ಮೊಬೈಲ್‌ಗಳು ಯುವ ಸಮೂಹಕ್ಕೆ ಮಾರಕ: ಮುಖ್ಯ ಶಿಕ್ಷಕ ರಾಜು

KannadaprabhaNewsNetwork |  
Published : Dec 24, 2024, 12:45 AM IST
22ಕೆಆರ್ ಎಂಎನ್ 1.ಜೆಪಿಜಿಹಾರೋಹಳ್ಳಿ ತಾಲೂಕಿನ ಟಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಪಡುವಣಗೆರೆ ಸರ್ಕಾರಿ ಶಾಲಾವರಣದಲ್ಲಿ ಮಹಿಳಾ ಮತ್ತು ಮಕ್ಕಳ ವಿಶೇಷ ಸಭೆ ನಡೆಯಿತು. | Kannada Prabha

ಸಾರಾಂಶ

ಯುವ ಸಮೂಹ ಮೊಬೈಲ್ ಗೀಳಿಗೆ ಬಿದ್ದು ಸಂಸ್ಕಾರವನ್ನೇ ಕಲಿಯುತ್ತಿಲ್ಲ ಎಂದು ಮುಖ್ಯ ಶಿಕ್ಷಕ ರಾಜು ವಿಷಾದಿಸಿದರು.

ಹಾರೋಹಳ್ಳಿ: ಮೊಬೈಲ್‌ಗಳಿಂದ ಯುವ ಸಮೂಹ ದಾರಿ ತಪ್ಪುತ್ತಿದೆ. ಅದರಿಂದ ಉಪಯೋಗ ಎಷ್ಟಿದೆಯೋ ಅಷ್ಟೇ ದುಷ್ಪರಿಣಾಮಗಳೂ ಇವೆ ಎಂದು ಪಡುವಣಗೆರೆ ಮುಖ್ಯ ಶಿಕ್ಷಕ ರಾಜು ಹೇಳಿದರು.

ತಾಲೂಕಿನ ಟಿ. ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಪಡುವಣಗೆರೆ ಸರ್ಕಾರಿ ಶಾಲಾ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಸರ್ಕಾರ ವಿಶೇಷ ನಿಯಮಗಳನ್ನು ಜಾರಿಗೊಳಿಸಿದೆ ವುಗಳನ್ನು ಎಲ್ಲರೂ ಅರಿಯುವ ಕೆಲಸ ಮಾಡಬೇಕು. ಯುವ ಸಮೂಹ ಮೊಬೈಲ್ ಗೀಳಿಗೆ ಬಿದ್ದು ಸಂಸ್ಕಾರವನ್ನೇ ಕಲಿಯುತ್ತಿಲ್ಲ ಎಂದು ವಿಷಾದಿಸಿದರು.

ಇಂದಿನ ದಿನಮಾನಸಗಳಲ್ಲಿ ಸರ್ಕಾರ ಬಾಲ್ಯವಿವಾಹದ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ ಸಂಪೂರ್ಣ ತಡೆಯಲು ಸಾಧ್ಯವಾಗುತ್ತಿಲ್ಲ. ಬಾಲ್ಯ ವಿವಾಹದಿಂದ ಆ ಮಗುವಿನ ಮೇಲೆ ಕೆಟ್ಟ ದುಷ್ಪರಿಣಾಮ ಬೀರಲಿದೆ. ಎಲ್ಲಾ ಪೋಷಕರೂ ಇದನ್ನು ಅರಿತುಕೊಂಡಾಗ ಮಾತ್ರ ಈ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದು ತಿಳಿಸಿದರು.

ಗ್ರಾಪಂ ಆಡಳಿತಾಧಿಕಾರಿ ಶ್ರೀನಿವಾಸ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಹಕ್ಕುಗಳನ್ನು ತಿಳಿಸುವ ಸಲುವಾಗಿ ಈ ಸಭೆಯನ್ನು ಆಯೋಜಿಸಲಾಗಿದ್ದು ಸಭೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಂಗನವಾಡಿ ಮೇಲ್ವಿಚಾರಕಿ ಸರಸ್ವತಿ, ಪಿಡಿಒ ಶಿವಪ್ರಸಾದ್, ಶಿಕ್ಷಕ ಸುರೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

22ಕೆಆರ್ ಎಂಎನ್ 1.ಜೆಪಿಜಿ

ಹಾರೋಹಳ್ಳಿ ತಾಲೂಕಿನ ಟಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಪಡುವಣಗೆರೆ ಸರ್ಕಾರಿ ಶಾಲಾವರಣದಲ್ಲಿ ಮಹಿಳಾ ಮತ್ತು ಮಕ್ಕಳ ವಿಶೇಷ ಸಭೆ ನಡೆಯಿತು.

----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಭ್ರಮದ ಕ್ರಿಸ್‌ಮಸ್‌ ಆಚರಣೆಗೆ ಕ್ಷಣಗಣನೆ
ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಶ್ರಮಿಸಲಿ: ಮಂಜುನಾಥ ಕಂಬಳಿ