ಪಿಎಚ್‌ಸಿ, ಶಾಲೆ, ವಸತಿ ನಿಲಯಗಳಿಗೆ ಶಾಸಕರ ಭೇಟಿ

KannadaprabhaNewsNetwork |  
Published : Jul 06, 2025, 01:48 AM IST
05ಕೆಪಿಕೆವಿಟಿ01: | Kannada Prabha

ಸಾರಾಂಶ

ಸಮೀಪದ ಅಮೀನಗಡ ಮತ್ತು ಪಾಮನಕಲ್ಲೂರು ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರ, ಪ್ರೌಢ ಶಾಲೆ, ಕಸ್ತೂರಿ ಬಾ ವಸತಿ ನಿಲಯ, ಮೊರಾರ್ಜಿ ಶಾಲೆಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಭೇಟಿ ನೀಡಿ ಕುಂದು ಕೊರತೆ ಬಗ್ಗೆ ಪರಿಶೀಲನೆ ನಡೆಸಿ ಸ್ಥಳೀಯರು ಹಾಗೂ ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕನ್ನಡಪ್ರಭ ವಾರ್ತೆ ಕವಿತಾಳ

ಸಮೀಪದ ಅಮೀನಗಡ ಮತ್ತು ಪಾಮನಕಲ್ಲೂರು ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರ, ಪ್ರೌಢ ಶಾಲೆ, ಕಸ್ತೂರಿ ಬಾ ವಸತಿ ನಿಲಯ, ಮೊರಾರ್ಜಿ ಶಾಲೆಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಭೇಟಿ ನೀಡಿ ಕುಂದು ಕೊರತೆ ಬಗ್ಗೆ ಪರಿಶೀಲನೆ ನಡೆಸಿ ಸ್ಥಳೀಯರು ಹಾಗೂ ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಖಾಸಗಿ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸುತ್ತಿರುವಮೊರಾರ್ಜಿ ವಸತಿ ಶಾಲೆ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಶಾಲೆ ಆರಂಭಿಸಲು ಸೂಚಿಸಿದರು.ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ಸಮಸ್ಯೆಯ ಕುರಿತು ಮಾಹಿತಿ ಪಡೆದರು. ಕಾಯಂ ಎಂಬಿಬಿಎಸ್ ವೈದ್ಯರ ನೇಮಕ, ಆಸ್ಪತ್ರೆ ಹತ್ತಿರ ಬಸ್‌ ನಿಲುಗಡೆಗೆ ಕ್ರಮ ವಹಿಸುವಂತೆ ಸ್ಥಳೀಯರು ಮನವಿ ಮಾಡಿದರು.

ಡಾ.ತಬ್ ಸುಮ್ ಮಾತನಾಡಿ ಬೇಸಿಗೆ ಸಮಯದಲ್ಲಿ ನೀರಿನ ಸಮಸ್ಯೆ ಉಂಟಾಗುತ್ತದೆ ನೀರಿನ ಸಮಸ್ಯೆ ನೀಗಿಸುವಂತೆ ಶಾಸಕರಿಗೆ ಮನವಿ ಮಾಡಿದರು.

ಇಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಶಾಸಕರು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ತಂದೆ ತಾಯಿಗೆ ಕೀರ್ತಿ ತರಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು ಕಲಿಕಾ ಗುಣಮಟ್ಟ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲು ಶಿಕ್ಷಕರಿಗೆ ಸೂಚಿಸಿದರು. ಕಸ್ತೂರಿ ಬಾ ಬಾಲಕಿಯರ ವಸತಿ ನಿಲಯಕ್ಕೆ ಕಾರಿಡಾರ್‌ನಲ್ಲಿ ಗ್ರಿಲ್ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಮೀನಗಡ ಗ್ರಾಮದಲ್ಲಿ ವಿದ್ಯುತ್ತ ಸಮಸ್ಯೆ ಕುಡಿಯುವ ನೀರಿನ ಸಮಸ್ಯೆ ಚರಂಡಿ ಮತ್ತು ಸಿಸಿ ರಸ್ತೆಗಳು ದುರಸ್ತಿ ಮಾಡಬೇಕು ಅಮೀನಗಡ ಗ್ರಾಮದಿಂದ ಯತಗಲ್ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸೇತುವೆ ನಿರ್ಮಾಣ ಮಾಡಬೇಕು ಪಂಪ್ ಸೈಟ್ ಲೈನ್ ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ರೈತರು ಶಾಸಕರಿಗೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ,ಮುಖಂಡರು, ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!