ಕೊಡಗಿನಲ್ಲಿ ಸಾಧಾರಣ ಮಳೆ

KannadaprabhaNewsNetwork |  
Published : May 31, 2025, 12:02 AM IST
ಚಿತ್ರ : 30ಎಂಡಿಕೆ6 : ತಾಕೇರಿ ಗ್ರಾಮದಲ್ಲಿ ವಿದ್ಯುತ್ ಕಂಬ ಬಿದ್ದು, ಮೃತಪಟ್ಟಿರುವ ಹಸು.  | Kannada Prabha

ಸಾರಾಂಶ

ವಿರಾಜಪೇಟೆ ಹೋಬಳಿ, ಮೈತಾಡಿ ಗ್ರಾಮದ ಗೌರಮ್ಮ ಅವರ ವಾಸದ ಮನೆಯ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ. ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದ ನಿವಾಸಿ ಎಂ.ಟಿ. ರಘು ಅವರ ಹಸು, ವಿದ್ಯುತ್ ಕಂಬ ಬಿದ್ದು ಸಾವನ್ನಪ್ಪಿದೆ.

ಹಲವು ಮನೆಗಳಿಗೆ ಹಾನಿ । ವಿದ್ಯುತ್‌ ಕಂಬ ಬಿದ್ದು ಹಸು ಸಾವು

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲಾದ್ಯಂತ ಶುಕ್ರವಾರ ಸಾಧಾರಣ ಮಳೆ ಸುರಿಯಿತು. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಬಿಡುವು ನೀಡಿ ಮಳೆಯಾಯಿತು. ಮಳೆ ಕಡಿಮೆಯಾದರೂ ಕೆಲವೆಡೆ ಮನೆಗಳಿಗೆ ಹಾನಿಯಾಗಿದೆ.

ವಿರಾಜಪೇಟೆ ಹೋಬಳಿ, ಮೈತಾಡಿ ಗ್ರಾಮದ ಗೌರಮ್ಮ ಅವರ ವಾಸದ ಮನೆಯ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ. ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದ ನಿವಾಸಿ ಎಂ.ಟಿ. ರಘು ಅವರ ಹಸು, ವಿದ್ಯುತ್ ಕಂಬ ಬಿದ್ದು ಸಾವನ್ನಪ್ಪಿದೆ.

ಮಳೆ ಗಾಳಿಗೆ ಅತ್ತೂರ್ ನಲ್ಲೂರು ಗ್ರಾಮದ ಕೆಂಪಮ್ಮ ಅವರ ಮನೆಯ ಮೇಲೆ ಮರ ಬಿದ್ದು ಛಾವಣಿಗೆ ಹಾನಿಯಾಗಿದೆ. ಕುಶಾಲನಗರ ಹೋಬಳಿ 6ನೇ ಹೊಸಕೋಟೆ ಗ್ರಾಮದ ಎಚ್.ಜೆ. ಶಾಂತರಾಜು ಅವರ ವಾಸದ ಮನೆಯ ಗೋಡೆ ಬಿದ್ದು ಭಾಗಶಃ ಹಾನಿಯಾಗಿದೆ.

ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 50.45 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 693.72 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 329.02 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ 54.48 ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ 51 ಮಿ.ಮೀ., ಪೊನ್ನಂಪೇಟೆ ತಾಲೂಕಿನಲ್ಲಿ 54.13 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 50.75 ಮಿ.ಮೀ ಹಾಗೂ ಕುಶಾಲನಗರ ತಾಲೂಕಿನಲ್ಲಿ 41.90 ಮಿ.ಮೀ. ಮಳೆಯಾಗಿದೆ.ಹೋಬಳಿ ವಿವರ ; ಮಡಿಕೇರಿ ಕಸಬಾ 59, ನಾಪೋಕ್ಲು 58.80, ಸಂಪಾಜೆ 17.50, ಭಾಗಮಂಡಲ 82.60, ವಿರಾಜಪೇಟೆ 53, ಅಮ್ಮತ್ತಿ 49, ಹುದಿಕೇರಿ 54.60, ಶ್ರೀಮಂಗಲ 56, ಪೊನ್ನಂಪೇಟೆ 65, ಬಾಳೆಲೆ 40.90, ಸೋಮವಾರಪೇಟೆ 65, ಶನಿವಾರಸಂತೆ 27, ಶಾಂತಳ್ಳಿ 100, ಕೊಡ್ಲಿಪೇಟೆ 11, ಕುಶಾಲನಗರ 37.60, ಸುಂಟಿಕೊಪ್ಪ 46.20 ಮಿ.ಮೀ.ಮಳೆಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾನೂನು ಅರಿವಿನಿಂದ ಅಪರಾಧ ಇಳಿಮುಖ: ನ್ಯಾಯಾಧೀಶೆ ನಾಗವೇಣಿ
ಹಾನಗಲ್ಲ ತಾಲೂಕಲ್ಲಿ 42 ಲಕ್ಷ ಪುಟಗಳ ಕಂದಾಯ ದಾಖಲೆಗಳ ಡಿಜಿಟಲೀಕರಣ