ಕನ್ನಡಪ್ರಭ ವಾರ್ತೆ ಮಂಗಳೂರು
ಮೈಸೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಮೋದಿ, ನೇರವಾಗಿ ರಸ್ತೆ ಮಾರ್ಗದಲ್ಲಿ ಮಂಗಳೂರಿನ ಲೇಡಿಹಿಲ್ನ ನಾರಾಯಣಗುರು ವೃತ್ತಕ್ಕೆ ಆಗಮಿಸಿದರು. ಅಲ್ಲಿ ಬ್ರಹ್ಮಶ್ರೀ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಮಿಸಿದರು. ಈ ವೇಳೆ ಮೋದಿಗೆ ಪೇಟ, ರುದ್ರಾಕ್ಷಿ ಹಾರ ಹಾಕಿ, ಕೇಸರಿ ಬಣ್ಣದ ವಿಶಿಷ್ಟ ಜರಿಶಾಲು ಹೊದಿಸಿ, ಶ್ರೀಕೃಷ್ಣ ದೇವರ ಅಟ್ಟೆಯ ಪ್ರಭಾವಳಿಯ ವಿಶೇಷ ಉಡುಗೊರೆ ನೀಡಿ, ಗೌರವಿಸಲಾಯಿತು. ಬಳಿಕ ವಿಶೇಷ ವಾಹನ ಏರಿದ ಮೋದಿ, ನವಭಾರತ ವೃತ್ತದವರೆಗೆ ರೋಡ್ ಶೋ ನಡೆಸಿದರು. ಸುಮಾರು ಒಂದು ಗಂಟೆ ಕಾಲ ಎರಡು ಕಿ.ಮೀ. ದೂರ ರೋಡ್ ಶೋ ನಡೆಸಿ, ಕರಾವಳಿಯಲ್ಲಿ ಮೋದಿ ಹವಾ ಬೀಸಿದರು. ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಸಾಥ್ ನೀಡಿದರು.
ಈ ವೇಳೆ ನೆರೆದಿದ್ದ ಜನರು ಮೋದಿ ವಾಹನದ ಮೇಲೆ ಪುಷ್ಪವೃಷ್ಟಿ ಸುರಿಸಿದರು. ಇಕ್ಕೆಲಗಳಲ್ಲಿ ತಳಿರು ತೋರಣ, ಕೇಸರಿ ಪತಾಕೆ ಹಾಗೂ ಬಿಜೆಪಿ ಧ್ವಜ, ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿದ್ದ ಹಾದಿಯಲ್ಲಿ ರೋಡ್ ಶೋ ಸಾಗುತ್ತಿದ್ದಂತೆ ಕಾರ್ಯಕರ್ತರು, ಅಭಿಮಾನಿಗಳು ಮೋದಿ...ಮೋದಿ, ಜೈಶ್ರೀರಾಮ್, ಬಿಜೆಪಿಗೆ ಜೈ ಘೋಷಣೆಗಳನ್ನು ಕೂಗಿದರು. ದೂರದಿಂದಲೇ ಸೆಲ್ಫಿ ತೆಗೆಯಲು, ಮೋದಿ ಮೋಡಿಯ ಫೋಟೋ ಕ್ಲಿಕ್ಕಿಸಲು ಜನ ಹಾತೊರೆದರು. ರೋಡ್ಶೋ ಸಾಗುವ ಹಾದಿಯನ್ನು ಪುಷ್ಪ, ರಂಗವಲ್ಲಿಗಳಿಂದ ಅಲಂಕರಿಸಲಾಗಿತ್ತು. ಸುಮಾರು ಐದು ಕ್ವಿಂಟಾಲ್ ಹೂವಿನ ಎಸಳನ್ನು ಪುಷ್ಪವೃಷ್ಟಿಗೆ ಬಳಸಲಾಯಿತು.ಬ್ರಹ್ಮಶ್ರೀನಾರಾಯಣಗುರು ವೃತ್ತದಿಂದ ಆರಂಭವಾದ ಮೋದಿ ರೋಡ್ ಶೋ ಮಂಗಳೂರು ದಸರಾವನ್ನು ನೆನಪಿಸಿತು. ಮಂಗಳೂರು ದಸರಾ ವೇಳೆ ಮೆರವಣಿಗೆ ಅಬ್ಬರದಲ್ಲಿ ಸಾಗುವುದು ವಾಡಿಕೆ. ರೋಡ್ ಶೋ ಕೂಡ ರಾತ್ರಿ ವೇಳೆ ಅದೇ ಅಬ್ಬರದಲ್ಲಿ ಸಾಗಿದ್ದು ಗಮನಾರ್ಹವಾಗಿತ್ತು.20ಕ್ಕೆ ಮೋದಿ ಮತ್ತೆ ಈ ಚುನಾವಣೇಲಿ 2047ರವರೆಗಿನ ಭವಿಷ್ಯ: ಮೋದಿ
