ಕನ್ನಡಪ್ರಭ ವಾರ್ತೆ ಹೊಸದುರ್ಗ
ಹೊಸದುರ್ಗದ ಟಿವಿ ವೃತ್ತದಿಂದ ಮದಕರಿ ವೃತ್ತದವರೆಗೆ ಸಾಗಿದ ಬಿಜೆಪಿ ಕಾರ್ಯಕರ್ತರ ಮೆರವಣಿಗೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿಯವರ ಎರಡು ಬಾರಿ ಆಡಳಿತ ನೋಡಿದ ಮತದಾರ ಮೂರನೇ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮತ ಹಾಕಿದ್ದು ಈ ಬಾರಿ ನರೇಂದ್ರ ಮೋದಿಯವರು ರಾಷ್ಟ್ರೀಯ ವಿಚಾರದಲ್ಲಿ ಆಮೂಲಾಗ್ರ ಬದಲಾವಣೆ ತರಲಿದ್ದಾರೆ ಎಂದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ 8 ಜನ ಶಾಸಕರಲ್ಲಿ 7 ಜನ ಕಾಂಗ್ರೆಸ್ ಶಾಸಕರಿದ್ದರೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರಕ್ಕೆ ಬಿಜೆಪಿಗೆ ಈ ನಿಟ್ಟಿನ ಬೆಂಬಲವನ್ನು ನೀಡಿರುವುದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತದಾರರ ಪ್ರಬುದ್ಧತೆಯನ್ನು ಮೆರೆದಿದೆ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಒಗ್ಗಟ್ಟಿನ ಕೆಲಸವೇ ಈ ಗೆಲುವಿಗೆ ಕಾರಣ.ನರೇಂದ್ರ ಮೋದಿ ಹಾಗೂ ಸಜ್ಜನ ವ್ಯಕ್ತಿತ್ವದ ಗೋವಿಂದ ಕಾರಜೋಳರವರ ವ್ಯಕ್ತಿತ್ವವನ್ನು ಮೆಚ್ಚಿ ಈ ಬಾರಿ ಹೊಸದುರ್ಗದ ಮತದಾರ ಅತ್ಯಂತ ಹೆಚ್ಚು ಮತ ಹಾಕುವುದರ ಮೂಲಕ ಸಹಕರಿಸಿದ್ದಾರೆ ಎಂದರು.ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಗದೀಶ್ ಮಾತನಾಡಿ, ಬಸವಣ್ಣನ ನಾಡಿನಿಂದ ಬಂದು ಚಿತ್ರದುರ್ಗದ ಮದಕರಿ ನಾಡಿನಲ್ಲಿ ಕೆಲವೇ ದಿನಗಳಲ್ಲಿ ಚಿತ್ರದುರ್ಗದ ಮತದಾರರ ಪ್ರೀತಿ ವಿಶ್ವಾಸದಿಂದ ಮನಸ್ಸುಗಳನ್ನ ಗೆದ್ದು ಸಂಸದರಾಗಿದ್ದು ಕ್ಷೇತ್ರದ ಅಭಿವೃದ್ಧಿ ಮಾಡಲೆಂಬುದು ನಮ್ಮ ಆಶಯ ಎಂದರು.
ಈ ಸಮಯದಲ್ಲಿ ಬಿಜೆಪಿ ಎಸ್ ಸಿ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಗೂಳಿಹಟ್ಟಿ ಕೃಷ್ಣಮೂರ್ತಿ,. ಜೆ ಡಿ ಎಸ್ ಅಧ್ಯಕ್ಷ ಗಣೇಶ್, ಪುರಸಭಾ ಮಾಜಿ ಅಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ದಾಳಿಂಬೆ ಗಿರೀಶ್, ಕೆ, ಎಲ್ ನಾಗರಾಜ್, ಸರೋಜಮ್ಮ, ಮೀನಾಕ್ಷಿ ನಂದೀಶ್, ಪಾರ್ವತಮ್ಮ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಂಪ. ಮಾಜಿ ಜೀಪಂ ಸದಸ್ಯ ಆರ್ ಹನುಮಂತಪ್ಪ, ಬಿಜೆಪಿ ಉಪಾಧ್ಯಕ್ಷರಾದ ಲಿಂಗದೇವರು ಸಾ,ಚ ಮಂಜಯ್ಯ, ಜಿ ಎನ್ ಕೆರೆ ಪಚ್ಚಿ, ನರೇಂದ್ರ, ಮದುರೆ ಪ್ರವೀಣ್, ರವಿಕಿರಣ್ ಪಾಟೀಲ್, ಸಿದ್ದೇಶ್. ವಿರುಪಾಕ್ಷಪ್ಪ. ಮಾವಿನಕಟ್ಟೆ ಮಲ್ಲಿಕಾರ್ಜುನ್. ಸೇರಿದಂತೆ ನೂರಾರು ಕಾರ್ಯಕರ್ತರು ಜಯಘೋಷ ಕೋಗಿದರು.