ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಬುಧವಾರ ನಗರದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾದಿಗರು ಸೇರಿದಂತೆ ಪರಿಶಿಷ್ಟ ಗುಂಪಿನಲ್ಲಿರುವ ಎಲ್ಲರಿಗೂ ಅವರವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಆಗಬೇಕೆಂಬುದು ನನ್ನ ಮೂಲ ಉದ್ದೇಶ. ಈ ಕಾರಣಕ್ಕೆ ಸಚಿವ ಸ್ಥಾನ ನನಗೆ ಬೇಕಿಲ್ಲ. ಒಳಮೀಸಲಾತಿ ಜಾರಿಗೊಂಡರೇ ಅದೇ ನನ್ನ ಪಾಲಿಗೆ ಬಹುದೊಡ್ಡ ಸ್ಥಾನಮಾನ ಎಂದರು.
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ನಿಮ್ಮನ್ನು ಸೋಲಿಸಲು ಬಹುದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಹಾಗಾಗಿ ಚುನಾವಣೆಗೆ ಸ್ಪರ್ಧೆ ಮಾಡಬೇಡಿಯ ರಾಜ್ಯಾದ್ಯಂತ ಪಕ್ಷದ ಪರ ಪ್ರಚಾರಕ್ಕೆ ಸಮಯ ಮೀಸಲಿಡಿ, ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸಚಿವರನ್ನಾಗಿಸಿಕೊಳ್ಳಲಾಗುವುದು ಎಂದು ವರಿಷ್ಠರು ಸೂಚಿಸಿದ್ದರು.ಹೋರಾಟದಿಂದಲೇ ಮೇಲೆ ಬಂದ ನನಗೆ ಚುನಾವಣೆಯಲ್ಲಿ ಗೆದ್ದೇ ಮಂತ್ರಿ ಆಗಬೇಕು ಎಂಬ ಮಹಾದಾಸೆ ಇತ್ತು. ಜೊತೆಗೆ ಗೆದ್ದೇ ಗೆಲ್ಲುತ್ತೇನೆ, ಹೊಳಲ್ಕೆರೆ ಕ್ಷೇತ್ರದ ಜನ ಕೈಬಿಡುವುದಿಲ್ಲವೆಂಬ ಭರವಸೆ ಇತ್ತು. ಆದರೆ, ವರಿಷ್ಠರ ಮಾತು ಕೇಳದೆ ಸ್ಪರ್ಧೆ ಮಾಡಿ ಸೋತಿದ್ದೇನೆ. ಈಗ ನಾನು ಹೇಗೆ ಎಂಎಲ್ಸಿ, ಸಚಿವ ಸ್ಥಾನ ಕೊಡಿ ಎಂದು ಕೇಳಲು ಸಾಧ್ಯ ಎಂದರು.
ಹಸಿದ ಹೊಟ್ಟೆಗೆ ಅನ್ನ, ಬಡ ಮಕ್ಕಳಿಗೆ ಬಟ್ಟೆ, ಊಟ, ಗುತ್ತಿಗೆಯಲ್ಲಿ ಎಸ್ಸಿ, ಎಸ್ಟಿಗೆ ಮೀಸಲು ಹೀಗೆ ಹತ್ತಾರು ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಈ ಕಾರಣಕ್ಕೆ ಕೊಪ್ಪಳದಲ್ಲಿ ನಮ್ಮ ಪಾಲಿಗೆ ಸಿದ್ದರಾಮಯ್ಯ ಎರಡನೇ ಅಂಬೇಡ್ಕರ್ ಎಂದು ಹೇಳಿದ್ದೇನೆ. ಇದರಲ್ಲಿ ಹೊಗಳಿಕೆ ಏನು ಬಂತು, ಯಾರಿಗೆ ಅಪಮಾನ ಆಗಿದೆ ಹೇಳಿ ಎಂದರು.