ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಬಿವಿವಿ ಸಂಘದ ಮಿನಿಸಭಾಭವನದಲ್ಲಿ ಮಂಗಳವಾರ ನಡೆದ ಭಾರತೀಯ ಜನತಾ ಪಕ್ಷ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಲೋಕಸಭೆ ಚುನಾವಣೆ ನಿರ್ವಹಣೆ ಸಮಿತಿಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಪರ್ವ ಆರಂಭವಾಗಿದೆ. ಪ್ರಪಂಚದಲ್ಲಿ ಭಾರತದ ಹೆಸರು ಮುಂಚೂಣಿಯಲ್ಲಿದೆ. ಭಾರತ ವಿರೋಧಿ ಶಕ್ತಿಗಳನ್ನು ನಿಗ್ರಹಿಸಿ ಮೆಟ್ಟಿನಿಲ್ಲುವ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗಿದೆ. ಸದೃಢ ಸಮಗ್ರ ಭಾರತದ ನಿರ್ಮಾಣ ಬಿಜೆಪಿ ಹಾಗೂ ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ. ಈ ಬಾರಿಯ ಲೋಕಸಭೆ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಲೋಕಸಭೆ ಕ್ಷೇತ್ರದಲ್ಲಿ ವ್ಯಾಪ್ತಿಯ ಪ್ರತಿ ಮತಕ್ಷೇತ್ರದಲ್ಲೂ ಈಗಾಗಲೇ ಕೋರ್ ಕಮಿಟಿ ಹಾಗೂ ಪದಾಧಿಕಾರಿಗಳ ಸಭೆ ನಡೆದಿವೆ. ಪಕ್ಷ ನೀಡಿದ ಜವಾಬ್ದಾರಿಗಳನ್ನು ಕಾರ್ಯಕರ್ತರು ನಿರ್ವಹಿಸುವ ಮೂಲಕ ಚುನಾವಣೆಯಲ್ಲಿ ಹೆಚ್ಚಿನ ಮತದಾನ ಮಾಡಿಸಲು ಪ್ರಯತ್ನಿಸಬೇಕೆಂದರು.ಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ದೇಶದ ಸಮಗ್ರ ಅಭಿವೃದ್ಧಿಯ ನೀಲನಕ್ಷೆಯನ್ನು ಪ್ರಧಾನಿ ಮೋದಿ ಹೊಂದಿದ್ದಾರೆ. ಒಂದು ದೇಶ ಒಂದು ಚುನಾವಣೆ ಜಾರಿಯಾಗಬೇಕಿದೆ. ಇನ್ನೂ ಅನೇಕ ಅಭಿವೃದ್ಧಿಪರ ಯೋಜನೆಗಳ ಮೂಲಕ ಪ್ರಪಂಚದಲ್ಲೇ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪ ಮೋದಿಯವರದ್ದಾಗಿದೆ. ಹಿಗಾಗಿ ಮೋದಿಜಿಯವ ಕೈ ಬಲಪಡಿಸಲು ಈ ಚುನಾವಣೆ ನಮಗೆ ಸಿಕ್ಕ ಸದಾವಕಾಶವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಮುಖಂಡರಾದ ಜಿ.ಎನ್. ಪಾಟೀಲ, ಡಾ.ಎಂ.ಎಸ್. ದಡ್ಡೆನ್ನವರ, ಸಿ.ವಿ. ಕೋಟಿ, ಮಹಾಂತೇಶ ಶೆಟ್ಟರ, ಸಂಗಣ್ಣ ಕಲಾದಗಿ, ಬಸವರಾಜ ಯಂಕಂಚಿ, ರಾಜು ರೇವಣಕರ್, ಲಕ್ಷ್ಮೀ ನಾರಾಯಣ ಕಾಸಟ್, ಸತ್ಯನಾರಾಯಣ ಹೆಮಾದ್ರಿ, ಭಾಗೀರಥಿ ಪಾಟೀಲ, ಸುಜಾತಾ ತತ್ರಾಣಿ, ಜ್ಯೋತಿ ಭಜಂತ್ರಿ, ಸುಜಾತಾ ಶಿಂಧೆ, ಶಶಿಕಲಾ ಮಜ್ಜಿಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಟಿ. ಉಪಾಧ್ಯೆ, ರಾಜು ನಾಯ್ಕರ, ರಾಜು ಮುದೇನೂರ, ಸುರೇಶ ಕೊಣ್ಣೂರ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ, ಸಂಗಮೇಶ ಹಿತ್ತಲಮನಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು. ಸಭೆಗೂ ಮುಂಚೆ ಬಾಗಲಕೋಟೆ ವಿಧಾನಸಭಾ ಕಾರ್ಯಕಾರಿಣಿ ಸಭೆ ಜರುಗಿತು.