ಉಪ್ಪೂರು ನದಿಕೊರೆತ ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಭೇಟಿ

KannadaprabhaNewsNetwork |  
Published : Apr 21, 2026, 02:45 AM IST
ಉಪ್ಪೂರಿನ ನಾಗರಜಿಡ್ಡ ನದಿಕೊರೆತ ಪ್ರದೇಶಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿನೀಡಿದ್ದರು  | Kannada Prabha

ಸಾರಾಂಶ

ನಾಗರಜಿಡ್ದ ಬಳಿ ನದಿಕೊರೆತ ಪ್ರದೇಶಕ್ಕೆ ಅಧಿಕಾರಿಗಳ ಜೊತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉಡುಪಿ: ಉಪ್ಪೂರು ಗ್ರಾಪಂ ವ್ಯಾಪ್ತಿಯ ನಾಗರಜಿಡ್ದ ಬಳಿ ನದಿಕೊರೆತ ಪ್ರದೇಶಕ್ಕೆ ಅಧಿಕಾರಿಗಳ ಜೊತೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಭಾಗದಲ್ಲಿ ನದಿಕೊರೆತ ತೀವ್ರಗೊಂಡ ಪರಿಣಾಮ ಹಲವಾರು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಕಾಂಕ್ರೀಟ್ ಸಂಪರ್ಕ ರಸ್ತೆ ಕಡಿದು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಕ್ಷಣ ತುರ್ತು ಕಾಮಗಾರಿ ನಡೆಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.ನದಿಯ ಪಶ್ಚಿಮ ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿಗೆ ಹಾಕಿರುವ ಮಣ್ಣನ್ನು ತಕ್ಷಣ ತೆರವುಗೊಳಿಸಿ ಮಳೆಗಾಲದಲ್ಲಿ ನದಿಯ ನೀರಿನ ಸರಾಗ ಹರಿವಿಗೆ ಕ್ರಮ ವಹಿಸಿ ಪೂರ್ವ ಬದಿಯಲ್ಲಿ ನದಿ ಕೊರೆತ ನಿಯಂತ್ರಿಸಲು ಅಗತ್ಯ ಕ್ರಮವಹಿಸುವಂತೆ ಹೇಳಿದರು.ನಾಗರಜಿಡ್ಡ ಭಾಗದ ನದಿ ಕೊರೆತ ಸಮಸ್ಯೆ ಇರುವ ಸ್ಥಳಗಳಲ್ಲಿ ಶಾಶ್ವತ ತಡೆಗೋಡೆ ಕಾಮಗಾರಿ ಈಗಾಗಲೇ ಮಂಜೂರಾಗಿದ್ದು ಶೀಘ್ರ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ತಿಳಿಸಿದರು.

ಸ್ಥಳೀಯ ಪ್ರಮುಖರಾದ ಸತೀಶ್ ಪೂಜಾರಿ, ಅವಿನಾಶ್ ಶೆಟ್ಟಿ, ಮಹೇಶ್ ಕೋಟ್ಯಾನ್, ರಾಜೇಶ್ ರಾವ್, ಉಮೇಶ್, ಗ್ರಾಮ ಲೆಕ್ಕಾಧಿಕಾರಿ ಪ್ರಮೋದ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆದರ್ಶ, ಕರ್ನಾಟಕ ನೀರಾವರಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುನೀಲ್, ಸಹಾಯಕ ಅಭಿಯಂತರ ಪ್ರೀತಮ್ ಹಾಗೂ ಸ್ಥಳೀಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಗ್ನಿ ಅವಘಡಗಳಿಗೆ ಸುರಕ್ಷತಾ ಕ್ರಮ ತಿಳಿದುಕೊಳ್ಳುವುದು ಅವಶ್ಯಕ: ಲಕ್ಷ್ಮಿಕುಮಾರ್
ಸಾಹಿತ್ಯ ರಚನೆಯಾದಷ್ಟೂ ಗಟ್ಟಿಯಾಗುವ ಭಾಷೆ: ಮಹೇಶ್‌ ನಾಚಯ್ಯ