ಕನ್ನಡಪ್ರಭ ವಾರ್ತೆ ಹೊಸಕೋಟೆ
ಜಡಿಗೇನಹಳ್ಳಿ ಹೋಬಳಿ ದಬ್ಬಗುಂಟಹಳ್ಳಿ ಗ್ರಾಮದ ಹಾಲಿನ ಡೇರಿಯ ನೂತನ ಕಟ್ಟಡ ಉದ್ಘಾಟನೆ, ಕನಕದಾಸರ ಜಯಂತಿ, ಕನಕದಾಸರ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಹಾಗೂ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
60 ಕುಟುಂಬಗಳಿರುವ ಈ ಗ್ರಾಮದಲ್ಲಿ 45 ಕುಟುಂಬಗಳಿಗೆ ಹೈನುಗಾರಿಕೆಯೇ ಆದಾಯದ ಮೂಲವಾಗಿದ್ದು, 25 ವರ್ಷಗಳ ಹಿಂದೆ 25 ಲೀಟರ್ ಹಾಲಿನಿಂದ ಕೃಷ್ಣಪ್ಪ ಎಂಬುವವರ ಶೆಡ್ಡಿನಲ್ಲಿ ಪ್ರಾರಂಭವಾದ ಸಂಘವು ಇಂದು 750 ಲೀಟರ್ ನಷ್ಟು ಹಾಲು ಉತ್ಪಾದಿಸುತಿದ್ದು, 9 ಲಕ್ಷ ರು. ಮೊತ್ತದಲ್ಲಿ ಸುಸಜ್ಜಿತವಾದ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿರುವುದಲ್ಲದೆ 9 ಲಕ್ಷ ರು.ನಿವ್ವಳ ಲಾಭವನ್ನು ಕೂಡ ಗಳಿಸಿದ್ದು, ಇದಕ್ಕೆ ಹಾಲು ಉತ್ಪಾದಕರು ಕಾರಣರಾದರೂ ಕೂಡ ಅಧ್ಯಕ್ಷರಾಗಿ ನಾರಾಯಣಪ್ಪನವರು, ನಿರ್ದೇಶಕರ ಮತ್ತು ಹಾಲು ಉತ್ಪಾದಕರ ಸಹಕಾರದಿಂದ 25 ವರ್ಷಗಳ ನಿಸ್ವಾರ್ಥ ಸೇವೆ ಸಂಘವನ್ನು ಲಾಭದಾಯಕಗೊಳಿಸಿರುವುದು ಹೆಮ್ಮೆಯ ವಿಚಾರ ಎಂದರು.ಸಂಘದ ಅಧ್ಯಕ್ಷ ನಾರಾಯಣಪ್ಪ ಮಾತನಾಡಿ, ನಾವು 24 ವರ್ಷಗಳ ಹಿಂದೆ ಆಗ ನಿರ್ದೇಶಕರಾಗಿದ್ದ ಹುಲ್ಲೂರು ಮಂಜುನಾಥ್ರವರನ್ನು ಮನವಿ ಮಾಡಿದಾಗ ಕೇವಲ 15 ದಿನಗಳಲ್ಲೇ ನಮಗೆ ಡೇರಿ ಮಂಜೂರು ಮಾಡಿಸಿದ್ದು, ನಮ್ಮ ಗ್ರಾಮಸ್ಥರ ಆರ್ಥಿಕ ಸ್ವಾವಲಂಬನೆಗೆ ನೆರವಾದ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ, ನಮ್ಮ ನಿರ್ದೆಶಕರು ಮತ್ತು ಉತ್ಪಾದಕರ ಸಹಕಾರವೇ ಇಂದು ಸಂಘವು ಇಷ್ಟು ಲಾಭದಾಯಕವಾಗಿರಲು ಕಾರಣವಾಗಿದೆ ಎಂದರು.
ಹೊಸಕೋಟೆ ಶಿಬಿರದ ಉಪವ್ಯವಸ್ಥಾಪಕ ಶಿವಾಜಿ ನಾಯಕ್, ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆಂಚಪ್ಪ, ಹಾಲು ಪರೀಕ್ಷಕ ಮಂಜುನಾಥ್, ಉಪಾಧ್ಯಕ್ಷ ನಾರಾಯಣಪ್ಪ, ನಿರ್ದೇಶಕರಾದ ಮುನಿಯಪ್ಪ, ವೆಂಕಟೇಶಪ್ಪ ರಾಮಕೃಷ್ಣಪ್ಪ, ಶ್ರೀನಿವಾಸ್, ರವಿಕುಮಾರ್, ಗೋವಿಂದಪ್ಪ, ಸಹಾಯಕ ವ್ಯವಸ್ಥಾಪಕ ಶ್ರೀರಾಮ್, ವಿಸ್ತರಣಾಧಿಕಾರಿ ವಿನಯ್, ಸುಬ್ರಹ್ಮಣಾಚಾರಿ, ಮುನೇಗೌಡ, ಸೇರಿದಂತೆ ಹಾಲು ಉತ್ಪಾದಕರು ಇದ್ದರು.