ದೇಶದ ಸುರಕ್ಷತೆಗೆ ಮೋದಿ ಬಹಳ ಮುಖ್ಯ

KannadaprabhaNewsNetwork |  
Published : May 04, 2024, 12:34 AM IST
ಅಂಗಡಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಮತಯಾಚನೆ ಮಾಡಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿಭಾರತ ದೇಶವನ್ನು ಸೂಪರ್ ಪವರ್ ಮಾಡಲು ಹಾಗೂ ದೇಶದ ಸುರಕ್ಷತೆಗೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವುದು ಬಹಳ ಮುಖ್ಯ ಇದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಭಾರತ ದೇಶವನ್ನು ಸೂಪರ್ ಪವರ್ ಮಾಡಲು ಹಾಗೂ ದೇಶದ ಸುರಕ್ಷತೆಗೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವುದು ಬಹಳ ಮುಖ್ಯ ಇದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಅಂಗಡಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೆಜ್‌ಮೆಂಟ್‌ ಕಾಲೇಜಿನ ಸಭಾ ಭವನದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ‌ನಡೆಸಿ ಮಾತನಾಡಿದ ಅವರು, ಒಂದು ದೇಶದ ಪ್ರಗತಿಗೆ ಆ ದೇಶದ ಆರ್ಥಿಕತೆ ಬಹಳ ಮುಖ್ಯ ಆಗುತ್ತದೆ‌. ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳು ಆರ್ಥಿಕ ಪ್ರಗತಿ ಹೊಂದಿದರಿಂದ ಆ ದೇಶಗಳಿಗೆ ಉನ್ನತ ‌ಸ್ಥಾನ ಇದೆ. ಪ್ರಧಾನಿ ಮೋದಿಯವರು ದೇಶದಲ್ಲಿ ಉತ್ತಮವಾದ ಆರ್ಥಿಕ ನೀತಿ ಜಾರಿಗೆ ತಂದು ದೇಶವನ್ನು ಅಭಿವೃದ್ಧಿ ಮಾಡಿದರು. ಅಕ್ಕ-ಪಕ್ಕದ ರಾಷ್ಟ್ರಗಳು ಆರ್ಥಿಕವಾಗಿ ದಿವಾಳಿ ಆಗಿದೆ. ಆದರೆ, ಭಾರತ ಆರ್ಥಿಕವಾಗಿ ಬೆಳೆದಿದೆ ಎಂದರೇ ಅದಕ್ಕೆ ಮೋದಿಯವರು ಕಾರಣ ಎಂದು ಬಣ್ಣಿಸಿದರು.

ಮೋದಿಯವರು 2014 ರಲ್ಲಿ ಪ್ರಧಾನಿ ಆದಾಗ ಭಾರತದ ಆರ್ಥಿಕವಾಗಿ 14ನೇ ಸ್ಥಾನದಲ್ಲಿತ್ತು. ಆದರೆ, ಕೇವಲ 10 ವರ್ಷದಲ್ಲಿ ದೇಶದ ಆರ್ಥಿಕತೆ 5ನೇ ಸ್ಥಾನಕ್ಕೆ ತಂದಿದ್ದಾರೆ. ಮೋದಿಯವರು ಮತ್ತೆ ಪ್ರಧಾನಿಯಾದರೇ ದೇಶದ ಆರ್ಥಿಕತೆ 3ನೇ ಸ್ಥಾನಕ್ಕೆ ಬರಲಿದೆ. ಇನ್ನೂ 10-15 ವರ್ಷದಲ್ಲಿ ದೇಶ ಸೂಪರ್ ಪವರ್ ಆಗಿ ಆರ್ಥಿಕವಾಗಿ ನಂ.1 ಆಗಲಿದೆ.‌ ಹಾಗಾಗಿ ಮೋದಿಯವರು ದೇಶದ ಸುರಕ್ಷತೆಗೆ ಬಹಳ ಅವಶ್ಯಕತೆ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದೆ ಮಂಗಲ ಸುರೇಶ ಅಂಗಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಪ್ರಮುಖರಾದ ಶಿಲ್ಪಾ ಶೆಟ್ಟರ್, ಶ್ರದ್ಧಾ ಶೆಟ್ಟರ್, ರಾಜು ಜೋಶಿ, ಡಾ.ಕಿರಣ ಪೋತದಾರ, ಸಂಗೀತಾ ದೇಸಾಯಿ, ಬಿ.ಎಂ.ಪಾಟೀಲ್, ಡಾ.ಧನಶ್ರೀ ಕುಲಕರ್ಣಿ, ಪ್ರಿಯಾಂಕಾ ಪೂಜಾರಿ, ಡಾ.ಕೃಷ್ಣಕುಮಾರ ಕಣ್ಣೈ, ಸಾಗರ ಬಿರ್ಜೆ, ರವಿರಾಜ ಚೌಗಲಾ, ವಿಶಾಲ ಪಾಟೀಲ, ಪ್ರಸಾದ, ಪಂಚಾಕ್ಷರಿಮಠ ಹಾಗೂ ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