ಕನ್ನಡಪ್ರಭ ವಾರ್ತೆ ಹಾಸನ
ಸಂಘದ ಅಧ್ಯಕ್ಷ ಮಂಜುನಾಥ್ ಮಾಧ್ಯಮದೊಂದಿಗೆ ಮಾತನಾಡಿ, ಪಂಚನೌಕರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸದೆ, ಕೇವಲ ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಯನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ದಿನ ಹೋರಾಟವನ್ನು ಪ್ರಾರಂಭಿಸಿದ್ದು ಎಲ್ಲಾ ವೃಂದದ ಬೇಡಿಕೆಗಳು ಈಡೇರುವವರೆಗೆ ಈ ಹೋರಾಟ ಅನಿರ್ದಿಷ್ಟ ಅವಧಿವರೆಗೆ ಮುಂದುವರೆಯುವುದು ಎಂದರು.
ಇದೇ ವೇಳೆ ಸಂಘದ ರಾಜ್ಯ ಮಾಜಿ ಉಪಾಧ್ಯಕ್ಷ ನಟರಾಜು, ತಾಲೂಕು ಅಧ್ಯಕ್ಷ ನಂಜಪ್ಪ, ಸಿ.ಎಸ್. ಶಿವಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.