ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಶಾಸಕ ಸಿಡಿಮಿಡಿ

KannadaprabhaNewsNetwork |  
Published : Feb 02, 2024, 01:08 AM IST
ಫsೆÇÃಟೊ: ೩೧ಎಚ್‌ಎನ್‌ಎಲ್೧ | Kannada Prabha

ಸಾರಾಂಶ

ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ನಡೆದ ಬರಗಾಲದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಸಮಗ್ರ ವರದಿ, ಸಂಪೂರ್ಣ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಶಾಸಕ ಶ್ರೀನಿವಾಸ ಮಾನೆ ಸಿಡಿಮಿಡಿಗೊಂಡರು.

ಬರಗಾಲದ ಟಾಸ್ಕ್‌ಫೋರ್ಸ್ ಸಮಿತಿ ಸಭೆ । ಪ್ರತಿ ಗ್ರಾಪಂಗಳಿಗೆ ಭೇಟಿ ನೀಡುವಂತೆ ಸೂಚನೆ

ಕನ್ನಡಪ್ರಭ ವಾರ್ತೆ ಹಾನಗಲ್ಲ

ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ನಡೆದ ಬರಗಾಲದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಸಮಗ್ರ ವರದಿ, ಸಂಪೂರ್ಣ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಶಾಸಕ ಶ್ರೀನಿವಾಸ ಮಾನೆ ಸಿಡಿಮಿಡಿಗೊಂಡರು.

ಸಭೆ ಆರಂಭಗೊಳ್ಳುತ್ತಿದ್ದಂತೆಯೇ ಶಾಸಕ ಮಾನೆ, ಮುಂದಿನ ಮೂರ್ನಾಲ್ಕು ತಿಂಗಳು ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹೆಚ್ಚಿದೆ. ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ಕಾರಣಕ್ಕೂ ವ್ಯತ್ಯಯ ಉಂಟಾಗಬಾರದು. ಇದಕ್ಕಾಗಿ ಯಾವ ಸಿದ್ಧತೆ ಮಾಡಿಕೊಂಡಿದ್ದೀರಿ? ಅಗತ್ಯವಿರುವ ಹಣಕಾಸು ಯಾವ ಮೂಲದಿಂದ ಒದಗಿಸುತ್ತೀರಿ ಎಂದು ಪ್ರಶ್ನಿಸಿದರು. ಇದಕ್ಕೆ ತಾಪಂ ಇಒ ದೇವರಾಜ ಅಸಮರ್ಪಕ ಉತ್ತರ, ಅಪೂರ್ಣ ಮಾಹಿತಿ ನೀಡಿದರು. ಅದಕ್ಕೆ ಶಾಸಕರು ಬೇಸರ ವ್ಯಕ್ತಪಡಿಸಿ, ತಕ್ಷಣವೇ ಪ್ರತಿ ಗ್ರಾಪಂಗಳಿಗೆ ಭೇಟಿ ನೀಡಿ, ವಾಸ್ತವತೆ ಅರಿಯಿರಿ. ಹಣಕಾಸಿನ ಸ್ಥಿತಿಗತಿ ಕುರಿತು ಮಾಹಿತಿ ಪಡೆದು ಸಮಗ್ರ ವರದಿ ಸಿದ್ಧಪಡಿಸಿ. ಫೆ. ೩ರಂದು ಮತ್ತೆ ಸಭೆ ನಡೆಸೋಣ. ಕಾಟಾಚಾರದ ಸಭೆಯಿಂದ ಸಮಯ ಹಾಳು ಮಾಡುವುದು ಬೇಡ ಎಂದರು.

ಕುಡಿಯುವ ನೀರು ಪೂರೈಕೆಗೆ ೧೫ನೇ ಹಣಕಾಸಿನಲ್ಲಿ ಹಣ ಬಳಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಹಣ ಬಿಡುಗಡೆಗೊಂಡಿಲ್ಲ ಎಂದು ತಾಪಂ ಇಒ ದೇವರಾಜ ಸಭೆಯಲ್ಲಿ ಗಮನ ಸೆಳೆದಾಗ ಮೊದಲೇ ಮಾಹಿತಿ ನೀಡಿದರೆ ಜಿಪಂ ಸಿಇಒ, ಅಗತ್ಯ ಬಿದ್ದರೆ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಬಹುದಿತ್ತು. ಮೊದಲೇ ಏಕೆ ಗಮನಕ್ಕೆ ತರಲಿಲ್ಲ ಎಂದು ಶ್ರೀನಿವಾಸ ಮಾನೆ ಪ್ರಶ್ನಿಸಿದರು.

ಪ್ರತಿ ಗ್ರಾಪಂ ವ್ಯಾಪ್ತಿಗಳಲ್ಲಿ ವಾರ್ಡು ಸಮಿತಿಗಳ ಸಭೆ ನಡೆಸಬೇಕು. ಕುಡಿಯುವ ನೀರು, ವಿದ್ಯುತ್ ಪೂರೈಕೆಯ ಸ್ಥಿತಿಗತಿ ಬಗೆಗೆ ಮನವರಿಕೆ ಮಾಡಿ. ನೀರು ಮತ್ತು ವಿದ್ಯುತ್‌ನ ಹಿತಮಿತ ಬಳಕೆಗೆ ಜನಜಾಗೃತಿ ಮೂಡಿಸಬೇಕು. ಮಳೆಗಾಲದವರೆಗೂ ಎದುರಾಗುವ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸಲು ಸನ್ನದ್ಧರಾಗಿ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸದಿರಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಹಸೀಲ್ದಾರ್ ರೇಣುಕಾ ಎಸ್., ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಆರ್.ಸಿ. ನೆಗಳೂರ, ಹೆಸ್ಕಾಂ ಎಇಇ ಆನಂದ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನಕುಮಾರ, ಉಪ ತಹಸೀಲ್ದಾರರಾದ ನಾಗರಾಜ ಸೂರ್ಯವಂಶಿ, ಎಂ.ಎಂ. ಮುಗದುಂ, ಕಂದಾಯ ನಿರೀಕ್ಷಕರಾದ ಎಸ್.ಎಸ್. ರಾಠೋಡ, ನಾಗರಾಜ ನಂದಿಹಳ್ಳಿ, ಮಾರುತಿ ಹೊನಕುಪ್ಪಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್
ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಚುರುಕು