ಕನ್ನಡಪ್ರಭ ವಾರ್ತೆ ತಿಪಟೂರು
ನಗರದ ತಮ್ಮ ನಿವಾಸದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಬೇಸಿಗೆ ಪ್ರಾರಂಭಕ್ಕೂ ಮುಂಚೆಯೇ ನೀರಿಗೆ ಹಾಹಾಕಾರ ಉಂಟಾಗಿದೆ. ಕಳೆದ ಒಂದು ತಿಂಗಳಿನಿಂದಲೂ ಹೇಮಾವತಿ ನೀರನ್ನು ನಿಲ್ಲಿಸಲಾಗಿದ್ದು, ನಗರಕ್ಕೆ ಕುಡಿಯುವ ನೀರು ಪೂರೈಸುವ ಈಚನೂರು ಕೆರೆ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿದ್ದರೂ ಮುಂಜಾಗೃತ ಕ್ರಮ ವಹಿಸಬೇಕಿತ್ತು. ನಗರದಲ್ಲಿರುವ ಎಷ್ಟೋ ಬೋರ್ವೆಲ್ಗಳು ನೀರಿಲ್ಲದೇ ಒಣಗಿ ಹೋಗಿವೆ. ಹಣವುಳ್ಳವರು ಟ್ಯಾಂಕರ್ ಮೂಲಕ ನೀರು ತರಿಸಿಕೊಳ್ಳುತ್ತಿದ್ದು ಬಡವರು, ಕೂಲಿ ಕೆಲಸ ಮಾಡುವವರ ಗತಿ ಏನು? ಶಾಸಕರು ಕುಡಿಯುವ ನೀರಿಗಾಗಿ ಯಾವ ಅನುದಾನವನ್ನೂ ತಂದಿಲ್ಲ. ನೀರಿಗೆ ಬರ ಬಂದಾಗ ಬೋರ್ವೆಲ್ ಕೊರೆಸುತ್ತೇವೆಂದು ಹೇಳುತ್ತಿದ್ದಾರೆ. ತಿಪಟೂರು ಅಮಾನಿಕೆರೆಯಲ್ಲಿ ನೀರಿಲ್ಲದ ಕಾರಣ ನಗರದಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಲಕ್ಷಾಂತರ ರು. ಖರ್ಚು ಮಾಡಿ ಬೋರ್ವೆಲ್ ಕೊರೆಸಿದರೂ ಪ್ರಯೋಜನವಿಲ್ಲ ಎಂದು ಹೇಳಿದರು.
೬೦ಲಕ್ಷ ರು. ಖರ್ಚು ಮಾಡಿ ಎಸ್ಟಿಪಿ ಘಟಕದ ಮೋಟಾರ್ ದುರಸ್ತಿ ಮಾಡಿಸಿ ಜನರಿಗೆ ಶುದ್ಧ ಕುಡಿಯುವ ನೀರು ಕೊಡಲು ಸಾಧ್ಯವಾಗದ ಶಾಸಕರು, ಈಗ ಕೋಟ್ಯಾಂತರ ರು. ಖರ್ಚು ಮಾಡಿ ನೊಣವಿನಕೆರೆಯಿಂದ ನಗರಕ್ಕೆ ನೀರು ತರುತ್ತೇನೆಂದು ಹೊರಟಿದ್ದಾರೆ. ಇದರಿಂದ ಸಾರ್ವಜನಿಕರ ತೆರಿಗೆ ಹಣ ವ್ಯಯವಾಗಲಿದೆಯೇ ಹೊರತು ನೀರಿಗೆ ಶಾಶ್ವತ ಪರಿಹಾರ ಸಾಧ್ಯವಿಲ್ಲ. ಆದ್ದರಿಂದ ತ್ವರಿತವಾಗಿ ನೀರಿನ ಅಭಾವದ ಬಗ್ಗೆ ಸರ್ಕಾರ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ನಗರ ವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಬೇಕೆಂದು ಆಗ್ರಹಿಸಿದರು.ವಿದ್ಯುತ್ ಕಣ್ಣಾಮುಚ್ಚಾಲೆ: