ಕನ್ನಡಪ್ರಭ ವಾರ್ತೆ ಬೇಲೂರು
ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಕರ್ತರು ಮತ್ತು ವಿವಿಧ ಇಲಾಖೆಗಳೊಂದಿಗೆ ಸ್ನೇಹ ಸಮ್ಮಿಲನ ಕ್ರಿಕೆಟ್ ಪಂದ್ಯಾವಳಿ ಸಮಾರಂಭದಲ್ಲಿ ಮಾತನಾಡಿದರು.ಕ್ರೀಡೆಯಲ್ಲಿ ಗೆಲ್ಲುವ ಹುಮ್ಮಸ್ಸಿಗಿಂತ ಭಾಗವಹಿಸುವುದು ಬಹುಮುಖ್ಯ. ಕ್ರೀಡೆಯಲ್ಲಿ ಸೋಲು- ಗೆಲುವು ಸರ್ವೇ ಸಾಮಾನ್ಯವಾಗಿದ್ದು, ಗೆದ್ದಾಗ ಹಿಗ್ಗದೇ, ಸೋತಾಗ ಕುಗ್ಗದೇ ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದರು.
ಸಿಪಿಐ ರೇವಣ್ಣ ಮಾತನಾಡಿ, ಪತ್ರಕರ್ತರು ಮತ್ತು ಇಲಾಖೆಗಳ ನಡುವೆ ಸಾಮರಸ್ಯ ತರಲು ಮತ್ತು ಒತ್ತಡ ಬದುಕಿನಿಂದ ಹೊರಗೆ ಬರಲು ಇಂತಹ ಕ್ರೀಡಾಕೂಟವನ್ನು ಪತ್ರಕರ್ತರ ಸಂಘ ಹಮ್ಮಿಕೊಂಡಿರುವುದು ಸಂತೋಷವಾಗಿದೆ. ಕ್ರೀಡೆ ಮನುಷ್ಯನಿಗೆ ಅತ್ಯಂತ ಪ್ರಮುಖ ಪಾತ್ರ ವಹಿಸುವ ಹಿನ್ನೆಲೆ ವಯಸ್ಸಿನ ಅಂತರವಿಲ್ಲದೆ ಕ್ರೀಡೆ, ಯೋಗ, ಧ್ಯಾನ ಇವುಗಳಲ್ಲಿ ಭಾಗವಹಿಸಿ ಆರೋಗ್ಯ ಸದೃಢವಾಗಿಡಬೇಕು ಎಂದರು.ಬೇಲೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಬಿ.ಶಿವರಾಜ್ ಮಾತನಾಡಿ, ಪತ್ರಕರ್ತರ ಸಂಘ ಕಳೆದ ಮೂರು ದಶಕದಿಂದ ಮಾಧ್ಯಮ ದಿನಾಚರಣೆ ಅಂಗವಾಗಿ ವಿವಿಧ ಇಲಾಖೆಯೊಂದಿಗೆ ಸ್ನೇಹ ಸಮ್ಮಿಲನ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡು ಬರುತ್ತಿದೆ. ಈ ಬಾರಿ ಕೂಡ ಸುಮಾರು ೧೨ ತಂಡಗಳು ಭಾಗವಹಿಸಿವೆ. ವಿಜೇತ ತಂಡಗಳಿಗೆ ಮಾಧ್ಯಮ ದಿನಾಚರಣೆ ದಿನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪತ್ರಕರ್ತರ ಸಂಘ ಸಮಾಜಮುಖಿ ಮತ್ತು ಜನಪರ ಕೆಲಸಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದರು.