ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್

KannadaprabhaNewsNetwork |  
Published : Nov 14, 2025, 03:45 AM IST
ಕಾಂಕ್ರೀಟ್ ರಸ್ತೆ ಉದ್ಘಾಟಿಸುತ್ತಿರುವ ಶಾಸಕ ವೇದವ್ಯಾಸ ಕಾಮತ್ | Kannada Prabha

ಸಾರಾಂಶ

ಕಂಬ್ಳ ವಾರ್ಡ್ ನ ಪಿ.ವಿ.ಎಸ್ ವೃತ್ತದಿಂದ ಲಕ್ಷ್ಮೀ ನಗರ ವಸತಿ ಸಂಕೀರ್ಣ ಸಂಪರ್ಕ ರಸ್ತೆ 5 ಲಕ್ಷ ರು. ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡಿದ್ದು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.

ಮಂಗಳೂರು: ಮಹಾನಗರ ಪಾಲಿಕೆಯ 29 ನೇ ಕಂಬ್ಳ ವಾರ್ಡ್ ನ ಪಿ.ವಿ.ಎಸ್ ವೃತ್ತದಿಂದ ಲಕ್ಷ್ಮೀ ನಗರ ವಸತಿ ಸಂಕೀರ್ಣ ಸಂಪರ್ಕ ರಸ್ತೆ 5 ಲಕ್ಷ ರು. ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡಿದ್ದು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಶಾಸಕರು, ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯೆ ಲೀಲಾವತಿ ಪ್ರಕಾಶ್ ರವರು ವಿಶೇಷ ಮುತುವರ್ಜಿ ವಹಿಸಿದ್ದರ ಪರಿಣಾಮ ಈ ರಸ್ತೆ ಕಾಂಕ್ರಿಟೀಕರಣಗೊಂಡಿದೆ. ವಿಶೇಷವಾಗಿ ಲಕ್ಷ್ಮೀನಗರ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಅನುಕೂಲವಾಗಿರುವುದು ಸಂತಸದ ಸಂಗತಿ ಎಂದರು. ಇದೇ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯದರ್ಶಿ ಸತೀಶ್ ಇರಾ ರವರನ್ನು ಶಾಸಕರು ಸನ್ಮಾನಿಸಿದರು.

ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಜಿಲ್ಲಾ ವಕ್ತಾರ ರಾಜಗೋಪಾಲ್ ರೈ, ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಕೊಡಿಯಾಲ್ ಬೈಲ್, ಮಂಡಲದ ಕಾರ್ಯಾಲಯ ಕಾರ್ಯದರ್ಶಿ ನೀಲೇಶ್ ಕಾಮತ್, ಲಕ್ಷ್ಮೀ ನಾರಾಯಣಿ ದೇವಸ್ಥಾನದ ಕೃಷ್ಣ ಶೇಟ್, ಅರ್ಚಕರಾದ ಅಶೋಕ್ ಭಟ್, ಲಕ್ಷ್ಮೀನಗರ ಅಪಾರ್ಟ್ಮೆಂಟ್ ಅಸೋಸಿಯೇಶನ್ ಅಧ್ಯಕ್ಷ ಶರತ್ ಕುಮಾರ್, ಕೋಶಾಧಿಕಾರಿ ಪದ್ಮಜ ಎನ್, ಅಚ್ಚುತ ಎಲ್, ಜಗದೀಶ್ ಕಾಮತ್, ಪದ್ಮಿನಿ ಕಾಮತ್, ಪ್ರಭಾವತಿ ಶೆಟ್ಟಿ, ರಾಧಿಕಾ ಆರ್.ನಾಯಕ್, ವಾರಿಜಾ ಎಂ.ಪಿ, ಗೀತಾ ಪೈ, ಗೀತಾ ಬಿ. ರೈ, ಶಾಂತೇರಿ ಪೈ, ಸುರೇಶ್ ಪ್ರಭು, ದೀಪಾ ಕಾಮತ್, ಶೋಭಾ, ಬಸಪ್ಪ, ಹನುಮವ್ವ, ಮಣಿಕಂಠ, ಭರತ್ ಇದ್ದರು.

ಭಾಸ್ಕರ್ ರೈ ಕಟ್ಟ ನಿರೂಪಿಸಿದರು. ಗೀತಾ ಬಿ.ರೈ ಸಹಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರ ಜಾತ್ರೆಗೆ ರಾಜ್ಯದಿಂದ 25 ಸಾವಿರ ಭಕ್ತರು
ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಲಿ: ಸಮ್ಮೇಳನಾಧ್ಯಕ್ಷ ಸುರೇಶ್ ಸಂಸ್ಕೃತಿ