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಬಿಜೆಪಿ-ಜೆಡಿಎಸ್ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಈ ಚುನಾವಣೆ 2024 ರಿಂದ ಐದು ವರ್ಷಕ್ಕೆ ಅಂದುಕೊಳ್ಳಬೇಡಿ. 2047ರವರೆಗಿನ ಭಾರತದ ಭವಿಷ್ಯ ಇದರಲ್ಲಿ ಅಡಗಿದೆ. ಆದ್ದರಿಂದ ದೇಶದ ಅಭಿವೃದ್ಧಿಗೆ ನಿಮ್ಮ ಮತ ಅಮೂಲ್ಯ ಎಂದರು.ಇದು ನಿರ್ಣಯಕ ಚುನಾವಣೆ. ನಾವು ಸಂಕಲ್ಪ ಪತ್ರ ಬಿಡುಗಡೆಗೊಳಿಸಿದ್ದೇವೆ. ಇಡೀ ಕರ್ನಾಟಕ ಈ ಬಾರಿ ಮೋದಿ ಸರ್ಕಾರ ಎಂದು ಹೇಳುತ್ತಿದೆ. ನಮ್ಮ ಸಂಕಲ್ಪ ಪತ್ರವು ಮೋದಿ ಗ್ಯಾರಂಟಿಯನ್ನು ಹೊಂದಿದೆ. ಬಡವರಿಗೆ ಉಚಿತ ಪಡಿತರ, 3 ಕೋಟಿ ಮಹಿಳೆಯರನ್ನು ಲಕ್ಷಾಧಿಪತಿ ಮಾಡುವ ಯೋಜನೆ, ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ, 3 ಕೋಟಿ ಮನೆ ನಿರ್ಮಾಣದ ಗುರಿಯನ್ನು ನಾವು ಹೊಂದಿದ್ದೇವೆ ಎಂದರು.ಈ ಎಲ್ಲಾ ಯೋಜನೆಗಳು ಕರ್ನಾಟಕದ ಅರ್ಹರಿಗೂ ತಲುಪುತ್ತವೆ. ಬಡವರ ಜೀವನ ಮಟ್ಟ ಸುಧಾರಿಸಲಿದೆ. ಕಳೆದ 10 ವರ್ಷದ ಹಿಂದೆ ನಾವು ತಂತ್ರಜ್ಞಾನಕ್ಕಾಗಿ ಬೇರೆ ರಾಷ್ಟ್ರಗಳನ್ನು ಅವಲಂಬಿಸಿದ್ದೆವು. ಆದರೆ, ಈಗ ಚಂದ್ರಯಾನ ಸೇರಿದಂತೆ ಅನೇಕ ಸಾಧನೆಗಳ ಮೂಲಕ ಅವರೆಲ್ಲ ನಮ್ಮ ಕಡೆ ನೋಡುವಂತೆ ಮಾಡಿದ್ದೇವೆ. ಈಗ ನಿಮ್ಮ ಮತದ ಮೂಲಕ ಮೋದಿಗೆ ಮತ್ತಷ್ಟು ತಾಕತ್ತು ಬರಲಿದೆ ಎಂದರು.ನಮ್ಮ ಸರ್ಕಾರದ ಹತ್ತು ವರ್ಷದ ಆಡಳಿತದ ಅವಧಿಯಲ್ಲಿ ಕರ್ನಾಟಕದಲ್ಲಿ 4.5 ಲಕ್ಷ ಮಂದಿಗೆ ಮನೆ ದೊರಕಿದೆ, ಜಲ ಜೀವನ ಮಿಷನ್ ಯೋಜನೆಗೆ ಕೋಟ್ಯಂತರ ಹಣ ನೀಡಲಾಗಿದೆ. ಇದರಿಂದಾಗಿ ನೂರಾರು ಗ್ರಾಮಗಳು ಕುಡಿಯುವ ನೀರು ಪಡೆಯುತ್ತಿವೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಾಗಿದೆ. ವಂದೇ ಭಾರತ್ ರೈಲು ನೀಡಲಾಗಿದೆ ಎಂದರು.