ಕನ್ನಡಪ್ರಭ ವಾರ್ತೆ ಬ್ಯಾಡಗಿ
ಸ್ನೇಹ ಸದನ ಸಮಗ್ರ ಸಮಾಜಕಾರ್ಯ ನಿರ್ವಹಣಾ ಕೇಂದ್ರ, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಎಸ್ ಜೆಜೆಎಂ ಸರ್ಕಾರಿ ಪದವಿ ಮಹಾವಿದ್ಯಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಪಂಚದ ಸೌಂದರ್ಯ ಆನಂದಿಸಲು ದೇವರು ನಮಗೆ ಕಣ್ಣು ನೀಡಿದ್ದಾನೆ. ಕಣ್ಣುಗಳಿಗೂ ವ್ಯಾಯಾಮ ಮತ್ತು ಅದರ ಸರಿಯಾದ ಕಾರ್ಯ ನಿರ್ವಹಣೆಗೆ ವಿಶ್ರಾಂತಿ ಬೇಕು ಎಂಬುದನ್ನು ಮರೆಯುತ್ತೇವೆ. ಕಣ್ಣುಗಳ ಆರೋಗ್ಯ ಮತ್ತು ಯೋಗ ಕ್ಷೇಮದ ಕುರಿತು ನಾವು ನಿಷ್ಕಾಳಜಿ ತೋರಬಾರದು. ದೇಹದಲ್ಲಿಯೇ ಅತ್ಯಂತ ಸೂಕ್ಷ್ಮವಾದ ಅಂಗವಾಗಿರುವ ಕಣ್ಣುಗಳ ಬಗ್ಗೆ ವಿಶೇಷ ಕಾಳಜಿ ತೋರುವಂತೆ ತಿಳಿಸಿದರು.ಶಂಕರ ಕಣ್ಣಿನ ಆಸ್ಪತ್ರೆಯ ಕಣ್ಣಿನ ತಜ್ಞ ವೈದ್ಯೆ ಕೃತಿಕಾ ಮಾತನಾಡಿ, ಮುದ್ರಣದಿಂದ ಬರುವಂತಹ ಸಣ್ಣ ಅಕ್ಷರಗಳನ್ನು ಕಷ್ಟಪಟ್ಟು ಓದುವುದನ್ನು ತಪ್ಪಿಸಬೇಕು, ಸ್ನಾನದ ಸಮಯದಲ್ಲಿ ಬಿಸಿ ನೀರನ್ನು ತಲೆಯ ಮೇಲೆ ಸುರಿದುಕೊಳ್ಳಬೇಡಿ, ಇದರಿಂದ ಕಣ್ಣಿನಲ್ಲಿರುವ ಶಕ್ತಿ ಕುಂಠಿತಗೊಳ್ಳಲಿದೆ. ಕನಿಷ್ಠ 10 ಅಡಿ ದೂರದಿಂದ ಟಿವಿ ವೀಕ್ಷಿಸಬೇಕು, ದೀರ್ಘಕಾಲದ ಕಂಪ್ಯೂಟರ್ ಬಳಕೆ ನಿಲ್ಲಿಸಬೇಕು, ಕಡಿಮೆ ಬೆಳಕು ಇರುವ ಕಡೆಯಲ್ಲಿ ಕುಳಿತು ಓದುವುದು ಕಣ್ಣಿನ ಆರೋಗ್ಯಕ್ಕೆ ಸರಿಯಾದ ಕ್ರಮಗಳಲ್ಲ ಎಂದ ಅವರು, ವಯೋಸಹಜ ಬರುವಂತಹ ಕಣ್ಣಿನ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಅಥವಾ ಉಚಿತ ಶಬಿರಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು.
ಶಿಬಿರದಲ್ಲಿ ಸುಮಾರು 172 ಜನರು ಉಚಿತ ಚಿಕಿತ್ಸೆ ಪಡೆದು, 98 ಜನರು ಶಸ್ತ್ರಚಿಕಿತ್ಸೆಗೆ ಆಯ್ಕೆಯಾದರು.
ಕಾರ್ಯಕ್ರಮದಲ್ಲಿ ಎಸ್ಜೆಜೆಎಂ ಪದವಿ ಪೂರ್ವ ಮಹಾವಿದ್ಯಾಲಯದ ಇಂಗ್ಲಿಷ್ ಉಪನ್ಯಾಸಕ ಡಿ.ಬಿ. ಕುಸಗೂರ, ಮಾಜಿ ಸೈನಿಕ ಎಂ.ಡಿ. ಚಿಕ್ಕಣ್ಣನವರ, ಸ್ನೇಹ ಸದನ ಸಂಸ್ಥೆಯ ವ್ಯವಸ್ಥಾಪಕಿ ರೂಪಾ, ನಿರ್ದೇಶಕಿ ಗ್ಲೋರಿಯಾ ತೆರೆಸಿಟಾ, ಸಂಯೋಜಕರಾದ ಸುವರ್ಣಾ, ಕಾವ್ಯ, ಸರಸ್ವತಿ, ಫಾತಿಮಾ, ಈರಣ್ಣ ಮಾಸಣಗಿ, ಅಚಲಾ ಇತರರಿದ್ದರು.