ಎಸ್‌ಐಆರ್‌ ಅರ್ಜಿ ಭರ್ತಿ ಮಾಡಿದ ಶಾಸಕ ಸ್ವರೂಪ್‌

KannadaprabhaNewsNetwork |  
Published : Jul 08, 2026, 01:45 AM IST
7ಎಚ್ಎಸ್ಎನ್12 :  | Kannada Prabha

ಸಾರಾಂಶ

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಹಾಸನ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಅವರು ತಮ್ಮ ನಿವಾಸದಲ್ಲೇ ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಅರ್ಜಿ ನಮೂನೆ ಭರ್ತಿ ಮಾಡುವ ಮೂಲಕ ಅಗತ್ಯ ಮಾಹಿತಿಯನ್ನು ಸಲ್ಲಿಸಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರೂ ಸಕ್ರಿಯವಾಗಿ ಭಾಗವಹಿಸಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಹಾಸನ

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಹಾಸನ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಅವರು ತಮ್ಮ ನಿವಾಸದಲ್ಲೇ ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಅರ್ಜಿ ನಮೂನೆ ಭರ್ತಿ ಮಾಡುವ ಮೂಲಕ ಅಗತ್ಯ ಮಾಹಿತಿಯನ್ನು ಸಲ್ಲಿಸಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರೂ ಸಕ್ರಿಯವಾಗಿ ಭಾಗವಹಿಸಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.

ಚುನಾವಣಾ ಆಯೋಗದ ಎಸ್‌ಐಆರ್‌ ಅಭಿಯಾನದ ಅಂಗವಾಗಿ ತಹಸೀಲ್ದಾರ್‌ ಗೀತಾ ಅವರ ನೇತೃತ್ವದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಶಾಸಕರ ನಿವಾಸಕ್ಕೆ ಭೇಟಿ ನೀಡಿ ಪ್ರಕ್ರಿಯೆಯ ಉದ್ದೇಶ, ಅರ್ಜಿ ಭರ್ತಿ ವಿಧಾನ, ಅಗತ್ಯ ದಾಖಲೆಗಳು ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಯ ಮಹತ್ವದ ಕುರಿತು ವಿವರಿಸಿದರು. ಬಳಿಕ ಶಾಸಕರಿಂದ ಅಗತ್ಯ ಮಾಹಿತಿಯನ್ನು ಪಡೆದು ಅರ್ಜಿ ನಮೂನೆ ಭರ್ತಿ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿ ಎಸ್‌ಐಆರ್‌ ಪ್ರಕ್ರಿಯೆಗೆ ಪೂರ್ಣ ಸಹಕಾರ ನೀಡಿದರು. ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ ಹಾಗೂ ಇತರೆ ಮಾಹಿತಿಗಳು ನಿಖರವಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಮತದಾರರೂ ಈ ಪ್ರಕ್ರಿಯೆಯನ್ನು ಜವಾಬ್ದಾರಿಯುತವಾಗಿ ಪರಿಗಣಿಸಬೇಕು ಎಂದು ಹೇಳಿದರು. ಮನೆಮನೆಗೆ ಭೇಟಿ ನೀಡುವ ಬಿಎಲ್‌ಒ ಅಧಿಕಾರಿಗಳು ಚುನಾವಣಾ ಆಯೋಗದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಅಗತ್ಯ ದಾಖಲೆಗಳು ಹಾಗೂ ಸರಿಯಾದ ಮಾಹಿತಿಯನ್ನು ನೀಡಬೇಕು. ತಪ್ಪು ಮಾಹಿತಿ ನೀಡುವುದಾಗಲಿ ಅಥವಾ ಮಾಹಿತಿ ನೀಡಲು ನಿರಾಕರಿಸುವುದಾಗಲಿ ಮಾಡಬಾರದು. ಸಾರ್ವಜನಿಕರ ಸಹಕಾರದಿಂದಲೇ ಮತದಾರರ ಪಟ್ಟಿ ಸಮರ್ಪಕವಾಗಿ ಪರಿಷ್ಕರಣೆಯಾಗಲು ಸಾಧ್ಯ ಎಂದು ತಿಳಿಸಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲ ಅರ್ಹ ಮತದಾರರು ತಮ್ಮ ಹೆಸರು, ವಿಳಾಸ, ಕುಟುಂಬದ ವಿವರ ಸೇರಿದಂತೆ ಅಗತ್ಯ ಮಾಹಿತಿಯನ್ನು ಪರಿಶೀಲಿಸಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಯಾವುದೇ ಗೊಂದಲಗಳಿದ್ದರೆ ಸ್ಥಳೀಯ ಬಿಎಲ್‌ಒ ಅಥವಾ ಚುನಾವಣಾ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ನಿಖರ ಮತದಾರರ ಪಟ್ಟಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಮೂಲಾಧಾರವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕರೂ ಚುನಾವಣಾ ಇಲಾಖೆಯೊಂದಿಗೆ ಕೈಜೋಡಿಸಿ ಎಸ್‌ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕರು ಕರೆ ನೀಡಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್‌ ಗೀತಾ, ಬಿಎಲ್‌ಒ ಅಧಿಕಾರಿಗಳು, ಚುನಾವಣಾ ಇಲಾಖೆಯ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಲೂಕಿನಲ್ಲಿ ೧೯೬೭ಮೆಟ್ರಿಕ್ ಟನ್ ಗೊಬ್ಬರ ದಾಸ್ತಾನು
ಬೆಳೆಗೆ ನೀರು ಕೊಡದಿದ್ದರೆ ಕೋಟ್ಯಂತರ ರು. ನಷ್ಟ