ರಸ್ತೆ ಮರು ಡಾಂಬರೀಕರಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ

KannadaprabhaNewsNetwork |  
Published : Dec 29, 2025, 01:45 AM IST
28ಎಚ್ಎಸ್ಎನ್17: ಬೇಲೂರು ತಾಲೂಕು ಆರೇಹಳ್ಳಿ ಪಂಚಾಯಿತಿ ವ್ಯಾಪ್ತಿಯ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ ಮರು ಡಾಂಬರೀಕರಣ ಕಾಮಗಾರಿ ಆರಂಭಗೊಳ್ಳುವ ಹಿನ್ನೆಲೆ ಶಾಸಕ ಹುಲ್ಗಳ್ಳಿ ಸುರೇಶ್ ವಾಟೇಹಳ್ಳಿಯ ರಾಜ್ಯ ಹೆದ್ದಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಅರೇಹಳ್ಳಿ ಗ್ರಾಪಂ ವ್ಯಾಪಿಯ ವಿರಾಜಪೇಟೆ - ಬೈಂದೂರು ರಾಜ್ಯ ಹೆದ್ದಾರಿಗೆ ಮರು ಡಾಂಬರೀಕರಣ ಕಾಮಗಾರಿ ಆರಂಭವಾಗುವ ಹಿನ್ನೆಲೆಯಲ್ಲಿ ವಾಟೇಹಳ್ಳಿ ಬಳಿ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರೇಹಳ್ಳಿ ಪಟ್ಟಣದಿಂದ ಬ್ಯಾದನೆ ಗ್ರಾಮದವರೆಗೂ ಸುಮಾರು ೧.೫ ಕೋಟಿ ರು. ವೆಚ್ಚದಲ್ಲಿ ೨.೫ ಕಿ.ಮೀ.ರಸ್ತೆಯ ಮರು ಡಾಂಬರೀಕರಣ ಕಾಮಗಾರಿ ಸದ್ಯದಲ್ಲಿ ಆರಂಭವಾಗಲಿದೆ. ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ, ಇದಾಗಿರುವುದರಿಂದ ರಸ್ತೆಯು ಅಲ್ಲಲ್ಲಿ ಗುಂಡಿ ಬಿದ್ದು ಸುಗಮ ಸಂಚಾರ ಸವಾಲಾಗಿ ಪರಿಣಮಿಸುತ್ತಿದೆ. ಹಾಗಾಗಿ ಈ ರಸ್ತೆಯ ಮರು ಡಾಂಬರೀಕರಣಕ್ಕೆ ಆದ್ಯತೆ ನೀಡಿ ಶೀಘ್ರವಾಗಿ ಕಾಮಗಾರಿ ಮುಗಿಸಿ ಸವಾರರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ಕಳೆದ ಬಾರಿ ಚರ್ಚ್‌ವರೆಗೆ ಅಂದಾಜು ಒಂದು ಕೋಟಿ ರು. ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಉಳಿದ ರಸ್ತೆಗೆ ಇದೀಗ ಮರು ಡಾಂಬರೀಕರಣ ಮಾಡಲಾಗುತ್ತ ದೆ ಎಂದು ಶಾಸಕ ಸುರೇಶ್ ಹೇಳಿದರು.

ತಾಲೂಕು ಲೋಕೋಪಯೋಗಿ ಇಲಾಖೆ ವತಿಯಿಂದ ಅರೇಹಳ್ಳಿ ಗ್ರಾಪಂ ವ್ಯಾಪಿಯ ವಿರಾಜಪೇಟೆ - ಬೈಂದೂರು ರಾಜ್ಯ ಹೆದ್ದಾರಿಗೆ ಮರು ಡಾಂಬರೀಕರಣ ಕಾಮಗಾರಿ ಆರಂಭವಾಗುವ ಹಿನ್ನೆಲೆಯಲ್ಲಿ ವಾಟೇಹಳ್ಳಿ ಬಳಿ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರೇಹಳ್ಳಿ ಪಟ್ಟಣದಿಂದ ಬ್ಯಾದನೆ ಗ್ರಾಮದವರೆಗೂ ಸುಮಾರು ೧.೫ ಕೋಟಿ ರು. ವೆಚ್ಚದಲ್ಲಿ ೨.೫ ಕಿ.ಮೀ.ರಸ್ತೆಯ ಮರು ಡಾಂಬರೀಕರಣ ಕಾಮಗಾರಿ ಸದ್ಯದಲ್ಲಿ ಆರಂಭವಾಗಲಿದೆ. ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ, ಇದಾಗಿರುವುದರಿಂದ ರಸ್ತೆಯು ಅಲ್ಲಲ್ಲಿ ಗುಂಡಿ ಬಿದ್ದು ಸುಗಮ ಸಂಚಾರ ಸವಾಲಾಗಿ ಪರಿಣಮಿಸುತ್ತಿದೆ. ಹಾಗಾಗಿ ಈ ರಸ್ತೆಯ ಮರು ಡಾಂಬರೀಕರಣಕ್ಕೆ ಆದ್ಯತೆ ನೀಡಿ ಶೀಘ್ರವಾಗಿ ಕಾಮಗಾರಿ ಮುಗಿಸಿ ಸವಾರರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಈ ವೇಳೆ ಚಂದ್ರಶೇಖ‌ರ್, ಅಶೋಕ್, ಭರತ್, ಪ್ರಕಾಶ್, ಮಹೇಶ್ ಶೆಟ್ಟಿ, ಮಂಜುನಾಥ್ ಶೆಟ್ಟಿ, ಆನಂದ, ಗುಂಡಪ್ಪ ರಾಜ್ ಹಾಗೂ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತ್ಯಾಗ, ಬಲಿದಾನ, ಆದರ್ಶಗಳ ಮೇಲೆ ಹುಟ್ಟಿದ ಕಾಂಗ್ರೆಸ್: ಎಸ್.ಆರ್. ಪಾಟೀಲ
ರೈತ ಸೃಷ್ಟಿಯ ಮೊದಲ ವಿಜ್ಞಾನಿ, ಜಮೀನು ಪ್ರಯೋಗಾಲಯ: ಮಾಜಿ ಸಚಿವ ನಿರಾಣಿ