ಗುಂಡ್ಲುಪೇಟೆ: 3 ಆ್ಯಂಬುಲೆನ್ಸ್‌ಬಿಡಲು ಸಚಿವರಿಗೆ ಶಾಸಕ ಪತ್ರ

KannadaprabhaNewsNetwork |  
Published : Feb 15, 2026, 02:45 AM IST
 ನರಸಿಂಹರಾಜಪುರ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲಿನ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರ ನೀಡಿದ ಯೋಗ ಮ್ಯಾಟ್ ನ್ನು ಕರ್ನಾಟಕ  ಪಬ್ಲಿಕ್ ಸ್ಕೂಲಿನ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಲಕ್ಷ್ಮಣ ಶೆಟ್ಟಿ ಮಕ್ಕಳಿಗೆ ವಿತರಣೆ ಮಾಡಿದರು. | Kannada Prabha

ಸಾರಾಂಶ

ಗುಂಡ್ಲುಪೇಟೆಯಲ್ಲಿ ‘4ರಲ್ಲಿ 3 ಆ್ಯಂಬುಲೆನ್ಸ್‌ ತುರ್ತು ಸೇವೆಗೆ ಪಡಿಪಾಟಲು’ ಶೀರ್ಷಿಕೆ ಅಡಿ ಫೆ.12ರಂದು ವರದಿ ಪ್ರಕಟಿಸಿತ್ತು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ 3 ಆ್ಯಂಬುಲೆನ್ಸ್‌ (108 ವಾಹನ) ಒದಗಿಸಬೇಕು ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಪತ್ರ ಬರೆದಿದ್ದಾರೆ.

ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ ಇರುವ ಆ್ಯಂಬುಲೆನ್ಸ್‌ಗಳು ಕೆಟ್ಟಿದ್ದು, ರಸ್ತೆ ಅಪಘಾತ, ಹೃದಯ ಸಂಬಂಧಿ ಕಾಯಿಲೆ, ಹಾವು ಕಡಿತ, ಮಹಿಳೆಯರ ಹೆರಿಗೆ, ಮಕ್ಕಳು ಹಾಗೂ ವೃದ್ಧರಿಗೆ ತುರ್ತು ಸೇವೆಗೆ ಅನನುಕೂಲವಾಗುತ್ತಿದೆ ಎಂದು ಸಚಿವರ ಗಮನ ಸೆಳೆದಿದ್ದಾರೆ.

ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಗೆ 2 ಹಾಗೂ ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ 1 ಆ್ಯಂಬುಲೆನ್ಸ್‌ ತುರ್ತಾಗಿ ಒದಗಿಸಬೇಕು ಮನವಿ ಮಾಡಿದ್ದಾರೆ.

ಇತ್ತೀಚಗೆ ಬೇಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲು 108 ಆ್ಯಂಬುಲೆನ್ಸ್‌ ಕರೆ ಮಾಡಿದರೂ ಬಾರದ್ದಕ್ಕೆ ಸಾರ್ವಜನಿಕರು ದೂರಿದ್ದರು.

ಸಾರ್ವಜನಿಕರ ದೂರಿನ ಜೊತೆಗೆ ಫೆ.12ರಂದು ‘ಕನ್ನಡಪ್ರಭ’ 4ರಲ್ಲಿ 3 ಆ್ಯಂಬುಲೆನ್ಸ್‌ ರಿಪೇರಿ: ತುರ್ತು ಸೇವೆಗೆ ಪಡಿಪಾಟಲು ಎಂದು ವರದಿ ಪ್ರಕಟಿಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೈನಿಕರು ನಮ್ಮ ನಿಜವಾದ ಹೀರೋಗಳು
ಸಾಧನಾ ಸಮಾವೇಶವಲ್ಲ; ಯಾತನಾ ಸಮಾವೇಶ: ಸಂಸದ ರಾಘವೇಂದ್ರ