ಬಜೆ ಅಣೆಕಟ್ಟು ಪ್ರದೇಶಕ್ಕೆ ಶಾಸಕ ಯಶ್‌ಪಾಲ್‌ ಭೇಟಿ

KannadaprabhaNewsNetwork |  
Published : Feb 10, 2026, 02:45 AM IST
ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಬಜೆ ಅಣೆಕಟ್ಟೆಗೆ ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದರು    | Kannada Prabha

ಸಾರಾಂಶ

ಬಜೆ ಅಣೆಕಟ್ಟು ಪ್ರದೇಶಕ್ಕೆ ಶಾಸಕ ಯಶ್‌ಪಾಲ್‌ ಭೇಟಿ

ಉಡುಪಿ: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳ ಜೊತೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ, ಮಾಹಿತಿ ಪಡೆದರು.

ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳ ಹರಿವು ಬಗ್ಗೆ ಚರ್ಚೆ ನಡೆಸಿದ ಶಾಸಕರು, ಉಡುಪಿಯ ಜನತೆಗೆ ನಿರಂತರ ನೀರು ಸರಬರಾಜಿಗೆ ಯಾವುದೇ ಸಮಸ್ಯೆಯಾಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾರಾಹಿ ಯೋಜನೆಯ ಮೂಲಕವೂ ನಗರಕ್ಕೆ ನೀರು ಸರಬರಾಜಾಗುತ್ತಿದ್ದು, ಬಜೆ ಅಣೆಕಟ್ಟಿನಲ್ಲೂ ನಿರಂತರ ನೀರು ಸರಬರಾಜಿಗೆ ಪೂರಕವಾಗಿ ಸಾಕಷ್ಟು ನೀರಿನ ಲಭ್ಯತೆ ಇದೆ ಎಂದರು.

ಈ ಸಂದರ್ಭ ಇತ್ತೀಚೆಗೆ ಉನ್ನತೀಕರಣಗೊಂಡ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸದಸ್ಯರಾದ ಸುಮಿತ್ರಾ ನಾಯಕ್, ಗಿರೀಶ್ ಅಂಚನ್, ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಗಿರಿಧರ ಆಚಾರ್ಯ, ಸಂತೋಷ್ ಜತ್ತನ್, ಟಿ.ಜಿ. ಹೆಗ್ಡೆ, ಮಂಜುನಾಥ ಮಣಿಪಾಲ, ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್, ವಾರಾಹಿ ಯೋಜನೆಯ ಆರ್ಕೇಶ್ ಗೌಡ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಸಾಹಿತ್ಯಕ್ಕೆ ಗದುಗಿನ ಕೊಡುಗೆ ಅಪಾರ: ಬಸವರಾಜ ಜಾಲಿಹಾಳ
ಹಂಪಿ ಉತ್ಸವ ಯಶಸ್ವಿಗೆ ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