ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಸಹಾಯಕ ಚುನಾವಣಾಧಿಕಾರಿಗಳು, ಆದಾಯ ತೆರಿಗೆ ಅಧಿಕಾರಿಗಳು, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಉದ್ದೇಶಿಸಿ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿವಿಟಿ ಹಾಗೂ ಇನ್ನಿತರ ತಂಡಗಳು ಜವಾಬ್ದಾರಿಯುತವಾಗಿ ಕೆಲಸ ನಡೆಸಿ ಅಭ್ಯರ್ಥಿಯು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ನಿಗಾವಹಿಸುವಂತೆ ತಿಳಿಸಿದರು.ಒಬ್ಬ ವ್ಯಕ್ತಿ ಅನೇಕ ಬ್ಯಾಂಕ್ ಖಾತೆಗೆ ಹಣ ತುಂಬುವುದು, ಅತಿ ಹೆಚ್ಚು ಬ್ಯಾಂಕ್ ವಹಿವಾಟು ನಡೆಸುವ ವ್ಯಕ್ತಿ ಮತ್ತು ಬ್ಯಾಂಕ್ನಲ್ಲಿ ಅನೇಕ ಬಾರಿ ಹಣ ಡ್ರಾ ಮಾಡುವವರ ಮೇಲೆ ನಿಗಾ ವಹಿಸಬೇಕು. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬ್ಯಾಂಕ್ ವಹಿವಾಟು ಮಾಡುವವರ ವಿವರಗಳನ್ನು ಪರಿಶೀಲಿಸಬೇಕು ಹಾಗೂ ಇವೆಲ್ಲವುಗಳ ವಿವರಗಳನ್ನು ವೆಚ್ಚ ವೀಕ್ಷಕರಿಗೆ ಸಲ್ಲಿಸಬೇಕು ಎಂದರು.
ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಕಾರ್ಯಾಚರಣೆ ವೇಳೆ ಇದುವರೆಗೂ 439 ಪ್ರಕರಣಗಳು ದಾಖಲಾಗಿದ್ದು, 1,47,46,920 ರು.ಮೌಲ್ಯದ 44033 ಲೀ ಭಾರತೀಯ ಮದ್ಯ ಮತ್ತು 205 ಲೀ. ಬಿಯರ್ ಹಾಗೂ 70.00 ಲಕ್ಷ ರು.ಬೆಲೆಯ 40 ವಿವಿಧ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲಿಸಲಾಗಿದೆ. ವಶಪಡಿಸಿಕೊಂಡಿರುವ ವಾಹನಗಳ ಹಿನ್ನೆಲೆಯಲ್ಲಿ ಪರಿಶೀಲಿಸುವಂತೆ ತಿಳಿಸಿದರು.
ವೆಚ್ಚ ವೀಕ್ಷಕರಾದ ಜಯರಾಘವನ್, ಜೀತೇಂದ್ರ ಸಿಂಗ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ ರೆಡ್ಡಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಬಿನೋಯ್ ಉಪಸ್ಥಿತರಿದ್ದರು.
ರಾಮನಗರ: ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಜಾರಿಗೊಳಿಸಿದ್ದು, ಏ. 8ರ ಬೆಳಿಗ್ಗೆ 9 ಗಂಟೆಯವರೆಗೆ ಒಟ್ಟು 95.25ಲೀ. ಮದ್ಯ ಜಿಲ್ಲೆಯ ವಿವಿಧ ಚೆಕ್ಪೋಸ್ಟ್ ಗಳಲ್ಲಿ ತಪಾಸಣೆ ವೇಳೆ ವಶಕ್ಕೆ ಪಡೆಯಲಾಗಿದೆ. ಅಬಕಾರಿ ಇಲಾಖೆ ಕಾರ್ಯಾಚರಣೆ ವೇಳೆ 33,209 ರು. ಮೌಲ್ಯದ 95.25 ಲೀ ಮದ್ಯ ಹಾಗೂ 3 ವಿವಿಧ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲಿಸಲಾಗಿದೆ.