ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಸಂಸ್ಥೆಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ನೌಕರ ಮಾಗಳ್ಳಿ ಅವರು ಕ್ಯಾನ್ರ್ನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆತನಿಗೆ ಶಸ್ತ್ರ ಚಿಕಿತ್ಸೆಗೆ ನೌಕರರ ಕಲ್ಯಾಣ ನಿಧಿಯಿಂದ 3 ಲಕ್ಷ ರು. ಆರ್ಥಿಕ ನೆರವು ನೀಡಿ ಮಾತನಾಡಿದರು.
ಪ್ರತಿ ತಿಂಗಳು ನೌಕರರ ಸಂಬಳದಿಂದ 45 ಸಾವಿರ ಮತ್ತು ಸಂಸ್ಥೆಯಿಂದ 25 ಸಾವಿರ ರುಗಳನ್ನು ನೌಕರರ ಕಲ್ಯಾಣ ನಿಧಿಗೆ ಮೀಸಲಿಡಲಾಗುತ್ತದೆ. ಕಳೆದ 6 ತಿಂಗಳ ಹಿಂದೆ ನೌಕರರ ನಿಧಿ ಸ್ಥಾಪಿಸಿದ್ದು ಮಾರಣಾಂತರ ಕಾಯಿಲೆಗೆ ತುತ್ತಾದವರಿಗೆ 5 ರಿಂದ 6 ಲಕ್ಷ ಚಿಕಿತ್ಸೆ ವೆಚ್ಚ ನೀಡಲಾಗುವುದು ಎಂದರು.ಸಂಸ್ಥೆಯು ಸದ್ದಿಲ್ಲದೆ ಸಮಾಜಮುಖಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿದೆ. ಸಂಸ್ಥಾಪಕ ಅಧ್ಯಕ್ಷರಾದ ಜಿ.ಮಾದೇಗೌಡರ ಆಶಯದಂತೆ ನೌಕಕರಿಗೆ ಸದಾ ನೆರವಾಗುತ್ತಿವೆ ಎಂದರು.
ಆರೋಗ್ಯ ಮೇಳದಲ್ಲಿ 3 ಸಾವಿರ ಜನರ ಆರೋಗ್ಯ ತಪಾಸಣೆಗೆ: ಗಂಜೀಗೆರೆ ಮಹೇಶ್
ಆರ್.ಟಿ.ಓ ಮಲ್ಲಿಕಾರ್ಜುನ್ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಜಯನಗರ ಬಡಾವಣೆ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಆವರಣದಲ್ಲಿ ನಡೆದ ಬೃಹತ್ ಆರೋಗ್ಯ ಮೇಳದಲ್ಲಿ ಸುಮಾರು 3 ಸಾವಿರ ಜನ ಆರೋಗ್ಯ ತಪಾಸಣೆಗೆ ಒಳಗಾದರು ಎಂದು ಟ್ರಸ್ಟಿ ಗಂಜೀಗೆರೆ ಮಹೇಶ್ ತಿಳಿಸಿದರು.
ಅಗತ್ಯವಿರುವವರಿಗೆ ಸ್ಥಳದಲ್ಲಿಯೇ ಔಷಧಿ, ಮಾತ್ರೆಗಳನ್ನು ವಿತರಿಸಲಾಯಿತು. ಇದೇ ವೇಳೆ ರಕ್ತದಾನ ಶಿಬಿರದಲ್ಲಿ 100ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. 415 ಮಂದಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಯಿಸಲಾಯಿತು ಎಂದರು.
ಈ ವೇಳೆ ತಾಲೂಕು ಕಸಪಾ ಮಾಜಿ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್, ಪುರಸಭೆ ಮಾಜಿ ಸದಸ್ಯ ಕೆ.ಆರ್.ನೀಲಕಂಠ, ಶಿಕ್ಷಕರಾದ ಸಣ್ಣೇಗೌಡ, ದೇವರಾಜು, ತಮ್ಮೆಗೌಡ ಇದ್ದರು.