ಶಾಸಕ ಶರಣು ಸಲಗರ್‌ ಅವರದ್ದು ಸಣ್ಣತನದ ರಾಜಕೀಯ: ಸುಧಾಕರ ಕೊಳ್ಳುರ್‌

KannadaprabhaNewsNetwork |  
Published : Aug 04, 2025, 12:15 AM IST
ಚಿತ್ರ 3ಬಿಡಿಆರ್3ಸುಧಾಕರ ಕೊಳ್ಳುರ್‌ | Kannada Prabha

ಸಾರಾಂಶ

ಮಾಜಿ ಎಂಎಲ್ಸಿ ವಿಜಯಸಿಂಗ್‌ ಅವರ ಜನಪ್ರಿಯತೆ ಸಹಿಸಿಕೊಳ್ಳದ ಶಾಸಕ ಶರಣು ಸಲಗರ್ ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಸುಧಾಕರ ಕೊಳ್ಳುರ್‌ ಖಂಡಿಸಿದ್ದಾರೆ.

ಔರಾದ್‌: ಮಾಜಿ ಎಂಎಲ್ಸಿ ವಿಜಯಸಿಂಗ್‌ ಅವರ ಜನಪ್ರಿಯತೆ ಸಹಿಸಿಕೊಳ್ಳದ ಶಾಸಕ ಶರಣು ಸಲಗರ್ ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಸುಧಾಕರ ಕೊಳ್ಳುರ್‌ ಖಂಡಿಸಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಶಾಸಕ ಶರಣು ಸಲಗರ್‌ ಅವರು ಮಾಜಿ ವಿಧಾನ ಪರಿಷತ್‌ ಸದಸ್ಯರು, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಚುನಾವಣೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ವಿಜಯ ಸಿಂಗ್‌ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ತೀರ ಖಂಡನಿಯ ಎಂದು ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನಿ ಕಾರ್ಯದರ್ಶಿ ಸುಧಾಕರ ಕೊಳ್ಳುರ್‌ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಶರಣು ಸಲಗರ್‌ ಅವರು ಪದೇ ಪದೇ ವಿಜಯಸಿಂಗ್‌ ಅವರ ಹೆಸರು ಬಳಸಿಕೊಂಡು ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಿತಿ ಕೇಂದ್ರದಿಂದ ಮಾಡಿದ ಕಾಮಗಾರಿಗಳು ಕಳಪೆ ಮಟ್ಟದಿಂದ ನಡೆಯುತ್ತಿವೆ ಅದನ್ನು ವಿಜಯಸಿಂಗ್‌ ಅವರು ಬೆಳಕಿಗೆ ತಂದಿದ್ದರು ಮತ್ತು ಗುಣಮಟ್ಟ ಕಾಮಗಾರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಈ ವಿಷಯವನ್ನು ಮುಚ್ಚಿ ಹಾಕಲು ಮತ್ತು ಜನರ ಗಮನ ಬೇರೆ ಕಡೆ ಸೆಳೆಯಲು ಶಾಸಕರು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವಿಜಯಸಿಂಗ್‌ ಅವರ ಸರಳತೆಯು ಸಲಗರ್‌ ಅವರಿಗೆ ಇನ್ನೂ ಗೊತ್ತಿಲ್ಲ ಅನಿಸುತ್ತೆ. ವಿಧಾನಪರಿಷತ್‌ ಸದಸ್ಯರಾಗಿದ್ದಾಗ ವಿಜಯಸಿಂಗ್‌ ಅವರು ಒಂದೇ ಒಂದು ಅಂಗರಕ್ಷಕರನ್ನು(ಗನ್‌ ಮ್ಯಾನ್‌) ಕೂಡ ತೆಗೆದುಕೊಂಡಿಲ್ಲ. ಮಾಜಿ ಮುಖ್ಯಮಂತ್ರಿಯ ಮಗನಾದರೂ ಎಲ್ಲೂ ಅಹಂಕಾರ ತೋರಿಸಿಲ್ಲ ಅಧಿಕಾರದ ದುರ್ಬಳಕೆ ಮಾಡಿಲ್ಲ ಆದರೆ ಶಾಸಕರು ವಿಜಯಸಿಂಗ್‌ ಅವರ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡಿ ಸಣ್ಣತನ ತೋರಿಸುತ್ತಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ ಕೊಳ್ಳುರ್‌ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''