ಕನ್ನಡಪ್ರಭ ವಾರ್ತೆ ಬಳ್ಳಾರಿ
ಅಣುಕು ಪ್ರದರ್ಶನದಲ್ಲಿ ನುರಿತ ಅಗ್ನಿಶಾಮಕ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜೆಎಸ್ಡಬ್ಲ್ಯೂ ನ ಕ್ಯೂಆರ್ಟಿ, ಸಂಶೋಧನಾ ಮತ್ತು ರಕ್ಷಣೆ, ವಿಮಾನ ನಿಲ್ದಾಣ ಭದ್ರತಾ ತಂಡ, ಶ್ವಾನದಳ, ಅಗ್ನಿಶಾಮಕ ದಳದ ತಂಡ ಮತ್ತು ಇತರೆ ತಂಡ ಒಳಗೊಂಡಂತೆ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಅಣುಕು ಪ್ರದರ್ಶನ ನಡೆಸಿಕೊಟ್ಟರು.
ಅಣುಕು ಪ್ರದರ್ಶನದಲ್ಲಿ ಅನಾಹುತ ಸಂಭವಿಸಿದಲ್ಲಿ ಕೈಗೊಳ್ಳಬಹುದಾದ ಪ್ರಥಮ ಚಿಕಿತ್ಸಾ ಕಾರ್ಯ, ಸುರಕ್ಷಿತ ಸ್ಥಳದಲ್ಲಿ ಅಡಗುವಿಕೆ, ಶ್ವಾನಗಳ ಕಾರ್ಯಾಚರಣೆ ಹಾಗೂ ಇತರೆ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಯಪಡಿಸಲಾಯಿತು.ಈ ಸಂದರ್ಭ ಸಹಾಯಕ ಆಯುಕ್ತ ಪಿ.ಪ್ರಮೋದ್, ತೋರಣಗಲ್ಲು ವಿಭಾಗ ಡಿ.ಎಸ್.ಪಿ ಪ್ರಸಾದ್ ಗೋಖಲೆ ಸೇರಿದಂತೆ ಆರೋಗ್ಯ ಇಲಾಖೆ, ಕಾರ್ಖಾನೆಗಳು ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಗೃಹ ರಕ್ಷಕದಳ ಅಧಿಕಾರಿಗಳು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಮತ್ತು ಸಾರ್ವಜನಿಕರಿದ್ದರು.