ಮಕ್ಕಳ ಜೊತೆ ಶಾಲೆಯ ಕಾರ್ಯನಿರ್ವಹಣೆಯ ಬಗ್ಗೆ ಸಂವಾದ । ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಶಿಕ್ಷಕರಿಗೆ ತಾಕೀತು
ಮಕ್ಕಳ ಜೊತೆ ಸಂವಾದ ನಡೆಸಿದ ಶಾಸಕಿ ರೂಪಕಲಾ ಶಶಿಧರ್, ನಿಮಗೆ ಊಟವನ್ನು ಕಾಲ ಕಾಲಕ್ಕೆ ಕೊಡುತ್ತಿದ್ದಾರಾ? ಕೊಡುವ ಆಹಾರ ಗುಣಮಟ್ಟದಿಂದ ಕೂಡಿದೆಯೇ? ಶುದ್ದ ಕುಡಿವ ನೀರಿನ ಲಭ್ಯತೆ ಇದೆಯೇ? ಪುಸ್ತಕ, ಲೇಖನಿ ಸಾಮಾಗ್ರಿಗಳನ್ನು ನೀಡಿದ್ದಾರೆಯೇ? ಎಂದು ಮಕ್ಕಳನ್ನು ಪ್ರಶ್ನಿಸಿದರು. ಮಕ್ಕಳಿಗೆ ಅಗತ್ಯವಿರುವ ಸಮವಸ್ತ್ರ, ವಸತಿ ನಿಲಯದಲ್ಲಿ ಸ್ವಚ್ಛತೆ, ಮಕ್ಕಳಿಗೆ ನೀಡುವ ಹಾಸಿಗೆ ಹೊದಿಕೆ ಬಗ್ಗೆಯೂ ಖುದ್ದು ಶಾಸಕರು ಮಕ್ಕಳ ಬಳಿ ವಿಚಾರಣೆ ನಡೆಸಿದರು, ಇದೇ ರೀತಿ ಹೆಣ್ಣು ಮಕ್ಕಳ ಬಳಿ ತೆರಳಿ ವಸತಿ ನಿಲಯದಲ್ಲಿ ಹಣ್ಣು ಮಕ್ಕಳಿಗೆ ಅಗತ್ಯವಿರುವ ಪ್ಯಾಡ್ ನೀಡಲಾಗುತ್ತಿದ್ದೆಯೇ, ಇಲ್ಲವೇ ಎಂದು ಸೌಲಭ್ಯಗಳು ಕುರಿತು ಹೆಣ್ಣು ಮಕ್ಕಳ ಬಳಿ ಚರ್ಚಿಸಿದರು.
ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿವಸತಿ ನೀಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಾಸಕರು ಪ್ರತ್ಯೇಕ ಶಿಕ್ಷಕರ ಸಭೆ ನಡೆಸಿ, ಯಾವುದೇ ಕಾರಣಕ್ಕೂ ಬಡ ಮಕ್ಕಳಿಗೆ ಅನ್ಯಾಯ ಮಾಡಬೇಡಿ, ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡಿಸಬೇಡಿ, ಎಲ್ಲ ಮಕ್ಕಳನ್ನು ಒಂದಾಗಿ ಕಾಣಬೇಕು, ಮಕ್ಕಳ ಬಳಿ ಸೌಜನ್ಯದಿಂದ ವರ್ತಿಸಿ, ಮಕ್ಕಳ ಮೇಲೆ ದಬ್ಬಾಳಿಕೆ ಮಾಡಬೇಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತಮ ಪರಿಸರ ನಿರ್ಮಾಣ ಮಾಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮವಹಿಸಿಬೇಕೆಂದು ಶಿಕ್ಷಕರಿಗೆ ಪಾಠ ಮಾಡಿದರು.
ಸಿಬ್ಬಂದಿಯ ಬಿನ್ನಾಭಿಪ್ರಾಯಗಳು ಮಕ್ಕಳ ಮೇಲೆ ಪರಿಣಾಮ ಬೀರಲಿವೆ, ಆದ್ದರಿಂದ ಸಿಬ್ಬಂದಿಯು ಇದಕ್ಕೆ ಅವಕಾಶ ಮಾಡಿಕೊಡಬಾರದು,ಇದರಿಂದ ಶಾಲಾ ಕಾಲೇಜಿನ ವಾತವರಣ ಕೆಡಲಿದೆ, ಬಡ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆಯೂ ಗಮನವನ್ನು ಹರಿಸಬೇಕು, ಏನೇ ಸಮಸ್ಯೆಗಳು ಇದ್ದರೂ ನಮ್ಮ ಗಮನಕ್ಕೆ ತರಬೇಕೆಂದು ಪ್ರಾಂಶುಪಾಲ ನಾಗರಾಜ್ ಅವರಿಗೆ ಸೂಚನೆ ನೀಡಿದರು.
ಮಕ್ಕಳಿಂದ ವಸತಿ ಶಾಲೆಯ ಬಗ್ಗೆ ಉತ್ತಮ ಪ್ರತಿಕ್ರಿಯೆ
ಈ ವೇಳೆ ಪೌರಾಯುಕ್ತ ಪವನ್ಕುಮಾರ್, ವಸತಿ ಶಾಲೆಯ ಪ್ರಾಂಶುಪಾಲ ನಾಗರಾಜ್ ಹಾಗೂ ಶಾಲಾ ಸಿಬ್ಬಂದಿ ಮತ್ತಿತರರಿದ್ದರು.