ಹರಪನಹಳ್ಳಿ: ಈ ದೇಶದ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಬೇಕು. ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರಗೆ ಮತ ಹಾಕಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತದಾರರಲ್ಲಿ ಮನವಿ ಮಾಡಿದರು.
ಈ ದೇಶದ ಕೀಲಿ ಕೈಯನ್ನು ಯಾರ ಕೈಯಲ್ಲಿ ಕೊಡಬೇಕು ಎಂದು ಪ್ರಶ್ನಿಸಿದ ಅವರು, ಮೋದಿ ಎದುರಾಳಿ ಯಾರು ಎಂಬುದು ನಮ್ಮ ಕಣ್ಮುಂದೆ ಕಾಣುತ್ತಿಲ್ಲ. ಆದರೆ ನಮ್ಮ ನಾಯಕ ಮೋದಿ ಎಂದು ಹೇಳಿದರು.
ಬಡವರ, ದೇಶದ ರೈತರ ಉಳಿವಿಗಾಗಿ ಹಾಗೂ ವಿದೇಶದಲ್ಲಿ ಭಾರತಕ್ಕೆ ಗೌರವ ಸಿಗಬೇಕಾದರೆ ಮೋದಿ ಅಗತ್ಯ ಎಂದು ತಿಳಿಸಿದರು.ಸೈನಿಕನ ಕೈಗೆ ಆಧುನಿಕ ಶಸ್ತ್ರಾಸ್ತ್ರ ಕೊಟ್ಟವರು ಮೋದಿ. ಬೂತ್ ಮಟ್ಟದಲ್ಲಿ ಮೋದಿ ಏಕೆ ಬೇಕು ಎಂಬುದನ್ನು ಮನವರಿಕೆ ಮಾಡಿ ಬಿಜೆಪಿಗೆ ಮತ ಹಾಕಿಸಿ ಎಂದು ಅವರು ಕೋರಿದರು.
ಈಗ ಕಳೆದಿರುವ 10 ವರ್ಷ ಟ್ರೈಯಲ್ ಮುಂದೆ ಅಸಲಿ ಕತೆ ಇದೆ ಎಂದು ಮೋದಿ ಹೇಳಿದ್ದಾರೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಮತ ಹಾಕಿ ಎಂದು ಹೇಳಿದರು.
ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮಾತನಾಡಿ, ವಿಕಸಿತ ಭಾರತಕ್ಕಾಗಿ ಹಾಗೂ ಸೇವಕನಾಗಿ ಕೆಲಸ ಮಾಡುವ ವ್ಯಕ್ತಿ ಮೋದಿ. ಹೆಣ್ಣು ಮಕ್ಕಳ ರಕ್ಷಣೆಗಾಗಿ, ರೈತರ ಏಳಿಗೆಗಾಗಿ ಉತ್ತಮ ನಾಯಕನಿಗಾಗಿ ನನಗೆ ಮತ ಹಾಕಿ ಗೆಲ್ಲಿಸಿ ಎಂದು ಕೋರಿದರು.ಹರಿಹರ ವೃತ್ತದಿಂದ ಹೊಸ ಬಸ್ ನಿಲ್ದಾಣ, ತೆಗ್ಗಿನಮಠ ರಸ್ತೆ ಹಾಗೂ ಕೊಟ್ಟೂರು ರಸ್ತೆಯಲ್ಲಿ ಶೋಭಾ ಕರಂದ್ಲಾಜೆ ರೋಡ್ ಶೋ ನಡೆಸಿದರು.
ಬಿಜೆಪಿ ಮುಖಂಡ ಆರ್.ಲೋಕೇಶ, ಪುರಸಭಾ ಸದಸ್ಯರಾದ ರೊಕ್ಕಪ್ಪ, ಕಿರಣ್ ಶಾನ್ಬಾಗ್, ಜಾವೇದ್, ವಿನಾಯಕ ಗೌಳಿ, ಸುಮಾ ವಾಗೀಶ, ತಾರಾ ಹನುಮಂತಪ್ಪ, ಶಿರಗಾನಹಳ್ಳಿ ವಿಶ್ವನಾಥ, ವಿಷ್ಣುರೆಡ್ಡಿ, ಮಾಜಿ ಸದಸ್ಯೆ ವಿಜಯಲಕ್ಷ್ಮಿ, ತಿಮ್ಮಣ್ಣ, ಮಲ್ಲೇಶ, ಯಡಿಹಳ್ಳಿ ಶೇಖರಪ್ಪ, ಮತ್ತಿತರರು ಪಾಲ್ಗೊಂಡಿದ್ದರು.