ಕನ್ನಡಪ್ರಭ ವಾರ್ತೆ ಉಡುಪಿ
ಸಭೆಯಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ಮಾನಸ ಸಿ. ಪೈ, ಕೃಷ್ಣ ರಾವ್ ಕೊಡಂಚ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಪ್ರಧಾನ ಕಾರ್ಯದರ್ಶಿ ರೇಷ್ಮಾ ಶೆಟ್ಟಿ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತ ಶೆಟ್ಟಿ, ಮೋರ್ಚಾಗಳ ಅಧ್ಯಕ್ಷರಾದ ಅಶ್ವಿನಿ ಶೆಟ್ಟಿ, ಶ್ರೀವತ್ಸ, ಡೆನೀಸ್ ಪೆರಂಪಳ್ಳಿ, ವಾರ್ಡಿನ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
ಭಾನುವಾರ ಸುಬ್ರಮಣ್ಯ ನಗರ ಹಾಗೂ ಕೊಡಂಕೂರು ವಾರ್ಡ್ ಕಾರ್ಯಕರ್ತರ ಸಭೆಯಲ್ಲಿ ಬೇರೆ ಪಕ್ಷದಿಂದ ಬಂದ ಕಾರ್ಯಕರ್ತರನ್ನು ಬಿಜೆಪಿಗೆ ಬರ ಮಾಡಿಕೊಳ್ಳಲಾಯಿತು.ಈ ಸಂದರ್ಭ ಶಾಸಕರೊಂದಿಗೆ ಸುಬ್ರಮಣ್ಯ ವಾರ್ಡ್ ನಗರಸಭಾ ಸದಸ್ಯರಾದ ಜಯಂತಿ ಪೂಜಾರಿ, ಕೊಡಂಕೂರು ವಾರ್ಡ್ ನಗರಸಭಾ ಸದಸ್ಯರಾದ ಸಂಪಾವತಿ ಮತ್ತು ವಾರ್ಡಿನ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಗೆಲುವು ಸಾಧ್ಯವಿಲ್ಲವೆಂದು ಸಿದ್ದು ಅನುಕಂಪ ಹುಟ್ಟಿಸುವ ಮಾತು: ನಡಹಳ್ಳಿ
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ, ಈ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯಗೆ ಗೊತ್ತಾಗಿದೆ, ಹಾಗಾಗಿ ಜನರಲ್ಲಿ ಅನುಕಂಪ ಹುಟ್ಟಿಸುವ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಘಟಕದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಮುಗಿಲಿ, ಡಿಕೆಶಿ- ಸಿದ್ದರಾಮಯ್ಯ ನಡುವೆ ಕುರ್ಚಿ ತಿಕ್ಕಾಟ ದೊಡ್ಡದಾಗುತ್ತದೆ, ಚುನಾವಣೆ ನಂತರ ಕಾಂಗ್ರೆಸ್ ಹೋಳಾಗುತ್ತದೆ, ಸಿದ್ದರಾಮಯ್ಯ ಅಧಿಕಾರದಿಂದ ಇಳಿತಾರೆ ಎಂದು ಭವಿಷ್ಯ ನುಡಿದ ನಡಹಳ್ಳಿ ಅವರು, ಲೋಕಸಭೆಯಲ್ಲಿ ಸೋತರೆ ಸಿದ್ದರಾಮಯ್ಯ ಕುರ್ಚಿ ಬಿಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಶ್ರೀನಿವಾಸ ಸ್ಪಷ್ಟವಾಗಿ ಹೇಳಿದ್ದಾರೆ. ಶಾಸಕ ಬಾಲಕೃಷ್ಣ ಗ್ಯಾರೆಂಟಿ ಯೋಜನೆ ಮುಂದುವರಿಸಲು ಕಾಂಗ್ರೆಸ್ ಗೆ ಮತ ಹಾಕಿ ಎಂದು ಮತದಾರರಿಗೆ ಧಮ್ಕಿ ಹಾಕಿದ್ದಾರೆ, ಒಟ್ಟಾರೇ ರಾಜ್ಯದಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದರು.