ಕೊಟ್ಟ ಮಾತು ಉಳಿಸಿಕೊಳ್ಳಲು ಬದ್ಧ ಎಂದ ಶಾಸಕ ಸುರೇಶ್

KannadaprabhaNewsNetwork |  
Published : Jan 08, 2026, 01:45 AM IST
6ಎಚ್ಎಸ್ಎನ್13 : ಬಿಕ್ಕೋಡು ಹೋಬಳಿ ಪಡುವಳಲು ಗ್ರಾಮದಲ್ಲಿ ಕೆರೆ ಏರಿ ಕಾಲುವೆ ದುರಸ್ಥಿ ಕಾಮಗಾರಿಗೆ ಶಾಸಕರು  ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಕಳೆದ ಒಂದುವರೆ ವರ್ಷದ ಹಿಂದೆ ಈ ಗ್ರಾಮಕ್ಕೆ ಬಂದಾಗ ಮಳೆ ಹೆಚ್ಚಾಗಿ ಕೆರೆ ತುಂಬಿ ಏರಿ ಮೇಲೆ ನೀರು ಹರಿದು ಏರಿ ಬಿರುಕು ಬಿಡುವಂತಾಗಿತ್ತು. ನಾಲೆಯಲ್ಲಿ ನೀರು ತುಂಬಿ ಜಲಾವೃತಗೊಂಡಿತ್ತು. ಅದನ್ನು ವೀಕ್ಷಣೆ ಮಾಡಿ ಆದಷ್ಟು ಬೇಗ ಇದಕ್ಕೊಂದು ಶಾಶ್ವತ ಪರಿಹಾರ ದೊರಕಿಸಿ ಕೊಡುವುದಾಗಿ ಮಾತು ನೀಡಿ ತೆರಳಿದ್ದೆ. ಅದರಂತೆ ಇಂದು ಈ ಕೆರೆ ಏರಿ ಅಬಿವೃದ್ಧಿ ಹಾಗೂ ೧೨೦ ಮೀಟರ್‌ ನಾಲೆ ಕಾಂಕ್ರೀಟ್‌ಕರಣಕ್ಕೆ ಭೂಮಿಪೂಜೆ ಮಾಡಿದ್ದೇನೆ. ಮತ್ತು ಶಾಶ್ವತವಾಗಿ ಉಳಿಯುವಂತ ಗುಣಮಟ್ಟದಲ್ಲಿ ಕೆಲಸ ಮಾಡಲು ಗುತ್ತಿಗೆದಾರರಿಗೆ ತಿಳಿಸಿರುವುದಾಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೇಲೂರು ಚುನಾವಣಾ ಪೂರ್ವ ಓಡಾಟದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಾಗ ಈಡೇರಿಸುವ ಭರವಸೆಯನ್ನು ನೀಡಿದ್ದು ಅದರಂತೆ ತಮ್ಮ ಸರ್ಕಾರ ಇಲ್ಲದಿದ್ದರೂ ಕೈಲಾದಷ್ಟು ಅನುದಾನವನ್ನು ತಂದು ಅಭಿವೃದ್ಧಿ ಕಾಮಗಾರಿಗಳಿಗೆ ಮುಂದಾಗುತ್ತಿರುವದಾಗಿ ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬಿಕ್ಕೋಡು ಹೋಬಳಿ ಪಡುವಳಲು ಗ್ರಾಮದಲ್ಲಿ ಸೋಮವಾರ ಕೆರೆ ಏರಿ ಕಾಲುವೆ ದುರಸ್ಥಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕಳೆದ ಒಂದುವರೆ ವರ್ಷದ ಹಿಂದೆ ಈ ಗ್ರಾಮಕ್ಕೆ ಬಂದಾಗ ಮಳೆ ಹೆಚ್ಚಾಗಿ ಕೆರೆ ತುಂಬಿ ಏರಿ ಮೇಲೆ ನೀರು ಹರಿದು ಏರಿ ಬಿರುಕು ಬಿಡುವಂತಾಗಿತ್ತು. ನಾಲೆಯಲ್ಲಿ ನೀರು ತುಂಬಿ ಜಲಾವೃತಗೊಂಡಿತ್ತು. ಅದನ್ನು ವೀಕ್ಷಣೆ ಮಾಡಿ ಆದಷ್ಟು ಬೇಗ ಇದಕ್ಕೊಂದು ಶಾಶ್ವತ ಪರಿಹಾರ ದೊರಕಿಸಿ ಕೊಡುವುದಾಗಿ ಮಾತು ನೀಡಿ ತೆರಳಿದ್ದೆ. ಅದರಂತೆ ಇಂದು ಈ ಕೆರೆ ಏರಿ ಅಬಿವೃದ್ಧಿ ಹಾಗೂ ೧೨೦ ಮೀಟರ್‌ ನಾಲೆ ಕಾಂಕ್ರೀಟ್‌ಕರಣಕ್ಕೆ ಭೂಮಿಪೂಜೆ ಮಾಡಿದ್ದೇನೆ. ಮತ್ತು ಶಾಶ್ವತವಾಗಿ ಉಳಿಯುವಂತ ಗುಣಮಟ್ಟದಲ್ಲಿ ಕೆಲಸ ಮಾಡಲು ಗುತ್ತಿಗೆದಾರರಿಗೆ ತಿಳಿಸಿರುವುದಾಗಿ ಹೇಳಿದರು.

ವಾಟೆಹೊಳೆಯಿಂದ ಪಡುವಳಲು ಕೆರೆವರೆಗಿನ ಕಾಲುವೆ ಸಂಪೂರ್ಣ ಹಾಳಾಗಿದೆ. ಕಾಂಕ್ರೀಟ್ ಮಾಯವಾಗಿದ್ದು ಕೆಸರು ತುಂಬಿದ್ದು ಕಳೆ ಬೆಳೆದು ನಿಂತಿದೆ. ಅದನ್ನು ದುರಸ್ತಿ ಮಾಡಿಕೊಡುವಂತೆ ಗ್ರಾಮಸ್ಥರು ಬೇಡಿಕೆ ಇಟ್ಟರು, ಅವರ ಬೇಡಿಕೆ ಆಲಿಸಿದ ಶಾಸಕ ಎಚ್.ಕೆ. ಸುರೇಶ್ ವಾಟೆಹೊಳೆ ಅಭಿವೃದ್ಧಿ ಕಳೆದ ೨೦೨೩ನೇ ಇಸವಿಯಿಂದ ಬೇಲೂರು ತಾಲೂಕಿಗೂ ಸೇರಿದ್ದು, ನಾನು ಈಗಾಗಲೇ ನಾಲೆ ದುರಸ್ತಿಪಡಿಸಲು ಸರ್ಕಾರಕ್ಕೆ ₹೫ ಕೋಟಿ ಅನುದಾನ ಕೇಳಿದ್ದೇನೆ, ಕೊಟ್ಟರೆ ಕಂಡಿತ ನಾಲೆಗೆ ಸಂಬಂಧಪಟ್ಟ ನಿಮ್ಮೆಲ್ಲಾ ಸಮಸ್ಯೆ ಬಗೆಹರಿಸುತ್ತೇನೆ ಎಂದರು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಜಯಮ್ಮ, ಸದಸ್ಯ ಉದಯ್ ಕುಮಾರ್, ಮಾಜಿ ಸದಸ್ಯ ಹರೀಶ್ ಗುತ್ತಿಗೆದಾರ ಗೋಪಾಲ್, ವಾಟೆಹೋಳೆ ಅಣೇಕಟ್ಟು ಸಹಾಯಕ ಎಂಜಿನಿಯರ್ ಸಂದೀಪ್, ಗ್ರಾಮಸ್ಥರಾದ ಮಲ್ಲೇಶ್, ಕಿರಣ್, ಚಂದನ್, ಭಾರತಿ ಚಂದ್ರು, ತೀರ್ಥ ಭೊಜೇಶ್, ಬಸವರಾಜ್ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!