ಬಿಜೆಪಿಯಲ್ಲಿ ಎಲ್ಲರಿಗೂ ಒಂದೇ ನ್ಯಾಯ: ನಡ್ಡಾ

KannadaprabhaNewsNetwork |  
Published : Apr 27, 2024, 01:16 AM IST

ಸಾರಾಂಶ

ದೇಶದಲ್ಲಿ ಈ ಹಿಂದೆ ನಡೆಯುತ್ತಿದ್ದ ಜಾತಿ ಹಾಗೂ ಒಳ ಜಗಳದ ಸಂಸ್ಕೃತಿಯನ್ನು ನರೇಂದ್ರ ಮೋದಿಯವರು ಅಳಿಸಿದ್ದು, ವಿಕಾಸವಾದ ರಾಜಕೀಯ ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದರು.

- ದೇಶಕ್ಕೆ ಮೋದಿ ನೀಡಿದ್ದು ವಿಕಾಸವಾದ ರಾಜಕೀಯ । ಹುಮನಾಬಾದಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಕನ್ನಡಪ್ರಭ ವಾರ್ತೆ ಹುಮನಾಬಾದ್ (ಬೀದರ್‌)ದೇಶದಲ್ಲಿ ಈ ಹಿಂದೆ ನಡೆಯುತ್ತಿದ್ದ ಜಾತಿ ಹಾಗೂ ಒಳ ಜಗಳದ ಸಂಸ್ಕೃತಿಯನ್ನು ನರೇಂದ್ರ ಮೋದಿಯವರು ಅಳಿಸಿದ್ದು, ವಿಕಾಸವಾದ ರಾಜಕೀಯ ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದರು.

ನಗರದ ಥೇರ್‌ ಮೈದಾನದಲ್ಲಿ ಶುಕ್ರವಾರ ರಾತ್ರಿ ಬಿಜೆಪಿ-ಜೆಡಿಎಸ್‌ನ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೋದಿಯವರ ಅಧಿಕಾರಾವಧಿಯಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲರಿಗೂ ಒಂದೇ ನ್ಯಾಯ, ಒಂದೇ ಸೌಲಭ್ಯ ನೀಡಲಾಗುತ್ತಿದೆ. ಮೋದಿಯವರು ಹತ್ತು ವರ್ಷದಲ್ಲಿ ಹೊಸ ಯೋಜನೆಯೊಂದಿಗೆ ಮುಂದೆ ಸಾಗುತ್ತಿದ್ದಾರೆ. ಇಡೀ ವಿಶ್ವದ ಆರ್ಥಿಕ ವ್ಯವಸ್ಥೆ ಕುಸಿದರೆ ನಮ್ಮ ಆರ್ಥಿಕ ಪರಿಸ್ಥಿತಿ 5ನೇ ಸ್ಥಾನದಲ್ಲಿದೆ. ಮೂರನೇ ಬಾರಿ ಮೋದಿ ಆಯ್ಕೆಯಾದರೆ ಮೂರನೇ ಆರ್ಥಿಕ ವ್ಯವಸ್ಥೆಗೆ ನಾವು ಬರಲಿದ್ದೇವೆ. ಸದ್ಯ ಭಾರತ ಆಟೋಮೋಬೈಲ್‌ನಲ್ಲಿ 3ನೇ ಸ್ಥಾನ, ಔಷಧಿಯಲ್ಲಿ 2ನೇ ಸ್ಥಾನ, ಪೆಟ್ರೋಲ್, ಸ್ಟೀಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಈಗ ಮೇಡ್‌ ಇನ್‌ ಇಂಡಿಯಾ ಪ್ರಕಾಶಿಸುತ್ತಿದೆ ಎಂದರು.ಕಾಂಗ್ರೆಸ್ ಅವಧಿಯಲ್ಲಿ ಪಾಕಿಸ್ತಾನದಿಂದ ಗುಂಡು ಹಾರಿಸಿದರೆ, ಪ್ರತಿದಾಳಿ ನಡೆಸಲು ನಮ್ಮ ಸೈನಿಕರಿಗೆ ಆದೇಶ ಸಿಗುತ್ತಿರಲಿಲ್ಲ. ಈಗ ಪಾಕಿಸ್ತಾನ ಗುಂಡು ಹಾರಿಸಿದರೆ ತಕ್ಷಣ ಉತ್ತರ ನೀಡಲು ಸೈನಿಕರಿಗೆ ಸ್ವಾತಂತ್ರ್ಯನೀಡಲಾಗಿದೆ. ಗಡಿ ಭಾಗದಲ್ಲಿ ಶೇ.30ರಷ್ಟು ರಸ್ತೆಗಳು ನಿರ್ಮಾಣವಾಗಿವೆ. ಪ್ರಧಾನ ಮಂತ್ರಿ ಅವಾಸ ಯೋಜನೆಯಲ್ಲಿ 4 ಕೋಟಿ ಮನೆಗಳ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮೂರು ಕೋಟಿ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎನ್‌ಡಿಎ ಮೈತ್ರಿ ಕೂಟದಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ
ಪತ್ರಕರ್ತರಿಗೆ ಸ್ಪಂದಿಸುತ್ತಿದ್ದ ಶಾಮನೂರು ಸದಾ ಸ್ಮರಣೀಯ