ಸಮುದಾಯದ ಬಗ್ಗೆ ಸಮಾಜದಲ್ಲಿ ತಪ್ಪು ಸಂದೇಶ ರವಾನೆಯಾಗಿದೆ. ಇನ್ನು ಅಂದಿನ ಕಾರ್ಯಕ್ರಮದಲ್ಲಿ ಸಂಸದರಾದ ಪಿ.ಸಿ.ಮೋಹನ್ ಹಾಗು ಶಾಸಕ ಪ್ರದೀಪ್ ಈಶ್ವರ್ ನಡುವೆ ಯಾವುದೇ ರೀತಿಯ ಘಟನೆ ನಡೆದಿಲ್ಲ. ಇಬ್ಬರು ಬೇರೆ ಬೇರೆ ಪಕ್ಷದವರಾದರೂ ಜನಾಂಗದ ವಿಷಯ ಬಂದಾಗ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಕಾರ್ಯಕ್ರಮದಲ್ಲಿ ಗದ್ದಲ ಸೃಷ್ಟಿಸಿದ್ದು ಇದಕ್ಕೆ ಯಾರೂ ಕಿವಿಕೂಡದೆ ಸಮುದಾಯ ಒಗ್ಗಟ್ಟು ಪ್ರದರ್ಶಿಸಬೇಕು ಎಂದರು.ಈ ವೇಳೆ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್, ಮುಖಂಡರಾದ ಡ್ಯಾನ್ಸ್ ಶ್ರೀನಿವಾಸ್, ಜೋಳದ ಕಿಟ್ಟಿ, ರಾಜು ಮತ್ತಿತರರು ಇದ್ದರು.