ಕನ್ನಡಪ್ರಭ ವಾರ್ತೆ ಆಲಮಟ್ಟಿ
ಆಲಮಟ್ಟಿಯ ರೈಲು ನಿಲ್ದಾಣಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅಮೃತ ರೈಲು ನಿಲ್ದಾಣದ ಕಾಮಗಾರಿ, ದ್ವಿಪಥ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಗದಗ-ಹೊಟಗಿ ಮಾರ್ಗದ ರೈಲ್ವೆ ಡಬಲಿಂಗ್ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಬಾಗಲಕೋಟೆ-ವಂದಾಲ ಮಧ್ಯೆ ಮಾತ್ರ ಬಾಕಿಯಿದೆ. ಆಲಮಟ್ಟಿ-ಬಾಗಲಕೋಟೆ ಮಧ್ಯೆ ಮೇ-2024ಕ್ಕೆ ಪೂರ್ಣಗೊಳ್ಳಲಿದೆ. ಆಲಮಟ್ಟಿ-ವಂದಾಲ ಮಧ್ಯೆ ಬರುವ ಕೃಷ್ಣಾ ನದಿಯ ಸೇತುವೆ ಕಾಮಗಾರಿ ನಡೆದಿದೆ. ಅದು ಬಹುತೇಕ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಆಲಮಟ್ಟಿ-ಗದಗ ಮಧ್ಯೆ ಎಲೆಕ್ಟ್ರಿಫಿಕೇಶನ್ ಕಾಮಗಾರಿಯೂ ಜೂನ್-2024ಕ್ಕೆ ಪೂರ್ಣಗೊಳ್ಳಲಿದೆ ಎಂದರು.
ಆಲಮಟ್ಟಿಯಲ್ಲಿ ಮೂರು ಎಕ್ಸ್ಪ್ರೆಸ್ ರೈಲು ನಿಲುಗಡೆಗೆ ರೈಲು ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಂದ ಅನುಮತಿ ಬಂದ ನಂತರ ರೈಲು ನಿಲುಗಡೆಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ವಿಜಯಪುರ ರೈಲು ನಿಲ್ದಾಣದಲ್ಲಿ ಫಿಟ್ಲೈನ್ ನಿರ್ಮಿಸಿ, ಅಲ್ಲಿ ಈ ಭಾಗದಲ್ಲಿ ಸಂಚರಿಸುವ ರೈಲುಗಳ ದುರಸ್ತಿ ಹಾಗೂ ನಿರ್ವಹಣೆ ಮತ್ತು ಹೊಸ ರೈಲುಗಳ ನಿರ್ವಹಣೆಯ ಕಾರ್ಯ ನಡೆಯಲಿದೆ. ಈ ಫಿಟ್ಲೈನ್ ನಿರ್ಮಾಣದ ನಂತರ ಈ ಭಾಗದಲ್ಲಿ ರೈಲುಗಳ ಸಂಚಾರ ಹೆಚ್ಚಲಿದೆ ಎಂದರು.ಆಲಮಟ್ಟಿ-ಯಾದಗಿರಿ ಹಾಗೂ ಆಲಮಟ್ಟಿ-ಚಿತ್ರದುರ್ಗ ನೂತನ ರೈಲು ಮಾರ್ಗ ನಿರ್ಮಾಣದ ಸಮೀಕ್ಷೆ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಸಮೀಕ್ಷೆ ಪೂರ್ಣಗೊಂಡ ನಂತರ ರೈಲು ಮಂಡಳಿಗೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಅಂಡರ್ ಪಾಸ್, ರೈಲು ನಿಲ್ಲಿಸಲು ಆಗ್ರಹಿಸಿ ಮನವಿ:
ಗ್ರಾಮಸ್ಥರಾದ ರಮೇಶ ಆಲಮಟ್ಟಿ, ಶಂಕರ ಜಲ್ಲಿ, ಮಂಜುನಾಥ ಹಿರೇಮಠ, ಧೀರಜ್ ರಾಠಿ, ಕೃಷ್ಣಮೂರ್ತಿ ಕೋಳಿ, ಶಿವಾನಂದ ಕೋಳಿ, ಮಹಾಂತೇಶ ಹಿರೇಮಠ, ಭೀಮಣ್ಣ ಪತ್ತಾರ ಮತ್ತಿತರರು ಇದ್ದರು.