ಮೋದಿ ಸರ್ಕಾರ ವಿಶ್ವ ಕಂಡ ವಿರಳ ಪ್ರಜಾಪ್ರಭುತ್ವ: ಎಂ.ಕೆ.ಪ್ರಾಣೇಶ್

KannadaprabhaNewsNetwork |  
Published : Jun 11, 2025, 12:10 PM IST
ಚಿಕ್ಕಮಗಳೂರಿನ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ವಿಕಸಿತ ಭಾರತ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಎಂ.ಕೆ. ಪ್ರಾಣೇಶ್‌ ಅವರು ಉದ್ಘಾಟಿಸಿದರು. ದೇವರಾಜ್‌ ಶೆಟ್ಟಿ, ಕಲ್ಮರುಡಪ್ಪ, ರವೀಂದ್ರ ಬೆಳವಾಡಿ,  ಪುಣ್ಯಪಾಲ್‌ ಇದ್ದರು. | Kannada Prabha

ಸಾರಾಂಶ

ಸ್ವಾರ್ಥಕ್ಕೆ ಆಸೆ ಪಡದೇ, ನಿಸ್ವಾರ್ಥದಿಂದ ಭಾರತೀಯರ ಉಜ್ವಲ ಭವಿಷ್ಯಕ್ಕೆ ಹಗಲಿರುಳು ಎನ್ನದೆ ನಿರಂತರ ದುಡಿಯುತ್ತಿರುವ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಡೀ ವಿಶ್ವವೇ ಕಂಡ ಅಪರೂಪದ ಪ್ರಜಾಪ್ರಭುತ್ವ ಆಳ್ವಿಕೆಯಾಗಿದೆ ಎಂದು ವಿಧಾನ ಪರಿಷತ್‌ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ಆಡಳಿತ ಕುರಿತ ವಿಕಸಿತ ಭಾರತ ಜಿಲ್ಲಾ ಮಟ್ಟದ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಸ್ವಾರ್ಥಕ್ಕೆ ಆಸೆ ಪಡದೇ, ನಿಸ್ವಾರ್ಥದಿಂದ ಭಾರತೀಯರ ಉಜ್ವಲ ಭವಿಷ್ಯಕ್ಕೆ ಹಗಲಿರುಳು ಎನ್ನದೆ ನಿರಂತರ ದುಡಿಯುತ್ತಿರುವ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಡೀ ವಿಶ್ವವೇ ಕಂಡ ಅಪರೂಪದ ಪ್ರಜಾಪ್ರಭುತ್ವ ಆಳ್ವಿಕೆಯಾಗಿದೆ ಎಂದು ವಿಧಾನ ಪರಿಷತ್‌ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷಗಳ ಅಭಿವೃದ್ಧಿ ಕುರಿತ ವಿಕಸಿತ ಭಾರತ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ಬಡವರ, ದೀನದಲಿತರ ಏಳಿಗೆಗೆ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ದಶಕವನ್ನು ಪೂರೈಸಿ ಸಾಧನೆ ಮಾಡಿದೆ. ಸದಾಕಾಲ ರಾಷ್ಟ್ರದ ಹಿತಕ್ಕಾಗಿ ದುಡಿಯುತ್ತಿರುವ ಪ್ರಧಾನ ಮಂತ್ರಿ ಭಾರತಾಂಬೆಗೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುತ್ತಿರುವ ವಿಚಾರ ಎಲ್ಲೆಡೆ ಪಸರಿಸಬೇಕಿದೆ ಎಂದರು.

ಆಟಲ್ ಬಿಹಾರಿ ವಾಜಪೇಯಿ ಮಾಡಿದ್ದ ಅಭಿವೃದ್ಧಿ ಕಾರ್ಯಗಳು ತಳಮಟ್ಟದಿಂದ ಪ್ರಚಾರಗೊಳ್ಳದ ಕಾರಣ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಆದರೀಗ ಮೋದಿ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ಅರಿವು ಹಾಗೂ ವಿರೋಧ ಪಕ್ಷಗಳ ಸುಳ್ಳಿನ ಮಾಹಿತಿಗಳಿಂದ ಹೊರತಂದು ಸಾಧನೆಯ ಸತ್ಯಾಸತ್ಯತೆಯನ್ನು ಕಾರ್ಯಕರ್ತರು ಮನದಟ್ಟು ಮಾಡಬೇಕಿದೆ ಎಂದು ತಿಳಿಸಿದರು.

