ಕನ್ನಡಪ್ರಭ ವಾರ್ತೆ ಬೀದರ್
ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಆಣದೂರ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ನಲ್ಲಿ ವ್ಯಕ್ತಿಯೊಬ್ಬ ಬಿದ್ದು ಸಾವನ್ನಪ್ಪಿದ ಘಟನೆ ಹಿನ್ನೆಲೆ ಶನಿವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು.
ತಕ್ಷಣವೇ ತಾಪಂ ಅಧಿಕಾರಿ, ಪಿಡಿಒ ಅಧಿಕಾರಿಗಳಿಗೆ ಕರೆ ಮಾಡಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಪರ್ಯಾಯ ವ್ಯವಸ್ಥೆಗಾಗಿ ಕೂಡಲೇ ಒಂದು ಬೋರ್ವೆಲ್ ಕೊರೆಯಿಸುವಂತೆ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಗತ್ಯ ಕ್ರಮಕ್ಕಾಗಿ ಮೇಲಧಿಕಾರಿಗಳ ಜೊತೆಗೂ ದೂರವಾಣಿಯಲ್ಲಿ ಮಾತನಾಡಿ ಸೂಚನೆ ನೀಡಿದರು.ಎರಡು ದಿನದ ಹಿಂದೆ ವ್ಯಕ್ತಿ ಮೃತಪಟ್ಟ ಕಾರಣ ಮೃತದೇಹ ಡಿ-ಕಂಪೋಸ್ (ಪೂರ್ಣ ಕೊಳೆತು ಒಡೆದಿಲ್ಲ) ಆಗಿಲ್ಲ. ನಲ್ಲಿಗೆ ಬರುವ ನೀರು ವಾಸನೆಯಾದ ಬಗ್ಗೆ ಗ್ರಾಮಸ್ಥರು ಗಮನಕ್ಕೆ ಬರುತ್ತಲೇ ಗ್ರಾಪಂನವರಿಗೆ ತಿಳಿಸಿದ ಕಾರಣ ಬೇಗ ವಿಷಯ ಗೊತ್ತಾಗಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದರು.
ಈ ವೇಳೆ ಗ್ರಾಪಂ ಅಧ್ಯಕ್ಷೆ ಮೀನಾಕ್ಷಿ ಮಾದಪ್ಪ, ಉಪಾಧ್ಯಕ್ಷೆ ಶ್ರೀದೇವಿ ಅಂಬಾದಾಸ, ಪಿಡಿಒ ಮಲ್ಲಿಕಾರ್ಜುನ ಡೋಣೆ, ವೈದ್ಯರಾದ ಡಾ.ಬಸವಪ್ರಸಾದ, ಪ್ರಮುಖರಾದ ಶ್ರೀನಿವಾಸರೆಡ್ಡಿ, ಸುರೇಶ ಮಾಶೆಟ್ಟಿ, ಬಸವರಾಜ ಸಿಂದಬಂದಗಿ, ಬಸವರಾಜ ಪಾಟೋದಿ, ಸಂತೋಷ ರೆಡ್ಡಿ, ಸಂತೋಷ ಸೋರಳ್ಳಿ, ಭೀಮಣ್ಣ ಸೋರಳ್ಳಿ, ರಾಜು ಪೋಳ, ಶಿವಶಂಕರ ಫುಲೆ, ಸಾಯಿಕುಮಾರ, ಮೋಯಿಜ್, ಕಿಶೋರ್, ಚಂದ್ರಾರೆಡ್ಡಿ, ಸಾಯಿನಾಥ, ಆಕಾಶರೆಡ್ಡಿ, ಈಶ್ವರ ಸಿಕೆನಪುರ, ಶಾದ್ರಕ್, ಗೋಪಾಲ, ಚೆನ್ನಪ್ಪ, ಪ್ರವೀಣ ಪಟೋದಿ ಸೇರಿದಂತೆ ಗ್ರಾಮದ ಪ್ರಮುಖರು ಇದ್ದರು.