ಐತಿಹಾಸಿಕ ದಿನ
-ಡಾ। ಅಚ್ಯುತ ಸಮಂತ, ಕಳಿಂಗ ವಿವಿ ಸ್ಥಾಪಕಭುವನೇಶ್ವರ: ಕರ್ನಾಟಕದ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ, ಭುವನೇಶ್ವರದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ(ಕೆಐಐಟಿ) ಕ್ಯಾಂಪಸ್ನಲ್ಲಿ ನಡೆದ 2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು 2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
61ನೇ ಆವೃತ್ತಿಯ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಗೋವಾವನ್ನು ಪ್ರತಿನಿಧಿಸಿದ್ದ ಸಾಧ್ವಿ ಏ.18ರಂದು ನಡೆದ ಅಂತಿಮ ಸುತ್ತಿನಲ್ಲಿ ಜಯ ಗಳಿಸಿದ್ದಾರೆ. ಫೈನಲ್ನಲ್ಲಿ ಮಹಾರಾಷ್ಟ್ರದ ರಾಜನಂದಿನಿ ಪವಾರ್ ಮತ್ತು ಜಮ್ಮು ಕಾಶ್ಮೀರದ ಶ್ರೀ ಅದ್ವೈತ ಮೊದಲ ಮತ್ತು ದ್ವಿತೀಯ ರನ್ನರ್ ಅಪ್ ಆಗಿದ್ದಾರೆ. ಕರ್ನಾಟಕವನ್ನು ಪ್ರತಿನಿಧಿಸಿದ್ದ ಖುಷಿ ರಮೇಶ್ ಕಲಕೇರಿ ಅವರು ಅಗ್ರ 15ರಲ್ಲಿ ಸ್ಥಾನ ಪಡೆದಿದ್ದರು. ಆದರೆ ಅಂತಿಮ ಹಂತ ಪ್ರವೇಶಿಸುವಲ್ಲಿ ವಿಫಲರಾಗಿದ್ದರು. ಸ್ಪರ್ಧಾ ವಿಜೇತರಿಗೆ ಕೆಐಐಟಿ ಮತ್ತು ಕೆಐಎಸ್ಎಸ್ನ ಸ್ಥಾಪಕ ಡಾ। ಅಚ್ಯುತ ಸಮಂತಾ ಅವರು ಅಭಿನಂಧಿಸಿದ್ದಾರೆ. ಪ್ರತಿಭಾವಂತಾ ಸಾಧ್ವಿಸಾಧ್ವಿ, ಬ್ರಿಟಿಷ್ ಕೊಲಂಬಿಯಾ ವಿಶ್ವ ವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯಗಳಲ್ಲಿ ಪದವಿ ಪಡೆದಿದ್ದಾರೆ. ವೃತ್ತಿಯಲ್ಲಿ ಮಾಡೆಲ್ ಮತ್ತು ಉದ್ಯಮಿಯಾಗಿದ್ದಾರೆ. ಈಗಾಗಲೇ ಅವರು ಕ್ಯಾಲಿಪೋರ್ನಿಯಾ ಬ್ಯುರಿಟೋನಂತಹ ಪ್ರಮುಖ ಬ್ರ್ಯಾಂಡ್ಗಳ ಅಭಿಯಾನಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಈ ಹಿಂದೆ 2022ರಲ್ಲಿ ಮಂಗಳೂರು ಮೂಲದ ಸಿನಿ ಶೆಟ್ಟಿ ಮಿಸ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದರು. ಅದಕ್ಕೂ ಕರ್ನಾಟಕದ ಮುನ್ನ ರೇಖಾ ಹಂದೆ, ಸಂಧ್ಯಾ ಚಿಬ್, ನಫೀಸಾ ಜೋಸೆಫ್, ಲಿಮರೈನಾ ಡಿಸೋಜಾ, ಸಾರಾ ಜೇನ್ ಡಯಾಸ್ ಪ್ರಶಸ್ತಿ ಗೆದ್ದಿದ್ದರು.
ಕಳಿಂಗ ವಿವಿ ಹಿರಿಮೆ