ಕುಂದಾಪುರ: ನವದೆಹಲಿಯ ಜಂತರ್ ಮಂತರ್ನಿಂದ ಸಂಸತ್ ಕಡೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆ ಎಂದು ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ ತೀವ್ರವಾಗಿ ಖಂಡಿಸಿದ್ದಾರೆ.
ಪ್ರತಿಭಟನಾಕಾರರು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಅವರೊಂದಿಗೆ ಸಂವಾದ ನಡೆಸುವ ಬದಲು ಲಾಠಿ ಚಾರ್ಜ್ ನಡೆಸಿರುವುದು ಕೇಂದ್ರ ಸರ್ಕಾರದ ಅಸಹಿಷ್ಣು ಮನೋಭಾವವನ್ನು ಬಯಲಿಗೆಳೆಯುತ್ತದೆ ಎಂದು ಅವರು ಆರೋಪಿಸಿದರು.