ಕನ್ನಡಪ್ರಭ ವಾರ್ತೆ ಹುಕ್ಕೇರಿ
ಇಲ್ಲಿನ ತಾಪಂ ಸಭಾಭವನದಲ್ಲಿ ಶನಿವಾರ ತಾಲೂಕಾ ಸ್ವೀಪ್ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ ಕೇಂದ್ರ ಪುರಷ್ಕೃತ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಪೋಸ್ಟರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಾನುವಾರುಗಳಿಗೆ ಲಸಿಕೆ ಹಾಕುವುದರೊಂದಿಗೆ ಮತ ಅರಿವು ಮಾಡಲಾಗುತ್ತಿದೆ ಎಂದರು.
ತಾಲೂಕಿನಲ್ಲಿ 1,05,693 ದನಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದರಿಂದ ನಾವು ಒಂದು ಲಕ್ಷ ಮನೆಗಳಿಗೆ ಮತದಾನ ಜಾಗೃತಿ ಮಾಡಿದಂತಾಗುತ್ತದೆ. ಜಿಲ್ಲೆಯಲ್ಲಿಯೇ ಇದೊಂದು ವಿಭಿನ್ನ ಕಾರ್ಯಕ್ರಮವಾಗಿದ್ದು ಮತದಾನ ಪ್ರೇರಣೆಗೆ ಪೂರಕವಾಗಿದೆ. ಮತದಾನದ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸುವ ಕಾರ್ಯ ಮಾಡಿದಂತಾಗುತ್ತದೆ. ಮತದಾನ ಮಾಡುವದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಪ್ರತಿ ಮತವೂ ಅಮೂಲ್ಯವಾಗಿದೆ ಎಂದು ಅವರು ಹೇಳಿದರು.ಬರುವ ಮೇ. 7 ರಂದು ಮತಗಟ್ಟೆಗಳಿಗೆ ಹೋಗಿ ಮತದಾನ ಮಾಡಿ ತಮ್ಮ ಹಕ್ಕನ್ನು ಚಲಾಯಿಸಬೇಕು. ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ನಿರ್ಭಿತಿಯಿಂದ ಮತ ಚಲಾಯಿಸಬೇಕು. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಡಾ.ಸಾಗರ ಪಾಂಡವ, ಡಾ.ಸಿದ್ಧಾರೂಢ ಮೊಕಾಶಿ, ಡಾ.ಕವಿರಾಜ ಐರಾನಿ, ಡಾ.ಶಹನಾಜ್ ಮೊಹಮ್ಮದ, ತಾಲೂಕಿನ ಎಲ್ಲ ಪಶು ವೈದ್ಯಾಧಿಕಾರಿಗಳು, ಪಶು ವೈದ್ಯಕೀಯ ಪರಿಕ್ಷಕರು, ಪಶು ಸಖಿಯರು, ಇಲಾಖೆಯೇತರ ಲಸಿಕೆದಾರರು ಮತ್ತಿತರರು ಉಪಸ್ಥಿತರಿದ್ದರು.