ದೇಶದಲ್ಲೇ ಮಾದರಿ ಸಂಸತ್‌ ಕ್ಷೇತ್ರ ಮಾಡುವೆ: ಸುಧಾಕರ್‌

KannadaprabhaNewsNetwork |  
Published : Jun 20, 2024, 01:00 AM IST
ಫೋಟೋ: 19 ಹೆಚ್‌ಎಸ್‌ಕೆ 3ಹೊಸಕೋಟೆ ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್, ಸಂಸದ ಡಾ.ಕೆ.ಸುಧಾಕರ್ ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಒಗ್ಗಟ್ಟಿನ ಮಂತ್ರ ಜಪಿಸಿ ಕೈ ಮೇಲೆತ್ತಿ ಒಗ್ಗಟ್ಟು ಪ್ರದರ್ಶಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಇಡೀ ದೇಶದಲ್ಲಿಯೇ ಅಭಿವೃದ್ದಿ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು.

ಹೊಸಕೋಟೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಇಡೀ ದೇಶದಲ್ಲಿಯೇ ಅಭಿವೃದ್ದಿ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷ ಟಿಕೆಟ್ ನೀಡಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಿದ ವೇಳೆ ಪ್ರತಿಯೊಬ್ಬ ಕಾರ್ಯಕರ್ತನ ಪರಿಶ್ರಮದ ಫಲವಾಗಿ ನಿರೀಕ್ಷೆಗೂ ಮೀರಿ ಮತಗಳನ್ನು ನೀಡುವ ಮೂಲಕ ಮತದಾರರು ಗೆಲುವಿನ ವಿಜಯಮಾಲೆ ಹಾಕಿದರು. ಆದ್ದರಿಂದ ಲೋಕಸಭಾ ಕ್ಷೇತ್ರವ್ಯಾಪ್ತಿಯ ೮ ತಾಲೂಕುಗಳಿಗೆ ಅಗತ್ಯ ಎಲ್ಲಾ ಶಾಶ್ವತ ಯೋಜನೆಗಳನ್ನು ಕೈಗೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಪಂ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಮೂಲಕ ಅಭಿವೃದ್ಧಿ ಪರ್ವ ಮಾಡುವೆ ಎಂದು ಹೇಳಿದರು.

ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಸುಧಾಕರ್ ಅಭ್ಯರ್ಥಿ ಎಂದು ಘೋಷಣೆಯಾದ ತಕ್ಷಣ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಲೀಸು ಎಂದು ಸಂಭ್ರಮಪಟ್ಟವರಿಗೆ ಚುನಾವಣೆ ಫಲಿತಾಂಶದವರೆಗೂ ಕಾಯಿರಿ ಎಂದಿದ್ದೆ. ಆದರೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಿ ಚಿಕ್ಕಬಳ್ಳಾಪುರದ ಅಭಿವೃದ್ಧಿಗೆ ಶ್ರಮಿಸಲು ಸುಧಾಕರ್‌ಗೆ ಆಶೀರ್ವಾದ ಮಾಡಿದ್ದೀರಿ ಎಂದು ಕ್ಷೇತ್ರದ ಮತದಾರರಿಗೆ ಧನ್ಯವಾದ ಅರ್ಪಿಸಿದರು.

ಬಾಕ್ಸ್ .....

ಎಂಟಿಬಿ ನನ್ನ ಹಿರಿಯ ಸಹೋದರ ಇದ್ದಂತೆ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮತದಾರರು ನನಗೆ ಆಶೀರ್ವಾದ ಮಾಡಿ ಸಂಸದನನ್ನಾಗಿ ಮಾಡಿ ರಾಜಕೀಯ ಪುನರ್ಜನ್ಮ ಕೊಟ್ಟಿದ್ದಾರೆ. ನನಗೆ ಚುನಾವಣಾ ಸ್ಪರ್ಧೆಗೆ ಟಿಕೆಟ್ ಧಕ್ಕಿ, ಗೆಲುವು ಸಾಧಿಸುವವರೆಗೆ ನನ್ನ ಬೆನ್ನಿಗೆ ಎಂಟಿಬಿ ನಾಗರಾಜ್ ಅವರು ಒಬ್ಬ ಹಿರಿಯ ಸಹೋದರನಂತೆ ಶ್ರಮಿಸಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಸಂಸದ ಡಾ.ಕೆ.ಸುಧಾಕರ್ ಎಂಟಿಬಿ ಕಾರ್ಯಕ್ಕೆ ಪ್ರಶಂಶಿಸಿದರು.

ಫೋಟೋ: 19 ಹೆಚ್‌ಎಸ್‌ಕೆ 3

ಹೊಸಕೋಟೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್, ಸಂಸದ ಡಾ.ಕೆ.ಸುಧಾಕರ್ ಕ್ಷೇತ್ರದ ಅಭಿವೃದ್ಧಿ ಮಾಡುವ ಬಗ್ಗೆ ಕೈ ಮೇಲೆತ್ತಿ ಒಗ್ಗಟ್ಟು ಪ್ರದರ್ಶಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''