ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 14 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರಮೋದಿ ದೇಶದ ಪ್ರಧಾನಿಯಾಗಿ 11 ವರ್ಷಗಳಾಗಿದೆ. ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಎನ್ನುವ ತತ್ವದಡಿ ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದರಿಂದ ದೇಶ ಸರ್ವತೋಮುಖ ಅಭಿವೃದ್ಧಿಯತ್ತ ಸಾಗುತ್ತಿದೆ. ವಿರೋಧ ಪಕ್ಷದವರು ಟೀಕಿಸುವುದು ಸಹಜ. ಸತ್ಯ ಮರೆಮಾಚಿ ಆಪಾದನೆ ಮಾಡುತ್ತಿರುವುದನ್ನು ಯಾರು ಒಪ್ಪುವುದಿಲ್ಲ.
ರಾಜ್ಯ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ಹಗರಣದಲ್ಲಿ ಸಿಲುಕುತ್ತಿದೆ. ವಾಲ್ಮೀಕಿ ನಿಗಮ, ಮುಡಾ ಕೇಸ್ನಲ್ಲಿ 100 ಕೋಟಿ ರು. ಭ್ರಷ್ಟಾಚಾರ. ಈಗ ಆರ್ಸಿಬಿ ಕಪ್ ಗೆದ್ದಿದ್ದಕ್ಕಾಗಿ ತರಾತುರಿಯಲ್ಲಿ ಸಂಭ್ರಮಾಚರಣೆ ನಡೆಸಿದ್ದಕ್ಕೆ 11 ಮಂದಿ ಕಾಲ್ತುಳಿತದಲ್ಲಿ ಬಲಿಯಾಗಿದ್ದಾರೆ. ಇದಕ್ಕೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.ಕಾಲ್ತುಳಿತದಿಂದ 10 ಜನ ಬಲಿಯಾಗಿದ್ದಕ್ಕೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿರುವುದು ಯಾವ ನ್ಯಾಯ? ತಪ್ಪು ಮಾಡಿರುವುದು ಸರ್ಕಾರ. ಹೈಕಮಾಂಡ್ ಸಿದ್ದರಾಮಯ್ಯ, ಡಿ.ಕೆ.ಶಿ.ಯವರನ್ನು ದೆಹಲಿಗೆ ಕರೆಸಿಕೊಂಡು ಮರು ಜಾತಿಗಣತಿ ಮಾಡುವಂತೆ ಉಪಾಯ ಹೇಳಿಕೊಟ್ಟು ಜನರ ಗಮನವನ್ನು ಬೇರೆಡೆ ಸೆಳೆಯುವ ಕುತಂತ್ರ ಮಾಡುತ್ತಿದೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ನಿಕಟಪೂರ್ವ ಅಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಸಿದ್ದಾಪುರ, ರಾಂದಾಸ್, ಜೈಪಾಲಯ್ಯ, ಲೋಕೇಶ್, ನಾಗರಾಜ್, ವಕ್ತಾರ ನಾಗರಾಜ್ ಬೇದ್ರೆ ಹಾಜರಿದ್ದರು.