ರಾಷ್ಟ್ರದಲ್ಲೇ ಬಿಜೆಪಿ ಅತ್ಯಂತ ಹೆಚ್ಚು ಸದಸ್ಯತ್ವ ಹೊಂದಿರುವ ದೊಡ್ಡ ರಾಜಕೀಯ ಪಕ್ಷ. ಹೀಗಾಗಿ ಕೇಂದ್ರದಿಂದ ಕೈಗೊಂಡಿರುವ ಅಭಿವೃದ್ಧಿ ಯೋಜನೆ, ಪ್ರವಾಸಿಗರ ಸಾವಿಗೆ ಆಪರೇಷನ್ ಸಿಂದೂರ ಮೂಲಕ ತಕ್ಕ ಉತ್ತರದ ಪ್ರತೀಕಾರದಲ್ಲಿ ಯಶಸ್ಸು ಸೇರಿದಂತೆ ಜನಪರ ಆಡಳಿತದ ಮಾಹಿತಿ ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.

ದೇಶದಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ಪೂರ್ವದಿಂದಲೂ ಸುಳ್ಳನ್ನೇ ಸತ್ಯವೆಂದು ಪ್ರತಿಪಾದಿಸುವಿಕೆ ತುರ್ತು ಪರಿಸ್ಥಿತಿ ಹೇರಿಕೆಯಿಂದ ಜನತೆಗೆ ದಿಕ್ಕು ತಪ್ಪಿಸಿತ್ತು. ಇಂದಿಗೂ ಆ ವಂಶದ ಕುಡಿ ರಾಹುಲ್‌ ಗಾಂಧಿ ರಾಷ್ಟ್ರ ಹಾಗೂ ಪ್ರಧಾನಿ ವಿರುದ್ಧ ಸುಖಸುಮ್ಮನೆ ವಿರೋಧಿ ಹೇಳಿಕೆ ನೀಡಿ ಕೊನೆಗೆ ಅವರೇ ಪೇಚಾಡುವಂಥ ಸ್ಥಿತಿ ನಿರ್ಮಿಸಿಕೊಳ್ಳುತ್ತಿದ್ದಾರೆ ಎಂದರು.

ಪ್ರತಿ ಪಕ್ಷಗಳ ಬೇಡವಾದ ವಿಷಯಗಳಿಗೆ ಕಾರ್ಯಕರ್ತರು ಕಿವಿಗೊಡದೇ ಸಕಾರಾತ್ಮಕವಾಗಿ ಚಿಂತಿಸುವ ಆಲೋಚನೆ ಹೊಂದಬೇಕು. ಕೇಂದ್ರ ಸರ್ಕಾರದ ಸಾಧನೆ ಇಂದು ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಸಮಯವಾಗಿದೆ. ಸಾಮಾನ್ಯವಾಗಿ ರಾಜಕೀಯ ಆಳ್ವಿಕೆ ಕೇಳಿದ್ದೇವೆ. ಆದರೆ ಮೋದಿ ಸರ್ಕಾರದ ವಿಭಿನ್ನ, ವಿಶೇಷ ಆಳ್ವಿಕೆ ಬೇರೆ ಯಾವ ಪಕ್ಷದಲ್ಲೂ ಕೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ವಿಕಸಿತ ಭಾರತ ಕಾರ್ಯಾಗಾರದ ಸಂಚಾಲಕ ಈಶ್ವರಹಳ್ಳಿ ಮಹೇಶ್ ಮಾತನಾಡಿ, ಕಾರ್ಯಕರ್ತರು ಹುರುಪಿನಿಂದ ಕೇಂದ್ರದ ವಿಶ್ವಕರ್ಮ, ಗ್ರಾಮ್‌ ಸಡಕ್, ಪಿಎಂ ಆವಾಜ್, ಮಹಿಳಾ ಸಬಲೀಕರಣದ ಯೋಜನೆಗಳ ವಿವರಗಳನ್ನು ಪ್ರತಿ ಬೂತ್‌ಗಳಲ್ಲಿ ಹಮ್ಮಿಕೊಳ್ಳಲು ಜೂ.25ರಿಂದ ಜುಲೈ ಮಾಹೆ ತನಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ್‌ ಶೆಟ್ಟಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಬೆಳವಾಡಿ ರವೀಂದ್ರ, ಪುಣ್ಯಪಾಲ್, ಡಾ.ನರೇಂದ್ರ, ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಂ ಭರಣ್ಯ, ಕಾರ್ಯಗಾರದ ಸಹ ಸಂಚಾಲಕ ಶರತ್, ನಗರ ಮಂಡಲ ನಿಕಟಪೂರ್ವ ಅಧ್ಯಕ್ಷ ಮಧುಕುಮಾರರಾಜ್ ಅರಸ್, ರೈತ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಮುಗುಳುವಳ್ಳಿ ದಿನೇಶ್ ಇತರರು ಹಾಜರಿದ್ದರು.

PREV

Recommended Stories

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಖರ್ಗೆ ಕುಟುಂಬದ ವಿರುದ್ಧ ಕೋರ್ಟ್‌ಗೆ ಖಾಸಗಿ ದೂರು