ಕನ್ನಡಪ್ರಭ ವಾರ್ತೆ ಕೊಪ್ಪಳ
ಲೋಕಸಭಾ ಚುನಾವಣಾ ನಿಮಿತ್ತ ತಾಲೂಕಿನ ವಿಧಾನಸಭಾ ಕ್ಷೇತ್ರದ ನವಲಿ, ಹುಲಿಹೈದರ್ ಮತ್ತು ಕನಕಗಿರಿ ಮಹಾಶಕ್ತಿ ಕೇಂದ್ರದಲ್ಲಿ ಚುನಾವಣಾ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಳೆದ ಹತ್ತು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಆಂತರಿಕ, ಬಾಹ್ಯ ರಕ್ಷಣಾ ವಿಷಯದಲ್ಲಿ ರಾಜಿಯಾಗದೆ ಅತ್ಯುತ್ತಮ ರೀತಿಯಲ್ಲಿ ಕೆಲಸ ಮಾಡಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಜಾತಿ, ಧರ್ಮ ವಿಷಯಗಳಿಗೆ ಅಂಟಿಕೊಳ್ಳದೆ ಅನೇಕ ಅಭಿವೃದ್ಧಿಶೀಲ ಯೋಜನೆಗಳನ್ನು ಜಾರಿ ಮಾಡಿ ದೇಶದ ಜನತೆಯಲ್ಲಿ ಅಭಿವೃದ್ಧಿಯ ಅರ್ಥವನ್ನು ಮನದಟ್ಟು ಮಾಡಿದ್ದಾರೆ ಎಂದರು.ಯುಪಿಎ ಸರ್ಕಾರದ ನಂತರ ಅಧಿಕಾರಕ್ಕೇರಿದ ಕೇಂದ್ರ ಸರ್ಕಾರದ ಆಡಳಿತದಿಂದ ಇಂದು ಜಗತ್ತಿನ ಅನೇಕ ಸಮಸ್ಯೆಗಳಿಗೆ ಭಾರತವು ಪರಿಹಾರವಾಗಿ ನಿಂತುಕೊಂಡಿದೆ. ದೇಶದೇಶಗಳ ನಡುವೆ ಯುದ್ಧೋನ್ಮಾನ ಸಂದರ್ಭದಲ್ಲಿ ಸಂಧಾನಕಾರನಾಗಿ ಭಾಗವಹಿಸಿ, ಜಗತ್ತಿನ ಶಾಂತಿಯ ಜೊತೆಗೆ ಭಾರತ ದೇಶದ ತಾಕತ್ತು ಎಂತಹದು ಎಂದು ನರೇಂದ್ರ ಮೋದಿಯವರ ಆಡಳಿತದ ಕಾರ್ಯವೈಖರಿ ತೋರಿಸಿಕೊಟ್ಟಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಬಸವರಾಜ್ ದಢೇಸೂಗುರು ಮಾತನಾಡಿ, ಸಂಪೂರ್ಣ ವ್ಯಾಪ್ತಿಯ ಕೊಪ್ಪಳ ಲೋಕಸಭಾ ಕ್ಷೇತ್ರವನ್ನು ಅಭಿವೃದ್ದಿ ಕೆಲಸಗಳ ಆಲೋಚನೆಗಳೊಂದಿಗೆ ಮೇಲ್ದರ್ಜೆಗೆರಿಸಲು ಈ ಬಾರಿ ಡಾ. ಬಸವರಾಜ್ ಕ್ಯಾವಟರ್ ಅವರನ್ನು ಗೆಲ್ಲಿಸಿ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲು ಒಂದೊಂದು ಮತವು ಅಗತ್ಯ ಎಂದರು.
ಇದೇ ಸಂದರ್ಭದಲ್ಲಿ ಕನಕಗಿರಿ ಮಂಡಲ ಅಧ್ಯಕ್ಷ ಜಡಿಯಪ್ಪ ಮುಕ್ಕುಂದಿ, ಮಾಜಿ ಸಂಸದ ಶಿವರಾಮೇಗೌಡ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್, ವಿರುಪಾಕ್ಷಪ್ಪ ಸಿಂಗನಾಳ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಮೇಶ ನಾಡಗೇರ, ಜೆಡಿಎಸ್ ಮುಖಂಡ ರಾಜ ನಾಯಕ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಅಮರೇಶ ಕುಳಗಿ, ವಾಗೇಶ ಹಿರೇಮಠ, ಶಿವಶರಣೇಗೌಡ ಹಾಗೂ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. 8ಕೆಪಿಎಲ್27 ಕನಕಗಿರಿಯಲ್ಲಿ ಬಿಜೆಪಿ ಪ್ರಚಾರ ಸಭೆ