ಮೋದಿ ಈ ದೇಶದ ಸಂಪತ್ತು: ಸೋಮಣ್ಣ

KannadaprabhaNewsNetwork |  
Published : Sep 18, 2024, 02:02 AM IST
ಮೋದಿ ಈ ದೇಶದ ಸಂಪತ್ತು- ಸೋಮಣ್ಣ | Kannada Prabha

ಸಾರಾಂಶ

ಮೋದಿ ಈ ದೇಶದ ಸಂಪತ್ತು: ಕೇಂದ್ರ ಸಚಿವ ಸೋಮಣ್ಣ

ಕನ್ನಡಪ್ರಭ ವಾರ್ತೆ, ತುಮಕೂರುಪ್ರಧಾನಿ ನರೇಂದ್ರ ಮೋದಿಯವರು ಈ ದೇಶದ ಸಂಪತ್ತು ಅವರ ಆಡಳಿತದಲ್ಲಿ ದೇಶ ಸರಿಯಾದ ದಾರಿಯಲ್ಲಿ ಸಾಗುತ್ತಿದೆ. ಮೋದಿಯವರ ಅಭಿವೃದ್ಧಿ ಚಿಂತನೆಗಳು, ದೂರದೃಷ್ಟಿತ್ವ ರಾಷ್ಟ್ರದ ಪ್ರಗತಿಗೆ ಪೂರಕವಾಗಿವೆ. ಅವರ ಹುಟ್ಟು ಹಬ್ಬವನ್ನು ದೇಶದ ಹಬ್ಬವಾಗಿ ಆಚರಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.ಪ್ರಧಾನಿ ನರೇಂದ್ರ ಮೋದಿಯವರ 74ನೇ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಬಿಜೆಪಿಯಿಂದ ಮಂಗಳವಾರ ಸಂಸದರ ಕಾರ್ಯಾಲಯದಲ್ಲಿ ಏರ್ಪಾಟಾಗಿದ್ದ ವಿವಿಧ ಸೇವಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಸಚಿವ ವಿ.ಸೋಮಣ್ಣ, ಮೋದಿಯವರು ಈ ದೇಶಕ್ಕೆ ನೀಡಿದ ಕೊಡುಗೆ, ದೇಶದ ಅಭಿವೃದ್ಧಿಗೆ ಅವರ ಚಿಂತನೆಗಳು, ದೂರದೃಷ್ಟಿ ನೋಟವನ್ನು ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಉದ್ದೇಶದಿಂದ ಮೋದಿಯವರು ನಡೆದು ಬಂದ ದಾರಿ ಕುರಿತ ಪುಸ್ತಕವನ್ನು ಕನ್ನಡದಲ್ಲಿ ಹೊರತರಲು ಉದ್ದೇಶಿಸಲಾಗಿದೆ. ಈ ಸಂಬಂಧ ಹಿರಿಯ ಸಾಹಿತಿಗಳೊಂದಿಗೆ ಚರ್ಚಿಸಿದ್ದೇನೆ, ನೀವು ಕಂಡಂತೆ ಮೋದಿಯವರ ಆದರ್ಶ ಕುರಿತು ಲೇಖನಗಳನ್ನು ನೀವೂ ಬರೆಯಬಹುದು, 3-4 ತಿಂಗಳಲ್ಲಿ ಪುಸ್ತಕ ಸಿದ್ಧಪಡಿಸಿ ಲೋಕಾರ್ಪಣೆ ಮಾಡಲಾಗುವುದು ಎಂದರು.5 ಪಂಚಾಯ್ತಿ ದತ್ತು ಸ್ವೀಕಾರದೇಶದ ಪ್ರತಿಯೊಬ್ಬರಿಗೂ ಮೂಲಭೂತ ಅವಶ್ಯಕತೆಗಳನ್ನು ಕೊಡುವುದು ಸರ್ಕಾರದ ಕರ್ತವ್ಯ ಎಂದು ನಂಬಿರುವ ಮೋದಿಯರು ಈ ದೇಶದ ಅಭಿವೃದ್ಧಿ ಹರಿಕಾರ. ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು, ಚರಂಡಿ, ಅಂಗನವಾಡಿ, ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲು ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ. ಇದೇ ಪ್ರೇರಣೆಯಿಂದ ತಾವು ತುಮಕೂರು ನಗರ ಸುತ್ತಲಿನ ಐದು ಗ್ರಾಮ ಪಂಚಾಯ್ತಿಗಳನ್ನು ದತ್ತು ಪಡೆದಿದ್ದು, ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ಬೆಳಗುಂಬ, ಸ್ವಾಂದೇನಹಳ್ಳಿ, ಗೂಳೂರು, ಹೆಗ್ಗೆರೆ, ಹೆತ್ತೇನಹಳ್ಳಿ ಗ್ರಾಮ ಪಂಚಾಯ್ತಿಗಳನ್ನು ದತ್ತು ಪಡೆದಿರುವುದಾಗಿ ಸಚಿವ ವಿ.