ತಂಬ್ರಹಳ್ಳಿ 2ನೇ ಹಂತದ ಏತ ನೀರಾವರಿ ಯೋಜನೆ ಜಾರಿಗೆ ಶಾಸಕ ಸತೀಶ ಆಗ್ರಹ

KannadaprabhaNewsNetwork |  
Published : Dec 12, 2025, 02:15 AM IST
ಬೆಳಗಾವಿಯ `ಸುವರ್ಣ ಸೌಧ’ದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ತಂಬ್ರಹಳ್ಳಿ ಏತನೀರಾವರಿ ಕುರಿತು ಶಾಸಕ ವೈ.ಎಂ.ಸತೀಶ್ ಅವರು ಪ್ರಶ್ನಿಸಿದರು.  | Kannada Prabha

ಸಾರಾಂಶ

ಏತ ನೀರಾವರಿ ಯೋಜನೆ 1400 ಭೂಮಿಗೆ ನೀರುಣಿಸಲು ಪುನರ್ ಸರ್ವೇ ಆಗಿದೆ. ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು

ಬಳ್ಳಾರಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ 2ನೇ ಹಂತದ ಏತ ನೀರಾವರಿ ಯೋಜನೆಯ 1400 ಎಕರೆ ಭೂಮಿಗೆ ನೀರುಣಿಸಲು ಪುನರ್ ಸರ್ವೇ ಆಗಿದೆ. ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ವಿಜಯನಗರ- ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ, ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ ಆಗ್ರಹಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರಿಗೆ ಪ್ರಶ್ನೆ ಕೇಳಿದ ಶಾಸಕ ವೈ.ಎಂ. ಸತೀಶ್, 1976ರಲ್ಲಿ ಪ್ರಾರಂಭವಾಗಿರುವ ತಂಬ್ರಹಳ್ಳಿ ಏತ ನೀರಾವರಿ ಯೋಜನೆ 3000 ಎಕರೆ ಭೂಮಿಗೆ ನೀರುಣಿಸುವ ಯೋಜನೆ ಆಗಿತ್ತು. ಆದರೆ, ಈವರೆಗೆ 1400 ಎಕರೆ ಭೂಮಿಗೆ ಈ ವರೆಗೆ ನೀರುಣಿಸುವ ಕೆಲಸ ಆಗಿಲ್ಲ. ಸರ್ಕಾರ ತಕ್ಷಣವೇ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎನ್.ಎಸ್. ಬೋಸರಾಜು, ತಂಬ್ರಹಳ್ಳಿ 2ನೇ ಹಂತದ ಏತ ನೀರಾವರಿ ಯೋಜನೆಯನ್ನು ಪುನರುಜ್ಜೀವನಗೊಳಿಸಲು ವಿಶೇಷ ಘಟಕ ಯೋಜನೆ ಅಡಿಯಲ್ಲಿ ₹2.5 ಕೋಟಿ ಅನುದಾನ ನೀಡಲಾಗಿದೆ. ಪ್ರಸ್ತುತ ಈ ಯೋಜನೆ ವ್ಯಾಪ್ತಿಯ 1400 ಎಕರೆ ಭೂಮಿಯಲ್ಲಿ ಮನೆಗಳು, ಎಪಿಎಂಸಿ ಇನ್ನಿತರೆ ಕಟ್ಟಡಗಳು ನಿರ್ಮಾಣ ಆಗಿರುವ ಕಾರಣ ನೀರಾವರಿ ಪ್ರದೇಶವು ಕಡಿಮೆಯಾಗಿದೆ. ಬಾಕಿ ನೀರುಣಿಸುವ ಪ್ರದೇಶದ ತಾಂತ್ರಿಕ ಹಾಗೂ ಇನ್ನಿತರೆ ವಿಷಯಗಳನ್ನು ಆಧರಿಸಿದ ಯೋಜನೆ ಪುನರ್ ರೂಪಿಸಲಾಗುತ್ತದೆ ಎಂದರು.

ಈ ಯೋಜನೆಯ ವ್ಯಾಪ್ತಿಯಲ್ಲಿ ಶಿಗೇನಹಳ್ಳಿ 1, 2, 3, ತಂಬ್ರಹಳ್ಳಿ, ತಂಬ್ರಹಳ್ಳಿ ಎಕ್ಸ್‍ಟೆನ್ಶನ್ ಪ್ರದೇಶ, ಕೃಷ್ಣಾಪುರ, ಚಿಲಗೋಡು ಇನ್ನಿತರೆ ಪ್ರದೇಶಗಳು ಸೇರಿವೆ. ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತದೆ ಎಂಧು ಉತ್ತರಿಸಿದರು.

ವೈ.ಎಂ.ಸತೀಶ್ ಮಾತನಾಡಿ, ಮೂರುವರೆ ವರ್ಷಗಳ ಹಿಂದೆ ಇದೇ ಪ್ರಶ್ನೆಗಳನ್ನು ಸದನದಲ್ಲಿ ಕೇಳಿದ್ದೆ. ಆಗ, ಸಚಿವರಾಗಿದ್ದ ಮಾಧುಸ್ವಾಮಿ, ಯೋಜನೆಯ ಪುನರ್ ಸರ್ವೇಗೆ ಆದೇಶ ನೀಡಿದ್ದರು. ಈ ಯೋಜನೆಯ ಪುನರ್ ಸರ್ವೇ ಪೂರ್ಣಗೊಂಡಿದೆ. ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಂಡು ರೈತರಿಗೆ ನೆರವಾಗಬೇಕು. ಕೃಷಿ ಭೂಮಿಗೆ ನೀರುಣಿಸುವ ಕೆಲಸವಾಗಲಿ ಎಂದು ಅವರು ಕೋರಿದರು.

ಲೆಕ್ಕಾಚಾರ ಹಾಕಿ ಹೆಚ್ಚಿನ ಹಣದ ಅಗತ್ಯವಿದ್ದಲ್ಲಿ ಬಜೆಟ್‍ನಲ್ಲಿ ಈ ವಿಷಯ ಸೇರ್ಪಡೆ ಮಾಡಿ, ಅನುದಾನ ನೀಡಲಾಗುತ್ತದೆ ಎಂದು ಸಚಿವ ಎನ್.ಎಸ್. ಬೋಸರಾಜ್ ಉತ್ತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