ಸುರಪುರ ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಕಸಾಪದಿಂದ ಹಮ್ಮಿಕೊಂಡಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕರಿಗೆ ನುಡಿನ ನಮನ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಸುರಪುರ
ಜನರ ಸೇವೆಗಾಗಿಯೇ 40 ವರ್ಷಗಳ ಮುಡುಪಾಗಿಟ್ಟ ಧೀಮಂತ ನಾಯಕ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಕಳೆದುಕೊಂಡು ಸುರಪುರ ಅನಾಥವಾಗಿದೆ ಎಂದು ಪಬ್ಲಿಕ್ ರಿಕ್ರಿಯೆಶನ್ ಕ್ಲಬ್ ಅಧ್ಯಕ್ಷ ರಾಜಾ ಮುಕುಂದ ನಾಯಕ ಹೇಳಿದರು.
ನಗರದ ಗರುಡಾದ್ರಿ ಕಲಾಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಪಬ್ಲಿಕ್ ರಿಕ್ರಿಯೆಶನ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕರಿಗೆ ನುಡಿನ ನಮನ ಕಾರ್ಯಕ್ರಮದಲ್ಲಿ ಮಾನತಾಡಿದ ಅವರು, ಜಾತಿ, ಮತ ಪಂಥವೆನ್ನದೆ ಸಾಮಾಜಿಕ ಕಾರ್ಯಗಳನ್ನು ಮಾಡಿ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಶರಣಬಸಪ್ಪ ಯಾಳವಾರ ಮಾತನಾಡಿ, ಸಾಹಿತ್ತಿಕ ಸಾಂಸ್ಕೃತಿಕ ಕ್ಷೇತ್ರಕ್ಕೆ ಹಿರಿಯ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಕೊಡುಗೆ ಅನುಪಮ ಎಂದು ಸ್ಮರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.