ಕನ್ನಡಪ್ರಭ ವಾರ್ತೆ ಬೀದರ್
ಬುಧವಾರ ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಅಕ್ಕಿ ದಾಸ್ತಾನು ಇದ್ದರೂ ಎನ್ಡಿಎ ಮೈತ್ರಿಕೂಟದ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದುರುದ್ದೇಶದಿಂದ ರಾಜ್ಯ ಸರ್ಕಾರಕ್ಕೆ ಅಕ್ಕಿ ಕೊಡಲಿಲ್ಲ. ಬಡವರ ಹಸಿವು ನೀಗಿಸುವುದು ಸಂವಿಧಾನ ಬದ್ಧ ಹಕ್ಕು ಎಂದರು.
ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ ಖಂಡ್ರೆ ಒಬ್ಬ ನವ ಯುವಕ, ಕ್ರಿಯಾಶೀಲ. ಯುವಕರನ್ನು ಸಂಸತ್ಗೆ ಕಳಿಸಬೇಕೆಂಬ ಉದ್ದೇಶದಿಂದ ಟಿಕೇಟ್ ನೀಡಲಾಗಿದೆ. ಅವರನ್ನು ಆಶಿರ್ವದಿಸಿ ಎಂದರು. ಮಾದಿಗರಿಗೆ ಒಳ ಮೀಸಲಾತಿ ನೀಡುತ್ತೇವೆ ಎಂದು ಹೇಳುವ ಮೋದಿಯವರು ಹತ್ತು ವರ್ಷ ಏಕೆ ನೀಡಲಿಲ್ಲ? ಇದೊಂದು ಚುನಾವಣಾ ಗಿಮಿಕ್ ಎಂದರಲ್ಲದೆ ನುಡಿದಂತೆ ನಡೆಯುವ ಸರ್ಕಾರ ಕಾಂಗ್ರೆಸ್ ಒಂದೆ. ಗ್ಯಾರಂಟಿ ಸ್ಥಿರವಾಗಿ ಜಾರಿಗೆ ತಂದು ಜನಪರ ಜೀವಪರವಾಗಿ ಸರ್ಕಾರ ನಡೆಸುತಿದ್ದೇವೆ.ಸಾಲಮನ್ನಾ, ಬಿಪಿಎಲ್ ಕಾರ್ಡ್ ಇರುವ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ಹಣ ನೀಡುವುದು, ಉದ್ಯೋಗ ಭರ್ತಿ ಸೇರಿ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸಿಕೊಡುವ ಪ್ರಯತ್ನ ಮಾಡುತಿದ್ದೇವೆ ಎಂದು ಮುನಿಯಪ್ಪ ತಿಳಿಸಿದರು. ರಾಜ್ಯದಲ್ಲಿ 28 ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಇದೆ ಎಂದು ತಿಳಿಸಿದರು.