ಕರ್ನಾಟಕ ಸಮೃದ್ಧಿಯ ಕೇಂದ್ರ:ಕರ್ನಾಟಕ ಮಾಹಿತಿ ತಂತ್ರಜ್ಞಾನದ ಬಹುದೊಡ್ಡ ಶಕ್ತಿಯ ಕೇಂದ್ರ. ಈ ನೆಲ ಸಮೃದ್ಧಿಯ ಭಾಗ. ಮೈಸೂರು, ಹಂಪಿ, ಬಾದಾಮಿ ಮುಂತಾದ ನಗರಗಳು ಪಾರಂಪರಿಕ ನಗರವಾಗಿ ವಿಶ್ವ ಭೂಪಟದಲ್ಲಿ ತಮ್ಮ ಸ್ಥಾನ ಪಡೆದುಕೊಂಡಿವೆ. ಕನ್ನಡ ಭಾಷೆಯೂ ಸಮೃದ್ಧವಾಗಿದ್ದು, ಅದನ್ನು ವಿಶ್ವಮಟ್ಟದಲ್ಲಿ ಪ್ರಚಾರಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಕಾವೇರಿ, ಗೌಡರನ್ನು ಸ್ಮರಿಸಿದ ಮೋದಿ:
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಅಡ್ರೆಸ್ಗೆ ಇರುವುದಿಲ್ಲ: ಯಡಿಯೂರಪ್ಪಈ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನೀವು ಅಡ್ರೆಸ್ಗೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಬಿಜೆಪಿ-ಜೆಡಿಎಸ್ನ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರವನ್ನೂ ನಾವು ಗೆಲ್ಲಬೇಕು ಎಂಬ ಉದ್ದೇಶವಿದೆ. ಹಾಲು ಜೇನಿನಂತೆ ಬಿಜೆಪಿ-ಜೆಡಿಎಸ್ ಒಟ್ಟಾಗಿ ಕೆಲಸ ಮಾಡಲಿವೆ. ಜೆಡಿಎಸ್-ಬಿಜೆಪಿ ಮೈತ್ರಿಯನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಹಣ, ಅಧಿಕಾರ, ಹೆಂಡದ ಬಲದಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ನವರು ಉದ್ದೇಶಿಸಿದ್ದಾರೆ. ಆದರೆ, ಫಲಿತಾಂಶದ ಬಳಿಕ ನೀವು ಅಡ್ರೆಸ್ಗೆ ಇರುವುದಿಲ್ಲ ಎಂದು ಭವಿಷ್ಯ ನುಡಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಬಿಜೆಪಿ- ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಪಂಚರತ್ನ ಕಾರ್ಯಕ್ರಮ ಮಾಡಿದ ಬಳಿಕ ಉಚಿತ ಘೋಷಣೆ ಮಾಡಿ ಇಬ್ಬರು ಮಹಾನಾಯಕರು ಈಗ ಆಳುತ್ತಿರುವರು ಎಂದು ಛೇಡಿಸಿದರು.
ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಪ್ರಧಾನಿ ಸಮಾವೇಶ:ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳ 20ರಂದು ಮತ್ತೊಮ್ಮೆ ರಾಜ್ಯದಲ್ಲಿ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ.