ಕನ್ನಡಪ್ರಭ ವಾರ್ತೆ ಬೀದರ್
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿಯನ್ನು ಮೊದಲು ಟೀಕಿಸಿದ ಬಿಜೆಪಿ ಸರ್ಕಾರವೇ ಈಗ ಜನತೆಗೆ ಗ್ಯಾರಂಟಿಗಳನ್ನು ನೀಡಲು ಮುಂದಾಗಿದೆ ಎಂದರು.
ಹಿಂದಿನ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರು ಬೆಲೆ ನಿಯಂತ್ರಣ ಮಾಡಿ ಈ ರಾಷ್ಟ್ರವನ್ನು ಉತ್ತಮ ರೀತಿಯಿಂದ ಮುನ್ನಡೆಸಿಕೊಂಡು ಹೋಗಿದ್ದರು. ಆದರೆ ನಮ್ಮ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡಿ, ಜನತೆಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಲಿಲ್ಲ. ಸಾಲ ಮನ್ನಾ ಮಾಡಲಿಲ್ಲ. ಸುಳ್ಳು ಎಂದರೆ ಬಿಜೆಪಿ, ಬಿಜೆಪಿ ಎಂದರೆ ಸುಳ್ಳು. ಇದೊಂದು ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ವಾಮಚಾರ ನೀತಿ, ಭ್ರಷ್ಟಾಚಾರದ ತಾಂಡವ, ಜನ ವಿರೋಧಿ ನೀತಿಯಿಂದ ಕರ್ನಾಟಕದಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸಿದರು. ಬಿಜೆಪಿಗರು ಅಧಿಕಾರದ ಅಟ್ಟಹಾಸದಿಂದ ಮೆರೆದು ಬರೀ ಲಂಚಗುಳಿತನದಲ್ಲಿ ಮುಳುಗಿ ಹೋಗಿದ್ದಾರೆ. ಈ ಬಾರಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಸಾಗರ ಖಂಡ್ರೆ ಒಬ್ಬ ಯುವಕ. ಉತ್ಸಾಹಿ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿ ಸಂಸತ್ಗೆ ಕಳಿಸಬೇಕೆಂದು ಕರೆ ನೀಡಿದರು.
ಸರ್ಕಾರ ಅಧಿಕಾರಕ್ಕೆ ಬಂದ ನೂರು ದಿನಗಳ ಒಳಗಾಗಿ 15 ಲಕ್ಷ ರು. ದೇಶದ ನಿವಾಸಿಗ ಪ್ರತಿ ಅಕೌಂಟ್ಗೆ ಹಾಕಲಿಲ್ಲ. ಉದ್ಯೋಗ ಸೃಷ್ಟಿಸಲಿಲ್ಲ. ರೈತರ ಆದಾಯ ದ್ವಿಗುಣ ಮಾಡಲಿಲ್ಲ. ಬದಲಾಗಿ ಜನರು ತತ್ತರಿಸುವಂತೆ ಅಧಿಕಾರ ನಡೆಸಿದ್ದಾರೆ. 10 ವರ್ಷಗಳಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಅದನ್ನು ತಡೆಯುವ ಶಕ್ತಿ ಬಿಜೆಪಿಗಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಎಂಎಲ್ಸಿ ಅರವಿಂದಕುಮಾರ ಅರಳಿ, ಅಬ್ದುಲ್ ಮನ್ನಾನ್ ಸೇಠ, ಸಂಜಯ ಜಾಗೀರದಾರ, ಚಂದ್ರಕಾಂತ ಹಿಪ್ಪಳಗಾಂವ್, ರೋಹಿದಾಸ್ ಘೋಡೆ, ಜಾರ್ಜ್ ಫರ್ನಾಂಡಿಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.