ಮದುವೆಗೆ ಆಹ್ವಾನ ನೀಡಿದ್ದ ಯುವ ದಂಪತಿಗೆ ಶುಭ ಹಾರೈಸಿದ ಮೋದಿ

KannadaprabhaNewsNetwork |  
Published : Apr 28, 2026, 01:45 AM IST
ಫೋಟೋ:27ಕೆಪಿಎಸ್ಎನ್ಡಿ7ಎ | Kannada Prabha

ಸಾರಾಂಶ

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ಯುವಕನೊಬ್ಬ ತನ್ನ ಮದುವೆಗೆ ಆಗಮಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ಪತ್ರಿಕೆ ಕಳುಹಿಸಿದ್ದ. ಆಹ್ವಾನ ಸ್ವೀಕರಿಸಿದ ಮೋದಿಯವರು, ಯುವ ದಂಪತಿಗೆ ಶುಭ ಹಾರೈಸಿ ಪತ್ರ ಬರೆದಿದ್ದಾರೆ.

ಕನ್ನಡಪ್ರಭ ವಾರ್ತೆ ಸಿಂಧನೂರು

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ಯುವಕನೊಬ್ಬ ತನ್ನ ಮದುವೆಗೆ ಆಗಮಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ಪತ್ರಿಕೆ ಕಳುಹಿಸಿದ್ದ. ಆಹ್ವಾನ ಸ್ವೀಕರಿಸಿದ ಮೋದಿಯವರು, ಯುವ ದಂಪತಿಗೆ ಶುಭ ಹಾರೈಸಿ ಪತ್ರ ಬರೆದಿದ್ದಾರೆ.

ಕಾನಿಹಾಳ ಗ್ರಾಮದ ರಾಜೇಶ್ ನಾಯಕ ಎಂಬುವರ ಮದುವೆ ಸವಿತಾ ಅವರೊಂದಿಗೆ ಏ.13ರಂದು ನಿಗದಿಯಾಗಿತ್ತು. ತಮ್ಮ ಮದುವೆಗೆ ಮೋದಿಯನ್ನು ಆಹ್ವಾನಿಸಿ, ರಾಜೇಶ್‌ ಅವರು ದೆಹಲಿಯ ಪ್ರಧಾನಿ ಕಚೇರಿಗೆ ಆಹ್ವಾನ ಪತ್ರಿಕೆಯನ್ನು ಕಳುಹಿಸಿದ್ದರು. ಈ ಆಹ್ವಾನ ಸ್ವೀಕರಿಸಿದ ಮೋದಿಯವರು, ಪತ್ರದ ಮೂಲಕ ನವಜೋಡಿಗೆ ಶುಭ ಹಾರೈಸಿದ್ದಾರೆ.

‘ನಿಮ್ಮ ವಿವಾಹ ಮಹೋತ್ಸವಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಜೀವನದ ಈ ಶುಭ ಸಂದರ್ಭಕ್ಕೆ ಕಾಲಿಡುತ್ತಿರುವ ನಿಮಗೆ ಮತ್ತು ಸವಿತಾ ಅವರ ಸುಂದರ ಭವಿಷ್ಯಕ್ಕಾಗಿ ಶುಭಾಶೀರ್ವಾದಗಳು’ ಎಂದು ಶುಭ ಹಾರೈಸಿದ್ದಾರೆ. ಮೋದಿಯವರ ಈ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದ ಯೋಜನೆ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ: ಭೀಮಣ್ಣ ನಾಯ್ಕ
ಅಕ್ಟೋಬರ್‌-ನವೆಂಬರ್‌ನಲ್ಲಿ ವುಮೆನ್ಸ್ ಪ್ರೋ ಮಿನಿ ಫುಟ್‌ಬಾಲ್ ಲೀಗ್‌