ಸೋಮಣ್ಣ ಪ್ರಕಟಿಸಿದರು.ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು 2024 ರಲ್ಲಿ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ದೇಶದ ಸುಭದ್ರತೆಗೆ ಎಚ್ಚರವಹಿಸಿ ೧೪೦ ಕೊಟಿ ಜನರ ಭದ್ರತೆ ಮೂಡಿಸಿ ವಿಶ್ವದಲ್ಲೇ ಅಗ್ರ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಇಂತಹ ಮಹಾನ್ ನಾಯಕರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದಲ್ಲಿ ಸ್ವಚ್ಛತೆ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣೆ ಸೇರಿ ವಿವಿಧ ಸೇವಾ ಕಾರ್ಯಕ್ರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.ನಗರ ಪಾಲಿಕೆ ಆಯುಕ್ತೆ ಬಿ.ವಿಅಶ್ವಿಜ ಮಾತನಾಡಿದರು. ಇದೇ ವೇಳೆ ನಗರದ ಸಿದ್ಧರಾಮೇಶ್ವರ ಬಡಾವಣೆಯಲ್ಲಿ ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಸಚಿವ ಸೋಮಣ್ಣನವರ ಅಧ್ಯಕ್ಷತೆಯಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರ ನೇತೃತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ೭೪ ಗಿಡ ನೆಡಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಮುಖಂಡರಾದ ಎಸ್.ಪಿ.ಚಿದಾನಂದ್, ಎಸ್.ಶಿವಪ್ರಸಾದ್, ಡಾ.ಪರಮೇಶ್ ಮೊದಲಾದವರು ಭಾಗವಹಿಸಿದ್ದರು.ಕೇಂದ್ರ ಸಚಿವ ವಿ.ಸೋಮಣ್ಣ ಅವರ ಕಾರ್ಯಾಲಯ ಆವರಣದಲ್ಲಿ ಮೋದಿಯವರ ಜನ್ಮದಿನಾಚರಣೆ ಪ್ರಯುಕ್ತ ಸಿದ್ಧಗಂಗಾ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ನೇತ್ರ ತಪಾಸಣೆ, ಉಚಿತವಾಗಿ ಕನ್ನಡಕ ವಿತರಣೆ ಕಾರ್ಯಕ್ರಮ ವ್ಯವಸ್ಥೆಯಾಗಿತ್ತು. ಇದೇ ಸಂದರ್ಭದಲ್ಲಿ ನಗರಪಾಲಿಕೆ ಇ ಟಾಯ್ಲೆಟ್ ಅನ್ನು ಸಚಿವ ಸೋಮಣ್ಣ ಲೋಕಾರ್ಪಣೆ ಮಾಡಿದರು. ಹಸಿ ಕಸ, ಒಣ ಕಸ ಬೇರ್ಪಡಿಸಿ ನೀಡಲು ಪಾಲಿಕೆಯಿಂದ ನಾಗರೀಕರಿಗೆ ಡಸ್ಟ್ ಬಿನ್ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''